Homeಸಿನಿಮಾಕ್ರೀಡೆಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

- Advertisement -
- Advertisement -

ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಐಪಿಎಲ್‌ 15ನೇ ಆವೃತ್ತಿಯ 42ನೇ ಪಂದ್ಯದಲ್ಲಿ ಇಂದು ಉಭಯ ತಂಡಗಳು ಮುಖಾಮುಖಿಯಾಗಿವೆ. ಕನ್ನಡಿಗರಾದ ಕೆ.ಎಲ್‌.ರಾಹುಲ್‌ ಎಲ್‌ಎಸ್‌ಜಿಗೆ, ಮಯಾಂಕ್‌ ಅಗರ್‌ವಾಲ್‌ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ನಾಯಕರಾಗಿದ್ದು ಟಾಸ್‌ ಗೆದ್ದ ಪಂಜಾಬ್‌ ಬೌಲಿಂಗ್ ಆಯ್ದುಕೊಂಡಿತು.

ಬ್ಯಾಟಿಂಗ್‌ಗೆ ಇಳಿದ ಎಲ್‌ಎಸ್‌ಜಿ ಆರಂಭಿಕ ಆಘಾತ ಎದುರಿಸಿತು. ಕೆ.ಎಲ್‌.ರಾಹುಲ್‌ 6 ರನ್‌ ಗಳಿಸಿ ಔಟಾದರು. ಆದರೆ ಕ್ವಿಂಟನ್‌ ಡಿಕಾಕ್ ಹಾಗೂ ದೀಪಕ್‌ ಹೂಡಾ 2ನೇ ವಿಕೆಟ್‌ಗೆ ಉತ್ತಮ ಆರಂಭ ನೀಡಿದರು. 37 ಬಾಲ್‌ಗಳಲ್ಲಿ 4 ಫೋರ್‌, 2 ಸಿಕ್ಸ್‌ ಮೂಲಕ 46 ರನ್‌ ಗಳಿಸಿ ಅರ್ಧ ಶತಕದ ಹೊಸ್ತಿಲಲ್ಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತಮ ಆರಂಭ ನೀಡಿ ಆಟವಾಡುತ್ತಿದ್ದ ಡಿಕಾಕ್‌ 12ನೇ ಓವರ್‌ನಲ್ಲಿ ಔಟ್‌ ಆಗಿದ್ದು ವಿಶೇಷ. ಸಂದೀಶ್ ಶರ್ಮಾ ಅವರು ಬೌಲಿಂಗ್ ಮಾಡುತ್ತಿದ್ದರು. ಆದರೆ ಓವರ್‌ನ ನಾಲ್ಕನೇ ಎಸೆತದಲ್ಲಿ ಡಿಕಾಕ್‌ ಅವರ ಬ್ಯಾಟ್‌ಗೆ ತಾಕಿ ಬಾಲ್‌ ಕೀಪರ್‌ (ಜಿತೇಶ್‌ ಶರ್ಮಾ) ಕೈ ಸೇರಿತ್ತು. ಆದರೆ ಅಂಪೈರ್‌ ಔಟ್ ಕೊಡಲಿಲ್ಲ. ಆಗ ಕ್ರೀಡಾ ಸ್ಫೂರ್ತಿ ಮೆರೆದ ಡಿಕಾಕ್‌ ತಾವಾಗಿಯೇ ಔಟ್ ಎಂದು ಒಪ್ಪಿಕೊಂಡು ಕ್ರೀಸ್‌ನಿಂದ ಹೊರನಡೆದರು.

ಕ್ರಿಕೆಟ್ ಇತಿಹಾಸದಲ್ಲಿ ಇದೇ ರೀತಿಯ ಕ್ರೀಡಾ ಸ್ಫೂರ್ತಿಯನ್ನು ಹಲವು ಸಲ ಕ್ರಿಕೆಟ್ ಪ್ರೇಮಿಗಳು ಕಂಡಿದ್ದಾರೆ. ಆಡಮ್‌ ಕಿಲ್‌ಕ್ರಿಸ್ಟ್‌, ಸಚಿನ್‌ ತೆಂಡೂಲ್ಕರ್‌, ಬ್ರಿಯಾನ್‌ ಲಾರಾ, ಕುಮಾರ ಸಂಗಾಕ್ಕಾರ ಸೇರಿದಂತೆ ಹಲವು ಆಟಗಾರರು ಇದೇ ರೀತಿಯಲ್ಲಿ ಕ್ರೀಡಾ ಸ್ಫೂರ್ತಿಯನ್ನು ಮೆರೆದಿದ್ದಾರೆ.

ಬ್ಲಾಕ್‌ ಲೈವ್ಸ್‌ ಮ್ಯಾಟರ್‌ನಲ್ಲಿ ವಿವಾದ: ಕ್ರೀಡಾ ಸ್ಫೂರ್ತಿಯಿಂದ ಮೆಚ್ಚುಗೆಗೆ ಒಳಗಾಗಿರುವ ಕ್ವಿಂಟನ್‌ ಡಿಕಾಕ್‌ ಈ ಹಿಂದೆ ಬ್ಲಾಕ್‌ ಲೈವ್ಸ್‌ ಮ್ಯಾಟರ್‌ ಚಳವಳಿಯ ವೇಳೆ ಟೀಕೆಗೆ ಒಳಗಾಗಿದ್ದರು. ಎಲ್ಲ ಆಟಗಾರರು ಮಂಡಿಯೂರಿದ್ದಾಗ ಡಿಕಾಕ್‌ ಮಂಡಿಯೂರದೇ ಟೀಕೆಗೆ ಒಳಗಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....