Homeಸಿನಿಮಾಕ್ರೀಡೆIPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

IPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ.

- Advertisement -
- Advertisement -

ಶುಕ್ರವಾರ ರಾತ್ರಿ ನಡೆದ ಐಪಿಎಲ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು 7 ವಿಕೆಟ್ ಅಂತರದ ಸೋಲು ಕಂಡ RCB ತಂಡ ಟೂರ್ನಿಯಿಂದ ಹೊರಬಿದ್ದಿದೆ. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ‘ಈ ಸಲ ಕಪ್ ನಮ್ದೆ’ ಎನ್ನುವ ಕನಸನ್ನು ಕನಸಾಗಿಯೇ ಇಟ್ಟಿದೆ. ಆದರೆ ಪಂದ್ಯದ ನಂತರ ಸ್ಪಿನ್ ದಿಗ್ಗಜ ಶೇನ್ ವಾರ್ನ್ ನೆನೆದು RCB ಫ್ರಾಂಚೈಸಿ ಟ್ವೀಟ್ ಮಾಡುವ ಮೂಲಕ ಕ್ರಿಕೆಟ್ ಪ್ರಿಯರ ಮನಗೆದ್ದಿದೆ.

ಟಾಸ್‌ ಗೆದ್ದ ರಾಜಸ್ಥಾನ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ವೈಫಲ್ಯ ಕಂಡಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ರಜತ್ ಪಾಟಿದಾರ್ 42 ಎಸೆತೆಗಳಲ್ಲಿ 58 ರನ್ ಗಳಿಸಿದ್ದು ಬಿಟ್ಟರೆ ಉಳಿದ ಎಲ್ಲಾ ಬ್ಯಾಟ್ಸ್‌ಮನ್‌ಗಳು ನೀರಸ ಪ್ರದರ್ಶನ ನೀಡಿದರು. 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಸಾಧ್ಯವಾಯಿತು. ರಾಜಸ್ಥಾನ್ ತಂಡದ ಪರವಾಗಿ ಪ್ರಸಿದ್ದ್ ಕೃಷ್ಣ ಮತ್ತು ಒಬೆಡ್ ಮ್ಯಕೊಯ್ ತಲಾ ಮೂರು ವಿಕೆಟ್ ಗಳಿಸಿ ಮಿಂಚಿದರು.

ಆರ್‌ಸಿಬಿ ಎದರು ರಾಜಸ್ಥಾನ್ ರಾಯಲ್ಸ್ ತಂಡ ಸ್ಪೋಟಕ ಬ್ಯಾಟಿಂಗ್ ದಾಳಿ ಆರಂಭಿಸಿತು. ಜಾಸ್ ಬಟ್ಲರ್ 60 ಎಸೆತಗಳಲ್ಲಿ 106 ರನ್ ಚಚ್ಚುವ ಮೂಲಕ ಆರ್‌ಆರ್‌ ಸುಲಭವಾಗಿ ಗೆಲುವಿನ ದಡ ಸೇರಿತು. 7 ವಿಕೆಟ್‌ಗಳ ಅಧಿಕಾರಯುತ ಗೆಲುವಿನೊಂದಿಗೆ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಿತು.

ಪಂದ್ಯದ ಬಳಿಕ RCB ಫ್ರಾಂಚೈಸಿ ರಾಜಸ್ಥಾನ್ ತಂಡಕ್ಕೆ ಶುಭ ಹಾರೈಸಿ ಮಾಡಿದ ಟ್ವೀಟ್ ಎಲ್ಲೆಡೆ ಗಮನ ಸೆಳೆಯಿತು. “ಇಂದು ರಾತ್ರಿ ಚೆನ್ನಾಗಿ ಆಡಿದಿರಿ. ದಿವಂಗತ ದಿ ಗ್ರೇಟ್ ಶೇನ್ ವಾರ್ನ್ ನಿಮ್ಮನ್ನು ನೋಡಿ ಖುಷಿಪಡುತ್ತಿರುತ್ತಾರೆ. ರಾಜಸ್ಥಾನ್ ರಾಯಲ್ಸ್ ಫೈನಲ್ ಪಂದಕ್ಕೆ ನಿಮಗೆ ಶುಭವಾಗಲಿ” ಎಂದು ಆರ್‌ಸಿಬಿ ಟ್ವೀಟ್ ಮಾಡಿತ್ತು. ಅದಕ್ಕೆ ಪ್ರತಿಯಾಗಿ ರಾಜಸ್ಥಾನ ರಾಯಲ್ಸ್ ತಂಡ ಹೃದಯ ಇಮೋಜಿ ಹಾಕಿ ಸಂಭ್ರಮ ವ್ಯಕ್ತಪಡಿಸಿತ್ತು.

ಶೇನ್ ವಾರ್ನ್ 2008ರ ಮೊದಲ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದರು ಮತ್ತು ಆ ಬಾರಿ ರಾಜಸ್ಥಾನ್ ತಂಡ ಚಾಂಪಿಯನ್ ಆಗಿತ್ತು. ತದನಂತರ ಅದು ಫೈನಲ್ ಹಂತಕ್ಕೆ ತಲುಪಿರುವುದು ಈ ಬಾರಿ ಮಾತ್ರ. ಫೈನಲ್ ಪಂದ್ಯ ಭಾನುವಾರ ರಾತ್ರಿ 8 ಗಂಟಗೆ ನಡೆಯಲಿದ್ದು, ಪ್ರಶಸ್ತಿಗಾಗಿ ರಾಜಸ್ಥಾನ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸೆಣಸಲಿವೆ.

RCB ಗೆ ಸೋಲು: ಮೀಮ್‌ಗಳ ಸುರಿಮಳೆ

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ. ಈ ಸಲ ಕಪ್ ನಮ್ದೆ ಎನ್ನುವ ಸ್ಲೋಗನ್ ಅನ್ನು ಮುಂದಿನ ಸಲ ಕಪ್ ನಮ್ದೆ ಎಂದು ಬದಲಿಸಿ ಹಂಚಿಕೊಳ್ಳಲಾಗಿದೆ. ಆ ಮೂಲಕ ಭರವಸೆ ಕಳೆದುಕೊಳ್ಳುವುದಿಲ್ಲ ಎಂದು ವ್ಯಂಗ್ಯವಾಡಲಾಗಿದೆ.

ಇದನ್ನೂ ಓದಿ; ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...