Homeಸಿನಿಮಾಕ್ರೀಡೆIPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

IPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ.

- Advertisement -
- Advertisement -

ಶುಕ್ರವಾರ ರಾತ್ರಿ ನಡೆದ ಐಪಿಎಲ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು 7 ವಿಕೆಟ್ ಅಂತರದ ಸೋಲು ಕಂಡ RCB ತಂಡ ಟೂರ್ನಿಯಿಂದ ಹೊರಬಿದ್ದಿದೆ. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ‘ಈ ಸಲ ಕಪ್ ನಮ್ದೆ’ ಎನ್ನುವ ಕನಸನ್ನು ಕನಸಾಗಿಯೇ ಇಟ್ಟಿದೆ. ಆದರೆ ಪಂದ್ಯದ ನಂತರ ಸ್ಪಿನ್ ದಿಗ್ಗಜ ಶೇನ್ ವಾರ್ನ್ ನೆನೆದು RCB ಫ್ರಾಂಚೈಸಿ ಟ್ವೀಟ್ ಮಾಡುವ ಮೂಲಕ ಕ್ರಿಕೆಟ್ ಪ್ರಿಯರ ಮನಗೆದ್ದಿದೆ.

ಟಾಸ್‌ ಗೆದ್ದ ರಾಜಸ್ಥಾನ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ವೈಫಲ್ಯ ಕಂಡಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ರಜತ್ ಪಾಟಿದಾರ್ 42 ಎಸೆತೆಗಳಲ್ಲಿ 58 ರನ್ ಗಳಿಸಿದ್ದು ಬಿಟ್ಟರೆ ಉಳಿದ ಎಲ್ಲಾ ಬ್ಯಾಟ್ಸ್‌ಮನ್‌ಗಳು ನೀರಸ ಪ್ರದರ್ಶನ ನೀಡಿದರು. 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಸಾಧ್ಯವಾಯಿತು. ರಾಜಸ್ಥಾನ್ ತಂಡದ ಪರವಾಗಿ ಪ್ರಸಿದ್ದ್ ಕೃಷ್ಣ ಮತ್ತು ಒಬೆಡ್ ಮ್ಯಕೊಯ್ ತಲಾ ಮೂರು ವಿಕೆಟ್ ಗಳಿಸಿ ಮಿಂಚಿದರು.

ಆರ್‌ಸಿಬಿ ಎದರು ರಾಜಸ್ಥಾನ್ ರಾಯಲ್ಸ್ ತಂಡ ಸ್ಪೋಟಕ ಬ್ಯಾಟಿಂಗ್ ದಾಳಿ ಆರಂಭಿಸಿತು. ಜಾಸ್ ಬಟ್ಲರ್ 60 ಎಸೆತಗಳಲ್ಲಿ 106 ರನ್ ಚಚ್ಚುವ ಮೂಲಕ ಆರ್‌ಆರ್‌ ಸುಲಭವಾಗಿ ಗೆಲುವಿನ ದಡ ಸೇರಿತು. 7 ವಿಕೆಟ್‌ಗಳ ಅಧಿಕಾರಯುತ ಗೆಲುವಿನೊಂದಿಗೆ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಿತು.

ಪಂದ್ಯದ ಬಳಿಕ RCB ಫ್ರಾಂಚೈಸಿ ರಾಜಸ್ಥಾನ್ ತಂಡಕ್ಕೆ ಶುಭ ಹಾರೈಸಿ ಮಾಡಿದ ಟ್ವೀಟ್ ಎಲ್ಲೆಡೆ ಗಮನ ಸೆಳೆಯಿತು. “ಇಂದು ರಾತ್ರಿ ಚೆನ್ನಾಗಿ ಆಡಿದಿರಿ. ದಿವಂಗತ ದಿ ಗ್ರೇಟ್ ಶೇನ್ ವಾರ್ನ್ ನಿಮ್ಮನ್ನು ನೋಡಿ ಖುಷಿಪಡುತ್ತಿರುತ್ತಾರೆ. ರಾಜಸ್ಥಾನ್ ರಾಯಲ್ಸ್ ಫೈನಲ್ ಪಂದಕ್ಕೆ ನಿಮಗೆ ಶುಭವಾಗಲಿ” ಎಂದು ಆರ್‌ಸಿಬಿ ಟ್ವೀಟ್ ಮಾಡಿತ್ತು. ಅದಕ್ಕೆ ಪ್ರತಿಯಾಗಿ ರಾಜಸ್ಥಾನ ರಾಯಲ್ಸ್ ತಂಡ ಹೃದಯ ಇಮೋಜಿ ಹಾಕಿ ಸಂಭ್ರಮ ವ್ಯಕ್ತಪಡಿಸಿತ್ತು.

ಶೇನ್ ವಾರ್ನ್ 2008ರ ಮೊದಲ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದರು ಮತ್ತು ಆ ಬಾರಿ ರಾಜಸ್ಥಾನ್ ತಂಡ ಚಾಂಪಿಯನ್ ಆಗಿತ್ತು. ತದನಂತರ ಅದು ಫೈನಲ್ ಹಂತಕ್ಕೆ ತಲುಪಿರುವುದು ಈ ಬಾರಿ ಮಾತ್ರ. ಫೈನಲ್ ಪಂದ್ಯ ಭಾನುವಾರ ರಾತ್ರಿ 8 ಗಂಟಗೆ ನಡೆಯಲಿದ್ದು, ಪ್ರಶಸ್ತಿಗಾಗಿ ರಾಜಸ್ಥಾನ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸೆಣಸಲಿವೆ.

RCB ಗೆ ಸೋಲು: ಮೀಮ್‌ಗಳ ಸುರಿಮಳೆ

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ. ಈ ಸಲ ಕಪ್ ನಮ್ದೆ ಎನ್ನುವ ಸ್ಲೋಗನ್ ಅನ್ನು ಮುಂದಿನ ಸಲ ಕಪ್ ನಮ್ದೆ ಎಂದು ಬದಲಿಸಿ ಹಂಚಿಕೊಳ್ಳಲಾಗಿದೆ. ಆ ಮೂಲಕ ಭರವಸೆ ಕಳೆದುಕೊಳ್ಳುವುದಿಲ್ಲ ಎಂದು ವ್ಯಂಗ್ಯವಾಡಲಾಗಿದೆ.

ಇದನ್ನೂ ಓದಿ; ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...