Homeಸಿನಿಮಾಕ್ರೀಡೆIPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

IPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

- Advertisement -
- Advertisement -

ನಾಲ್ಕು ಬಾರಿ IPL ಚಾಂಪಿಯನ್ ಆಗಿರುವ ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಬಾರಿ ಸೋಲಿನ ಮೇಲೆ ಸೋಲುಗಳು ಕಾಡುತ್ತಿವೆ. ಈ ಬಾರಿಯ ಟೂರ್ನಿಯಲ್ಲಿ ನಾಯಕತ್ವವನ್ನು ಜಡೇಜಾರಿಂದ ಧೋನಿಗೆ ವಹಿಸಿದರೂ ಸೋಲುಗಳು ಮಾತ್ರ ನಿಂತಿಲ್ಲ. ಆಡಿರುವ 12 ಪಂದ್ಯಗಳಲ್ಲಿ 8 ಅನ್ನು ಸೋತು, 4 ಅನ್ನು ಗೆದ್ದು ಸದ್ಯ 9ನೇ ಸ್ಥಾನದಲ್ಲಿರುವ ಸಿಎಸ್‌ಕೆ ತನ್ನ ಪ್ಲೆ ಆಫ್ ಕನಸ್ಸನ್ನು ಕೈಬಿಟ್ಟಿದೆ. ಗುರುವಾರ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಪವರ್ ಕಟ್ ಸಮಸ್ಯೆಯೂ ಕೂಡ ಸಿಎಸ್‌ಕೆ ತಂಡವನ್ನು ಕಾಡಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 49 ಎಸೆತಗಳಲ್ಲಿ 87 ರನ್ ಸಿಡಿಸಿ ತಂಡದ ಜಯಕ್ಕೆ ಕಾರಣವಾಗಿದ್ದ ಚನ್ನೈ ತಂಡದ ಆಟಗಾರ ಡೆವೊನ್ ಕಾನ್ವೆ ಮುಂಬೈ ಎದುರಿನ ಪಂದ್ಯದಲ್ಲಿ ಮಾತ್ರ ಎಲ್‌ಬಿಡಬ್ಲೂ ಆಗಿ ಸೊನ್ನೆಗೆ ಔಟ್ ಆಗಬೇಕಾಯಿತು. ವಾಸ್ತವದಲ್ಲಿ ಅವರು ಔಟ್ ಆಗಿರಲಿಲ್ಲ, ಬಾಲ್ ವಿಕೆಟ್‌ನಿಂದ ಹೊರಹೋಗುವಂತಿತ್ತು. ಆದರೆ ಅದನ್ನು ಅವರು ರಿವ್ಯೂ ಮಾಡಲು ಸಾಧ್ಯವಾಗಲಿಲ್ಲ. ಏಕೆಂದರೆ ಪವರ್ ಕಟ್ ಸಮಸ್ಯೆಯಿಂದಾಗಿ ಪಂದ್ಯದ ಮೊದಲ 10 ಎಸೆತಗಳಲ್ಲಿ ಡಿಆರ್‌ಎಸ್ ವರ್ಕ್ ಆಗಲಿಲ್ಲ!

ಡ್ಯಾನಿಯಲ್ ಸ್ಯಾಮ್ಸ್ ಎಸೆದ ಎರಡನೆ ಎಸೆತ ಕಾನ್ವೆ ಪ್ಯಾಡ್‌ಗೆ ತಗುಲಿತು. ಬೌಲರ್ ಮನವಿ ಪುರಸ್ಕರಿಸಿದ ಮೊದಲ ಅಂಪೈರ್ ಔಟ್ ಎಂದು ತೀರ್ಪಿತ್ತರು. ಆದರೆ ಕಾನ್ವೆ ಅದನ್ನು ಒಪ್ಪಲು ಸಿದ್ದರಿರಲಿಲ್ಲ. ಡಿಆರ್‌ಎಸ್ ಇಲ್ಲದ ಕಾರಣ ಒಲ್ಲದ ಮನಸ್ಸಿನಿಂದಲೇ ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದರು. ಅಲ್ಲಿಂದ ಮುಂದಕ್ಕೆ ಮೋಯಿನ್ ಅಲಿ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್‌ವಾಡ್ ಹೀಗೆ ಸಾಲು ಸಾಲು ವಿಕೆಟ್‌ ಬಿದ್ದು ಚನ್ನೈ 97 ರನ್‌ಗಳಿಗೆ ಆಲೌಟ್‌ ಆಯಿತು ಮತ್ತು 5 ವಿಕೆಟ್‌ಗಳ ಹೀನಾಯ ಸೋಲುಂಡಿತು.

ಕಾನ್ವೆ ಔಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗಳು ಆರಂಭವಾಗಿವೆ. ವೀಕ್ಷಕ ವಿವರಣೆ ನೀಡುತ್ತಿದ್ದ ಸುನೀಲ್ ಗಾವಸ್ಕರ್ ಕೂಡ ಇದು ಕಳಪೆ ತೀರ್ಪು ಎಂದು ಉಚ್ಚರಿಸಿದ್ದಾರೆ. ಪ್ರಪಂಚದ ದೊಡ್ಡ ಟೂರ್ನಿಯಲ್ಲಿ ಪವರ್ ಕಟ್ ಸಮಸ್ಯೆಯೇ ಎಂದು ಹಲವರು ಟೀಕಿಸಿದ್ದಾರೆ. ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಟೀಕೆ ವ್ಯಕ್ತಪಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಮಾಲೀಕರಾದ ಮುಖೇಶ್ ಅಂಬಾನಿ ವಿರುದ್ಧವೂ ಟ್ರೋಲ್‌ಗಳು ಕಂಡುಬಂದಿವೆ. ಅವುಗಳನ್ನು ಈ ಕೆಳಗೆ ನೋಡಬಹುದು.

ಇದೇ ರೀತಿಯ ವಿವಾದ ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಔಟಾದಾಗ ಉಂಟಾಗಿತ್ತು. ಕೀಪರ್ ಕ್ಯಾಚ್ ಮನವಿಯನ್ನು ಡಿಆರ್‌ಎಸ್‌ ಮೂಲಕ ಚೆಕ್ ಮಾಡಲಾಗಿತ್ತು. ಆಗ ಬಾಲ್ ಬ್ಯಾಟ್‌ ಹತ್ತಿರ ಬರುವ ಮುನ್ನವೇ ಅಲ್ಟ್ರಾ ಎಡ್ಜ್‌ನಲ್ಲಿ ಸ್ಪೈಕ್ ಆಗುತ್ತಿತ್ತು. ಅದನ್ನು ಔಟ್ ಎಂದು ಘೋಷಿಸಿದಾಗ ರೋಹಿತ್ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...