Homeಸಿನಿಮಾಕ್ರೀಡೆIPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

IPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

- Advertisement -
- Advertisement -

ನಾಲ್ಕು ಬಾರಿ IPL ಚಾಂಪಿಯನ್ ಆಗಿರುವ ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಬಾರಿ ಸೋಲಿನ ಮೇಲೆ ಸೋಲುಗಳು ಕಾಡುತ್ತಿವೆ. ಈ ಬಾರಿಯ ಟೂರ್ನಿಯಲ್ಲಿ ನಾಯಕತ್ವವನ್ನು ಜಡೇಜಾರಿಂದ ಧೋನಿಗೆ ವಹಿಸಿದರೂ ಸೋಲುಗಳು ಮಾತ್ರ ನಿಂತಿಲ್ಲ. ಆಡಿರುವ 12 ಪಂದ್ಯಗಳಲ್ಲಿ 8 ಅನ್ನು ಸೋತು, 4 ಅನ್ನು ಗೆದ್ದು ಸದ್ಯ 9ನೇ ಸ್ಥಾನದಲ್ಲಿರುವ ಸಿಎಸ್‌ಕೆ ತನ್ನ ಪ್ಲೆ ಆಫ್ ಕನಸ್ಸನ್ನು ಕೈಬಿಟ್ಟಿದೆ. ಗುರುವಾರ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಪವರ್ ಕಟ್ ಸಮಸ್ಯೆಯೂ ಕೂಡ ಸಿಎಸ್‌ಕೆ ತಂಡವನ್ನು ಕಾಡಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 49 ಎಸೆತಗಳಲ್ಲಿ 87 ರನ್ ಸಿಡಿಸಿ ತಂಡದ ಜಯಕ್ಕೆ ಕಾರಣವಾಗಿದ್ದ ಚನ್ನೈ ತಂಡದ ಆಟಗಾರ ಡೆವೊನ್ ಕಾನ್ವೆ ಮುಂಬೈ ಎದುರಿನ ಪಂದ್ಯದಲ್ಲಿ ಮಾತ್ರ ಎಲ್‌ಬಿಡಬ್ಲೂ ಆಗಿ ಸೊನ್ನೆಗೆ ಔಟ್ ಆಗಬೇಕಾಯಿತು. ವಾಸ್ತವದಲ್ಲಿ ಅವರು ಔಟ್ ಆಗಿರಲಿಲ್ಲ, ಬಾಲ್ ವಿಕೆಟ್‌ನಿಂದ ಹೊರಹೋಗುವಂತಿತ್ತು. ಆದರೆ ಅದನ್ನು ಅವರು ರಿವ್ಯೂ ಮಾಡಲು ಸಾಧ್ಯವಾಗಲಿಲ್ಲ. ಏಕೆಂದರೆ ಪವರ್ ಕಟ್ ಸಮಸ್ಯೆಯಿಂದಾಗಿ ಪಂದ್ಯದ ಮೊದಲ 10 ಎಸೆತಗಳಲ್ಲಿ ಡಿಆರ್‌ಎಸ್ ವರ್ಕ್ ಆಗಲಿಲ್ಲ!

ಡ್ಯಾನಿಯಲ್ ಸ್ಯಾಮ್ಸ್ ಎಸೆದ ಎರಡನೆ ಎಸೆತ ಕಾನ್ವೆ ಪ್ಯಾಡ್‌ಗೆ ತಗುಲಿತು. ಬೌಲರ್ ಮನವಿ ಪುರಸ್ಕರಿಸಿದ ಮೊದಲ ಅಂಪೈರ್ ಔಟ್ ಎಂದು ತೀರ್ಪಿತ್ತರು. ಆದರೆ ಕಾನ್ವೆ ಅದನ್ನು ಒಪ್ಪಲು ಸಿದ್ದರಿರಲಿಲ್ಲ. ಡಿಆರ್‌ಎಸ್ ಇಲ್ಲದ ಕಾರಣ ಒಲ್ಲದ ಮನಸ್ಸಿನಿಂದಲೇ ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದರು. ಅಲ್ಲಿಂದ ಮುಂದಕ್ಕೆ ಮೋಯಿನ್ ಅಲಿ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್‌ವಾಡ್ ಹೀಗೆ ಸಾಲು ಸಾಲು ವಿಕೆಟ್‌ ಬಿದ್ದು ಚನ್ನೈ 97 ರನ್‌ಗಳಿಗೆ ಆಲೌಟ್‌ ಆಯಿತು ಮತ್ತು 5 ವಿಕೆಟ್‌ಗಳ ಹೀನಾಯ ಸೋಲುಂಡಿತು.

ಕಾನ್ವೆ ಔಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗಳು ಆರಂಭವಾಗಿವೆ. ವೀಕ್ಷಕ ವಿವರಣೆ ನೀಡುತ್ತಿದ್ದ ಸುನೀಲ್ ಗಾವಸ್ಕರ್ ಕೂಡ ಇದು ಕಳಪೆ ತೀರ್ಪು ಎಂದು ಉಚ್ಚರಿಸಿದ್ದಾರೆ. ಪ್ರಪಂಚದ ದೊಡ್ಡ ಟೂರ್ನಿಯಲ್ಲಿ ಪವರ್ ಕಟ್ ಸಮಸ್ಯೆಯೇ ಎಂದು ಹಲವರು ಟೀಕಿಸಿದ್ದಾರೆ. ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಟೀಕೆ ವ್ಯಕ್ತಪಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಮಾಲೀಕರಾದ ಮುಖೇಶ್ ಅಂಬಾನಿ ವಿರುದ್ಧವೂ ಟ್ರೋಲ್‌ಗಳು ಕಂಡುಬಂದಿವೆ. ಅವುಗಳನ್ನು ಈ ಕೆಳಗೆ ನೋಡಬಹುದು.

ಇದೇ ರೀತಿಯ ವಿವಾದ ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಔಟಾದಾಗ ಉಂಟಾಗಿತ್ತು. ಕೀಪರ್ ಕ್ಯಾಚ್ ಮನವಿಯನ್ನು ಡಿಆರ್‌ಎಸ್‌ ಮೂಲಕ ಚೆಕ್ ಮಾಡಲಾಗಿತ್ತು. ಆಗ ಬಾಲ್ ಬ್ಯಾಟ್‌ ಹತ್ತಿರ ಬರುವ ಮುನ್ನವೇ ಅಲ್ಟ್ರಾ ಎಡ್ಜ್‌ನಲ್ಲಿ ಸ್ಪೈಕ್ ಆಗುತ್ತಿತ್ತು. ಅದನ್ನು ಔಟ್ ಎಂದು ಘೋಷಿಸಿದಾಗ ರೋಹಿತ್ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...