Homeಸಿನಿಮಾಕ್ರೀಡೆಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

- Advertisement -
- Advertisement -

ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಐಪಿಎಲ್‌ 15ನೇ ಆವೃತ್ತಿಯ 42ನೇ ಪಂದ್ಯದಲ್ಲಿ ಇಂದು ಉಭಯ ತಂಡಗಳು ಮುಖಾಮುಖಿಯಾಗಿವೆ. ಕನ್ನಡಿಗರಾದ ಕೆ.ಎಲ್‌.ರಾಹುಲ್‌ ಎಲ್‌ಎಸ್‌ಜಿಗೆ, ಮಯಾಂಕ್‌ ಅಗರ್‌ವಾಲ್‌ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ನಾಯಕರಾಗಿದ್ದು ಟಾಸ್‌ ಗೆದ್ದ ಪಂಜಾಬ್‌ ಬೌಲಿಂಗ್ ಆಯ್ದುಕೊಂಡಿತು.

ಬ್ಯಾಟಿಂಗ್‌ಗೆ ಇಳಿದ ಎಲ್‌ಎಸ್‌ಜಿ ಆರಂಭಿಕ ಆಘಾತ ಎದುರಿಸಿತು. ಕೆ.ಎಲ್‌.ರಾಹುಲ್‌ 6 ರನ್‌ ಗಳಿಸಿ ಔಟಾದರು. ಆದರೆ ಕ್ವಿಂಟನ್‌ ಡಿಕಾಕ್ ಹಾಗೂ ದೀಪಕ್‌ ಹೂಡಾ 2ನೇ ವಿಕೆಟ್‌ಗೆ ಉತ್ತಮ ಆರಂಭ ನೀಡಿದರು. 37 ಬಾಲ್‌ಗಳಲ್ಲಿ 4 ಫೋರ್‌, 2 ಸಿಕ್ಸ್‌ ಮೂಲಕ 46 ರನ್‌ ಗಳಿಸಿ ಅರ್ಧ ಶತಕದ ಹೊಸ್ತಿಲಲ್ಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತಮ ಆರಂಭ ನೀಡಿ ಆಟವಾಡುತ್ತಿದ್ದ ಡಿಕಾಕ್‌ 12ನೇ ಓವರ್‌ನಲ್ಲಿ ಔಟ್‌ ಆಗಿದ್ದು ವಿಶೇಷ. ಸಂದೀಶ್ ಶರ್ಮಾ ಅವರು ಬೌಲಿಂಗ್ ಮಾಡುತ್ತಿದ್ದರು. ಆದರೆ ಓವರ್‌ನ ನಾಲ್ಕನೇ ಎಸೆತದಲ್ಲಿ ಡಿಕಾಕ್‌ ಅವರ ಬ್ಯಾಟ್‌ಗೆ ತಾಕಿ ಬಾಲ್‌ ಕೀಪರ್‌ (ಜಿತೇಶ್‌ ಶರ್ಮಾ) ಕೈ ಸೇರಿತ್ತು. ಆದರೆ ಅಂಪೈರ್‌ ಔಟ್ ಕೊಡಲಿಲ್ಲ. ಆಗ ಕ್ರೀಡಾ ಸ್ಫೂರ್ತಿ ಮೆರೆದ ಡಿಕಾಕ್‌ ತಾವಾಗಿಯೇ ಔಟ್ ಎಂದು ಒಪ್ಪಿಕೊಂಡು ಕ್ರೀಸ್‌ನಿಂದ ಹೊರನಡೆದರು.

ಕ್ರಿಕೆಟ್ ಇತಿಹಾಸದಲ್ಲಿ ಇದೇ ರೀತಿಯ ಕ್ರೀಡಾ ಸ್ಫೂರ್ತಿಯನ್ನು ಹಲವು ಸಲ ಕ್ರಿಕೆಟ್ ಪ್ರೇಮಿಗಳು ಕಂಡಿದ್ದಾರೆ. ಆಡಮ್‌ ಕಿಲ್‌ಕ್ರಿಸ್ಟ್‌, ಸಚಿನ್‌ ತೆಂಡೂಲ್ಕರ್‌, ಬ್ರಿಯಾನ್‌ ಲಾರಾ, ಕುಮಾರ ಸಂಗಾಕ್ಕಾರ ಸೇರಿದಂತೆ ಹಲವು ಆಟಗಾರರು ಇದೇ ರೀತಿಯಲ್ಲಿ ಕ್ರೀಡಾ ಸ್ಫೂರ್ತಿಯನ್ನು ಮೆರೆದಿದ್ದಾರೆ.

ಬ್ಲಾಕ್‌ ಲೈವ್ಸ್‌ ಮ್ಯಾಟರ್‌ನಲ್ಲಿ ವಿವಾದ: ಕ್ರೀಡಾ ಸ್ಫೂರ್ತಿಯಿಂದ ಮೆಚ್ಚುಗೆಗೆ ಒಳಗಾಗಿರುವ ಕ್ವಿಂಟನ್‌ ಡಿಕಾಕ್‌ ಈ ಹಿಂದೆ ಬ್ಲಾಕ್‌ ಲೈವ್ಸ್‌ ಮ್ಯಾಟರ್‌ ಚಳವಳಿಯ ವೇಳೆ ಟೀಕೆಗೆ ಒಳಗಾಗಿದ್ದರು. ಎಲ್ಲ ಆಟಗಾರರು ಮಂಡಿಯೂರಿದ್ದಾಗ ಡಿಕಾಕ್‌ ಮಂಡಿಯೂರದೇ ಟೀಕೆಗೆ ಒಳಗಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...