Homeಸಿನಿಮಾಕ್ರೀಡೆRCB ಪ್ಲೇಆಫ್ ಭವಿಷ್ಯ ಮುಂಬೈ ಇಂಡಿಯನ್ಸ್ ಕೈಯಲ್ಲಿ: ಇಂದು ರೋಚಕ ಪಂದ್ಯ

RCB ಪ್ಲೇಆಫ್ ಭವಿಷ್ಯ ಮುಂಬೈ ಇಂಡಿಯನ್ಸ್ ಕೈಯಲ್ಲಿ: ಇಂದು ರೋಚಕ ಪಂದ್ಯ

- Advertisement -
- Advertisement -

RCB ತಂಡವು ಲೀಗ್ ಹಂತದ 14 ಪಂದ್ಯಗಳಲ್ಲಿ 8 ಅನ್ನು ಗೆಲ್ಲುವು ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಆದರೆ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಬೇಕಾದರೆ ಇಂದು ರಾತ್ರಿ ನಡೆಯುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಗೆಲ್ಲಬೇಕಿದೆ. ಅದಕ್ಕಾಗಿ RCB ಅಭಿಮಾನಿಗಳು ಮುಂಬೈ ಗೆಲುವಿಗಾಗಿ ಮತ್ತು ಡೆಲ್ಲಿ ಸೋಲಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಆರ್‌ಸಿಬಿ ತಂಡವೂ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಆದರೆ ಅದರ ನೆಟ್‌ ರನ್‌ ರೇಟ್ -253 ಇರುವುದು ಕಂಟಕವಾಗಿ ಪರಿಣಮಿಸಿದೆ. ಮುಂಬೈ ತಂಡ ಪ್ಲೇ ಆಫ್‌ನಿಂದ ಹೊರಹೋಗಿದ್ದು ಔಪಚಾರಿಕವಾಗಿ ತನ್ನ ಕೊನೆಯ ಪಂದ್ಯ ಎದುರಿಸುತ್ತಿದೆ. ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಆರ್‌ಸಿಬಿ ಬಯಕೆಯಂತೆ ಇಂದು ಮುಂಬೈ ಗೆದ್ದರೆ ಡೆಲ್ಲಿ ತಂಡ 14 ಅಂಕಗಳಿಗೆ ಸೀಮಿತವಾಗುವುದರಿಂದ ಅದು ಪ್ಲೇಆಫ್‌ ರೇಸ್‌ನಿಂದ ಹೊರಬೀಳುತ್ತದೆ. ಆರ್‌ಸಿಬಿ ತಂಡ ಪ್ಲೇ ಆಫ್‌ಗೇರುತ್ತದೆ.

ಇದನ್ನೂ ಓದಿ: ಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ ತಂಡಗಳು ಮೇ 24 ರಂದು ಮೊದಲ ಕ್ವಾಲಿಫೈಯರ್ ಪಂದ್ಯ ಎದುರಿಸಲಿವೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪುತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ನಾಲ್ಕನೇ ಸ್ಥಾನ ಪಡೆಯುವ ಡೆಲ್ಲಿ/ಆರ್‌ಸಿಬಿ ನಡುವೆ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...