Homeಸಿನಿಮಾಕ್ರೀಡೆIPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

IPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ.

- Advertisement -
- Advertisement -

ಶುಕ್ರವಾರ ರಾತ್ರಿ ನಡೆದ ಐಪಿಎಲ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು 7 ವಿಕೆಟ್ ಅಂತರದ ಸೋಲು ಕಂಡ RCB ತಂಡ ಟೂರ್ನಿಯಿಂದ ಹೊರಬಿದ್ದಿದೆ. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ‘ಈ ಸಲ ಕಪ್ ನಮ್ದೆ’ ಎನ್ನುವ ಕನಸನ್ನು ಕನಸಾಗಿಯೇ ಇಟ್ಟಿದೆ. ಆದರೆ ಪಂದ್ಯದ ನಂತರ ಸ್ಪಿನ್ ದಿಗ್ಗಜ ಶೇನ್ ವಾರ್ನ್ ನೆನೆದು RCB ಫ್ರಾಂಚೈಸಿ ಟ್ವೀಟ್ ಮಾಡುವ ಮೂಲಕ ಕ್ರಿಕೆಟ್ ಪ್ರಿಯರ ಮನಗೆದ್ದಿದೆ.

ಟಾಸ್‌ ಗೆದ್ದ ರಾಜಸ್ಥಾನ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ವೈಫಲ್ಯ ಕಂಡಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ರಜತ್ ಪಾಟಿದಾರ್ 42 ಎಸೆತೆಗಳಲ್ಲಿ 58 ರನ್ ಗಳಿಸಿದ್ದು ಬಿಟ್ಟರೆ ಉಳಿದ ಎಲ್ಲಾ ಬ್ಯಾಟ್ಸ್‌ಮನ್‌ಗಳು ನೀರಸ ಪ್ರದರ್ಶನ ನೀಡಿದರು. 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಸಾಧ್ಯವಾಯಿತು. ರಾಜಸ್ಥಾನ್ ತಂಡದ ಪರವಾಗಿ ಪ್ರಸಿದ್ದ್ ಕೃಷ್ಣ ಮತ್ತು ಒಬೆಡ್ ಮ್ಯಕೊಯ್ ತಲಾ ಮೂರು ವಿಕೆಟ್ ಗಳಿಸಿ ಮಿಂಚಿದರು.

ಆರ್‌ಸಿಬಿ ಎದರು ರಾಜಸ್ಥಾನ್ ರಾಯಲ್ಸ್ ತಂಡ ಸ್ಪೋಟಕ ಬ್ಯಾಟಿಂಗ್ ದಾಳಿ ಆರಂಭಿಸಿತು. ಜಾಸ್ ಬಟ್ಲರ್ 60 ಎಸೆತಗಳಲ್ಲಿ 106 ರನ್ ಚಚ್ಚುವ ಮೂಲಕ ಆರ್‌ಆರ್‌ ಸುಲಭವಾಗಿ ಗೆಲುವಿನ ದಡ ಸೇರಿತು. 7 ವಿಕೆಟ್‌ಗಳ ಅಧಿಕಾರಯುತ ಗೆಲುವಿನೊಂದಿಗೆ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಿತು.

ಪಂದ್ಯದ ಬಳಿಕ RCB ಫ್ರಾಂಚೈಸಿ ರಾಜಸ್ಥಾನ್ ತಂಡಕ್ಕೆ ಶುಭ ಹಾರೈಸಿ ಮಾಡಿದ ಟ್ವೀಟ್ ಎಲ್ಲೆಡೆ ಗಮನ ಸೆಳೆಯಿತು. “ಇಂದು ರಾತ್ರಿ ಚೆನ್ನಾಗಿ ಆಡಿದಿರಿ. ದಿವಂಗತ ದಿ ಗ್ರೇಟ್ ಶೇನ್ ವಾರ್ನ್ ನಿಮ್ಮನ್ನು ನೋಡಿ ಖುಷಿಪಡುತ್ತಿರುತ್ತಾರೆ. ರಾಜಸ್ಥಾನ್ ರಾಯಲ್ಸ್ ಫೈನಲ್ ಪಂದಕ್ಕೆ ನಿಮಗೆ ಶುಭವಾಗಲಿ” ಎಂದು ಆರ್‌ಸಿಬಿ ಟ್ವೀಟ್ ಮಾಡಿತ್ತು. ಅದಕ್ಕೆ ಪ್ರತಿಯಾಗಿ ರಾಜಸ್ಥಾನ ರಾಯಲ್ಸ್ ತಂಡ ಹೃದಯ ಇಮೋಜಿ ಹಾಕಿ ಸಂಭ್ರಮ ವ್ಯಕ್ತಪಡಿಸಿತ್ತು.

ಶೇನ್ ವಾರ್ನ್ 2008ರ ಮೊದಲ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದರು ಮತ್ತು ಆ ಬಾರಿ ರಾಜಸ್ಥಾನ್ ತಂಡ ಚಾಂಪಿಯನ್ ಆಗಿತ್ತು. ತದನಂತರ ಅದು ಫೈನಲ್ ಹಂತಕ್ಕೆ ತಲುಪಿರುವುದು ಈ ಬಾರಿ ಮಾತ್ರ. ಫೈನಲ್ ಪಂದ್ಯ ಭಾನುವಾರ ರಾತ್ರಿ 8 ಗಂಟಗೆ ನಡೆಯಲಿದ್ದು, ಪ್ರಶಸ್ತಿಗಾಗಿ ರಾಜಸ್ಥಾನ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸೆಣಸಲಿವೆ.

RCB ಗೆ ಸೋಲು: ಮೀಮ್‌ಗಳ ಸುರಿಮಳೆ

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ. ಈ ಸಲ ಕಪ್ ನಮ್ದೆ ಎನ್ನುವ ಸ್ಲೋಗನ್ ಅನ್ನು ಮುಂದಿನ ಸಲ ಕಪ್ ನಮ್ದೆ ಎಂದು ಬದಲಿಸಿ ಹಂಚಿಕೊಳ್ಳಲಾಗಿದೆ. ಆ ಮೂಲಕ ಭರವಸೆ ಕಳೆದುಕೊಳ್ಳುವುದಿಲ್ಲ ಎಂದು ವ್ಯಂಗ್ಯವಾಡಲಾಗಿದೆ.

ಇದನ್ನೂ ಓದಿ; ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...