Homeಅಂತರಾಷ್ಟ್ರೀಯVIVO ಬದಲು ಪತಂಜಲಿಯಿಂದ ಐಪಿಎಲ್ ಪ್ರಾಯೋಜಕತ್ವ ಸಾಧ್ಯತೆ!

VIVO ಬದಲು ಪತಂಜಲಿಯಿಂದ ಐಪಿಎಲ್ ಪ್ರಾಯೋಜಕತ್ವ ಸಾಧ್ಯತೆ!

ಹರಿದ್ವಾರ ಮೂಲದ ಪತಂಜಲಿ ಸಮೂಹವು ಸುಮಾರು 10,500 ಕೋಟಿ ರೂ. ವಹಿವಾಟು ಹೊಂದಿದೆ. ಪತಂಜಲಿ ಆಯುರ್ವೇದವು 2018-19ನೇ ಹಣಕಾಸು ವರ್ಷದಲ್ಲಿ 8,329 ಕೋಟಿ ರೂ. ಆದಾಯವನ್ನು ಗಳಿಸಿತ್ತು.

- Advertisement -
- Advertisement -

ಅಕ್ಟೋಬರ್ ನವೆಂಬರ್‌ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶೀರ್ಷಿಕೆ ಪ್ರಾಯೋಜಕತ್ವಕ್ಕೆ ಬಿಡ್ ಮಾಡಲು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಕಂಪನಿ ಚಿಂತನೆ ನಡೆಸಿದೆ ಎಂದು ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೀನಾದ ಮೊಬೈಲ್ ತಯಾರಕ ವಿವೊ ಕಂಪನಿ ಪ್ರಾಯೋಜಕತ್ವದಿಂದ ಹೊರಬರಲು ನಿರ್ಧರಿಸಿದ ನಂತರ ಹೊಸದಾಗಿ ಐಪಿಎಲ್‌ನ ಶೀರ್ಷಿಕೆ ಪ್ರಾಯೋಜಕತ್ವಕ್ಕೆ ಬಿಡ್‌ ಕರೆಯಲಾಗುತ್ತದೆ.

ತನ್ನ ಆಯುರ್ವೇದ ಮೂಲದ ಎಫ್‌ಎಂಸಿಜಿ ಉತ್ಪನ್ನಗಳಿಗೆ ರಫ್ತು ಮಾಡುವತ್ತ ಗಮನ ಹರಿಸಿರುವ ಪತಂಜಲಿ, ಐಪಿಲ್ ಟೈಟಲ್ ಪ್ರಾಯೋಜಕತ್ವ ವಹಿಸಿಕೊಂಡಲ್ಲಿ ಜಾಗತಿಕವಾಗಿ ಗಮನ ಸೆಳೆಯಬಹದು ಎಂಬ ಅಂದಾಜು ಮಾಡಿದೆ.

ಪತಂಜಲಿ ವಕ್ತಾರ ಎಸ್ ಕೆ ತಿಜರಾವಾಲಾ ಮಾತನಾಡಿ ಟೈಟಲ್ ಪ್ರಾಯೋಜಕತ್ವ ಪಡೆಯಲು ಪ್ರಯತ್ನಿಸುತ್ತೇವೆ. ವೋಕಲ್ ಫಾರ್ ಲೋಕಲ್ ಮತ್ತು ಭಾರತೀಯ ಬ್ರಾಂಡ್ ಅನ್ನು ಜಾಗತಿಕಗೊಳಿಸುವುದಕ್ಕೆ ಇದು ಸರಿಯಾದ ವೇದಿಕೆಯಾಗಿದೆ ಎಂದು ಪಿಟಿಐಗೆ ಹೇಳಿದ್ದಾರೆ.

ಆದರೆ, ಈ ವಿಷಯದ ಬಗ್ಗೆ ಕಂಪನಿಯು ಇನ್ನೂ ಅಂತಿಮ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದು ತಿಜರಾವಾಲಾ ಹೇಳಿದ್ದಾರೆ.

ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ನಡೆಯುವ 2020 ರ ಐಪಿಎಲ್‌ಗಾಗಿ ತಮ್ಮ ಪಾಲುದಾರಿಕೆಯನ್ನು ಸ್ಥಗಿತಗೊಳಿಸಲು ವಿವೊ ನಿರ್ಧರಿಸಿತ್ತು.

ಚೀನಾ-ಭಾರತ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ವಿವೊ ಹಿಂದೆ ಸರಿದಿತ್ತು.

ಶೀರ್ಷಿಕೆ ಪ್ರಾಯೋಜಕತ್ವವು ಐಪಿಎಲ್‌ನ ವಾಣಿಜ್ಯ ಆದಾಯದ ಮಹತ್ವದ ಭಾಗವಾಗಿದೆ. ವಿವೋ ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವದ ಹಕ್ಕುಗಳನ್ನು 2018 ರಿಂದ 2022 ರವರೆಗೆ ಐದು ವರ್ಷಗಳ ಕಾಲ 2,190 ಕೋಟಿ ರೂ. ಕೊಟ್ಟು ಖರೀದಿತ್ತು. ಆದರೆ ತೀವ್ರ ಪ್ರತಿರೋಧ ವ್ಯಕ್ತವಾದಾಗ ಹಿಂದೆ ಸರಿಯಿತು.

ಹರಿದ್ವಾರ ಮೂಲದ ಪತಂಜಲಿ ಸಮೂಹವು ಸುಮಾರು 10,500 ಕೋಟಿ ರೂ. ವಹಿವಾಟು ಹೊಂದಿದೆ. ಪತಂಜಲಿ ಆಯುರ್ವೇದವು 2018-19ನೇ ಹಣಕಾಸು ವರ್ಷದಲ್ಲಿ 8,329 ಕೋಟಿ ರೂ. ಆದಾಯವನ್ನು ಗಳಿಸಿತ್ತು.


ಇದನ್ನು ಓದಿ: ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...