Homeಸಿನಿಮಾಕ್ರೀಡೆIPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

IPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

- Advertisement -
- Advertisement -

ನಾಲ್ಕು ಬಾರಿ IPL ಚಾಂಪಿಯನ್ ಆಗಿರುವ ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಬಾರಿ ಸೋಲಿನ ಮೇಲೆ ಸೋಲುಗಳು ಕಾಡುತ್ತಿವೆ. ಈ ಬಾರಿಯ ಟೂರ್ನಿಯಲ್ಲಿ ನಾಯಕತ್ವವನ್ನು ಜಡೇಜಾರಿಂದ ಧೋನಿಗೆ ವಹಿಸಿದರೂ ಸೋಲುಗಳು ಮಾತ್ರ ನಿಂತಿಲ್ಲ. ಆಡಿರುವ 12 ಪಂದ್ಯಗಳಲ್ಲಿ 8 ಅನ್ನು ಸೋತು, 4 ಅನ್ನು ಗೆದ್ದು ಸದ್ಯ 9ನೇ ಸ್ಥಾನದಲ್ಲಿರುವ ಸಿಎಸ್‌ಕೆ ತನ್ನ ಪ್ಲೆ ಆಫ್ ಕನಸ್ಸನ್ನು ಕೈಬಿಟ್ಟಿದೆ. ಗುರುವಾರ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಪವರ್ ಕಟ್ ಸಮಸ್ಯೆಯೂ ಕೂಡ ಸಿಎಸ್‌ಕೆ ತಂಡವನ್ನು ಕಾಡಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 49 ಎಸೆತಗಳಲ್ಲಿ 87 ರನ್ ಸಿಡಿಸಿ ತಂಡದ ಜಯಕ್ಕೆ ಕಾರಣವಾಗಿದ್ದ ಚನ್ನೈ ತಂಡದ ಆಟಗಾರ ಡೆವೊನ್ ಕಾನ್ವೆ ಮುಂಬೈ ಎದುರಿನ ಪಂದ್ಯದಲ್ಲಿ ಮಾತ್ರ ಎಲ್‌ಬಿಡಬ್ಲೂ ಆಗಿ ಸೊನ್ನೆಗೆ ಔಟ್ ಆಗಬೇಕಾಯಿತು. ವಾಸ್ತವದಲ್ಲಿ ಅವರು ಔಟ್ ಆಗಿರಲಿಲ್ಲ, ಬಾಲ್ ವಿಕೆಟ್‌ನಿಂದ ಹೊರಹೋಗುವಂತಿತ್ತು. ಆದರೆ ಅದನ್ನು ಅವರು ರಿವ್ಯೂ ಮಾಡಲು ಸಾಧ್ಯವಾಗಲಿಲ್ಲ. ಏಕೆಂದರೆ ಪವರ್ ಕಟ್ ಸಮಸ್ಯೆಯಿಂದಾಗಿ ಪಂದ್ಯದ ಮೊದಲ 10 ಎಸೆತಗಳಲ್ಲಿ ಡಿಆರ್‌ಎಸ್ ವರ್ಕ್ ಆಗಲಿಲ್ಲ!

ಡ್ಯಾನಿಯಲ್ ಸ್ಯಾಮ್ಸ್ ಎಸೆದ ಎರಡನೆ ಎಸೆತ ಕಾನ್ವೆ ಪ್ಯಾಡ್‌ಗೆ ತಗುಲಿತು. ಬೌಲರ್ ಮನವಿ ಪುರಸ್ಕರಿಸಿದ ಮೊದಲ ಅಂಪೈರ್ ಔಟ್ ಎಂದು ತೀರ್ಪಿತ್ತರು. ಆದರೆ ಕಾನ್ವೆ ಅದನ್ನು ಒಪ್ಪಲು ಸಿದ್ದರಿರಲಿಲ್ಲ. ಡಿಆರ್‌ಎಸ್ ಇಲ್ಲದ ಕಾರಣ ಒಲ್ಲದ ಮನಸ್ಸಿನಿಂದಲೇ ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದರು. ಅಲ್ಲಿಂದ ಮುಂದಕ್ಕೆ ಮೋಯಿನ್ ಅಲಿ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್‌ವಾಡ್ ಹೀಗೆ ಸಾಲು ಸಾಲು ವಿಕೆಟ್‌ ಬಿದ್ದು ಚನ್ನೈ 97 ರನ್‌ಗಳಿಗೆ ಆಲೌಟ್‌ ಆಯಿತು ಮತ್ತು 5 ವಿಕೆಟ್‌ಗಳ ಹೀನಾಯ ಸೋಲುಂಡಿತು.

ಕಾನ್ವೆ ಔಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗಳು ಆರಂಭವಾಗಿವೆ. ವೀಕ್ಷಕ ವಿವರಣೆ ನೀಡುತ್ತಿದ್ದ ಸುನೀಲ್ ಗಾವಸ್ಕರ್ ಕೂಡ ಇದು ಕಳಪೆ ತೀರ್ಪು ಎಂದು ಉಚ್ಚರಿಸಿದ್ದಾರೆ. ಪ್ರಪಂಚದ ದೊಡ್ಡ ಟೂರ್ನಿಯಲ್ಲಿ ಪವರ್ ಕಟ್ ಸಮಸ್ಯೆಯೇ ಎಂದು ಹಲವರು ಟೀಕಿಸಿದ್ದಾರೆ. ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಟೀಕೆ ವ್ಯಕ್ತಪಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಮಾಲೀಕರಾದ ಮುಖೇಶ್ ಅಂಬಾನಿ ವಿರುದ್ಧವೂ ಟ್ರೋಲ್‌ಗಳು ಕಂಡುಬಂದಿವೆ. ಅವುಗಳನ್ನು ಈ ಕೆಳಗೆ ನೋಡಬಹುದು.

ಇದೇ ರೀತಿಯ ವಿವಾದ ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಔಟಾದಾಗ ಉಂಟಾಗಿತ್ತು. ಕೀಪರ್ ಕ್ಯಾಚ್ ಮನವಿಯನ್ನು ಡಿಆರ್‌ಎಸ್‌ ಮೂಲಕ ಚೆಕ್ ಮಾಡಲಾಗಿತ್ತು. ಆಗ ಬಾಲ್ ಬ್ಯಾಟ್‌ ಹತ್ತಿರ ಬರುವ ಮುನ್ನವೇ ಅಲ್ಟ್ರಾ ಎಡ್ಜ್‌ನಲ್ಲಿ ಸ್ಪೈಕ್ ಆಗುತ್ತಿತ್ತು. ಅದನ್ನು ಔಟ್ ಎಂದು ಘೋಷಿಸಿದಾಗ ರೋಹಿತ್ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...