Homeಸಿನಿಮಾಕ್ರೀಡೆIPL ಪಂದ್ಯದಲ್ಲಿ ಮಂಡಿಯೂರಿ 'Black Lives Matter' ಚಳವಳಿಗೆ ಐಕ್ಯಮತ್ಯ ಸಾರಿದ ಹಾರ್ದಿಕ್ ಪಾಂಡ್ಯ!

IPL ಪಂದ್ಯದಲ್ಲಿ ಮಂಡಿಯೂರಿ ‘Black Lives Matter’ ಚಳವಳಿಗೆ ಐಕ್ಯಮತ್ಯ ಸಾರಿದ ಹಾರ್ದಿಕ್ ಪಾಂಡ್ಯ!

21 ಎಸೆತಗಳಲ್ಲಿ 60 ರನ್ ಗಳಿಸಿದ ಅವರು ಪಂದ್ಯದ ನಂತರ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಮಂಡಿಯೂರಿ ಕುಳಿತ ಫೋಟೊ ಹಾಕಿ Black Lives Matter ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಐಪಿಎಲ್ ಇತಿಹಾಸದಲ್ಲಿಯೇ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ, ಪಂದ್ಯದ ನಡುವೆ ಮಂಡಿಯೂರಿ ‘Black Lives Matter’ ಚಳವಳಿಗೆ ಐಕ್ಯಮತ್ಯ ಸೂಚಿಸಿ ಗಮನ ಸೆಳೆದಿದ್ದಾರೆ. ನಿನ್ನೆ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆದ ಪಂದ್ಯದಲ್ಲಿ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಪಾಂಡ್ಯ 19ನೇ ಓವರ್‌ನಲ್ಲಿ ಅರ್ಧಶತಕ ಗಳಿಸಿದ ವೇಳೆ ಮಂಡಿಯೂರಿ ಜನಾಂಗೀಯವಾದದ ವಿರುದ್ಧ ನಡೆಯುತ್ತಿರುವ ಚಳವಳಿಗೆ ಬೆಂಬಲ ಘೋ‍ಷಿಸಿದ್ದಾರೆ.

27 ವರ್ಷದ ಹಾರ್ದಿಕ್ ಕೇವಲ 21 ಎಸೆತಗಳಲ್ಲಿ 60 ರನ್ ಗಳಿಸಿ ಮುಂಬೈ ಸವಾಲಿನ ಮೊತ್ತ ಪೇರಿಸಲು ಸಹಾಯ ಮಾಡಿದರು. 2 ಫೋರ್ ಮತ್ತು 6 ಸಿಕ್ಸ್‌ಗಳನ್ನು ಸಿಡಿಸಿದ ಅವರು ಪಂದ್ಯದ ನಂತರ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಮಂಡಿಯೂರಿ ಕುಳಿತ ಫೋಟೊ ಹಾಕಿ Black Lives Matter ಎಂದು ಬರೆದುಕೊಂಡಿದ್ದಾರೆ.

ಅಮೆರಿಕದಲ್ಲಿ 2020ರ ಮೇ ತಿಂಗಳಿನಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ, ಅಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿತ್ತು. ತದನಂತರ ಜನಾಂಗೀಯವಾದದ ವಿರುದ್ಧ ಅಮೆರಿಕ ಸೇರಿದಂತೆ ಪ್ರಪಂಚದಾದ್ಯಂತ Black Lives Matter ಹೆಸರಿನಲ್ಲಿ ಪ್ರತಿಭಟನೆಗಳು ಸಿಡಿದು, ದೊಡ್ಡ ಹೋರಾಟಕ್ಕೆ ನಾಂದಿಯಾಡಿದ್ದರು. ಆ ಸಂದರ್ಭದಲ್ಲಿ ಮಿನ್ನಿಯಾಪೊಲಿಸ್‌ನ ಪೊಲೀಸರು ಮಂಡಿಯೂರಿ ಕ್ಷಮೆಯಾಚಿಸಿದ್ದರು. ಅಂದಿನಿಂದ ಹಲವಾರು ಕ್ರೀಡಾತಾರೆಯರು ಮಂಡಿಯೂರುವ ಮೂಲಕ ಈ ಚಳವಳಿಗೆ ಬೆಂಬಲ ಘೋಷಿಸಿದ್ದರು.


ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...