Homeಸಿನಿಮಾಕ್ರೀಡೆIPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ - ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ...

IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?

ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್ ರಾಹುಲ್ ನಾಯಕರಾಗಿಯೂ ಮತ್ತು ವಯಕ್ತಿಕ ಆಟದಲ್ಲಿಯೂ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಹಾಗಾಗಿಯೇ ಆ ತಂಡಗಳು ಅಗ್ರ ಸ್ಥಾನದಲ್ಲಿವೆ

- Advertisement -
- Advertisement -

IPL2022 ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ನಾಲ್ಕೈದು ಬಾರಿ ಚಾಂಪಿಯನ್ ಆಗಿದ್ದ ಮುಂಬೈ-ಚನ್ನೈ ತಂಡಗಳು ಕಳಪೆ ಪ್ರದರ್ಶನ ನೀಡಿದರೆ, ಹೊಸ ನಾಯಕತ್ವದ ಗುಜರಾತ್ ಮತ್ತು ಯುವ ನಾಯಕತ್ವದ ಲಕ್ನೋ, ರಾಜಸ್ತಾನ್ ತಂಡಗಳು ಗೆಲುವಿನ ಮೇಲೆ ಗೆಲುವು ಸಾಧಿಸುತ್ತಿವೆ. ಇದುವರೆಗೂ ಲೀಗ್ ಹಂತದ 44 ಪಂದ್ಯಗಳು ನಡೆದಿದ್ದು, ಹೆಚ್ಚು ಕಡಿಮೆ ಅರ್ಧದಷ್ಟು ಪಂದ್ಯಗಳು ಮುಕ್ತಾಯವಾಗಿವೆ. ಮುಂಬೈ ಸತತ 8 ಪಂದ್ಯಗಳನ್ನು ಸೋತು 9ನೇ ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿ ಕೊನೆಯ ಸ್ಥಾನದಲ್ಲಿದೆ. ಚನ್ನೈ ತಂಡ ಸಹ 8 ಪಂದ್ಯಗಳಲ್ಲಿ 6 ಸೋಲು ಕಂಡು 2 ಗೆಲುವಿನೊಂದಿಗೆ 9 ನೇ ಸ್ಥಾನಕ್ಕೆ ಕುಸಿದಿದೆ. ಈ ಅನಿರೀಕ್ಷಿತ ಆಘಾತದಿಂದ ಹೊರಬರಲು ಚನ್ನೈ ತಂಡದ ನೂತನ ನಾಯಕರಾಗಿದ್ದ ರವೀಂದ್ರ ಜಡೇಜಾ ತಮ್ಮ ನಾಯಕತ್ವ ತ್ಯಜಿಸುವುದಾಗಿ ಘೋಷಿಸಿದ್ದಾರೆ. ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಮತ್ತೆ ಚನ್ನೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಇನ್ನು ಸೋಲಿನ ಸುಳಿಗೆ ಸಿಲುಕಿರುವ ಆರ್‌ಸಿಬಿ ತಂಡ ಕೂಡ ನಾಯಕತ್ವ ಬದಲಾವಣೆ ಚರ್ಚೆಗೆ ಹೋಗುವ ಅನಿವಾರ್ಯ ಸ್ಥಿತಿಗೆ ತಲುಪಿದೆ.

IPL2022 ಆರಂಭವಾಗುವ ಎರಡು ದಿನದ ಮುನ್ನ ಚನ್ನೈ ತಂಡದ ನಾಯಕರಾಗಿ ರವೀಂದ್ರ ಜಡೇಜಾ ಆಯ್ಕೆಯಾಗಿದ್ದರು. ಅದುವರೆಗೂ ಖ್ಯಾತ ಆಲ್‌ರೌಂಡರ್ ಆಗಿದ್ದ ಅವರು ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿಯೂ ಮಿಂಚುತ್ತಿದ್ದರು. ಆದರೆ ನಾಯಕನಾದ ನಂತರ ಅವರಿಂದ ಉತ್ತಮ ಪ್ರದರ್ಶನ ಕಂಡಬಂದಿಲ್ಲ. ತಂಡವಾಗಿ ಚನ್ನೈ 8 ಪಂದ್ಯಗಳಲ್ಲಿ 6 ಸೋಲು ಕಂಡರೆ ನಾಯಕ ರವೀಂದ್ರ ಜಡೇಜಾ ಬ್ಯಾಟಿಂಗ್‌ನಲ್ಲಿ ಕೇವಲ 112 ರನ್ ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ 5 ವಿಕೆಟ್ ಪಡೆದು ನೀರಸ ಪ್ರದರ್ಶನ ನೀಡಿದ್ದಾರೆ. ಹಾಗಾಗಿ ಮುಂದಿನ ಪಂದ್ಯಗಳಲ್ಲಿ ವಯಕ್ತಿಕ ಆಟದ ಕಡೆ ಗಮನ ಕೊಡುವುದಕ್ಕಾಗಿ ನಾಯಕತ್ವವನ್ನು ಮತ್ತೆ ಧೋನಿ ಕೈಗೆ ಒಪ್ಪಿಸಿದ್ದಾರೆ. ಇದು ಒಂದು ರೀತಿಯಲ್ಲಿ ಸೋಲಿನ ಜವಾಬ್ದಾರಿ ಹೊತ್ತು ತೆಗೆದುಕೊಂಡ ನಿರ್ಧಾರವಾಗಿದೆ.

ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

ಈ ಸಲ ಕಪ್ ನಮ್ದೆ ಎನ್ನುವುದು ಪ್ರತಿ ಬಾರಿ ಐಪಿಲ್ ನಡೆಯುವಾಗ ಆರ್‌ಸಿಬಿ ಅಭಿಮಾನಿಗಳ ಕೂಗು. ಇಡೀ ಐಪಿಎಲ್‌ ನಲ್ಲಿಯೇ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ ಆರ್‌ಸಿಬಿ ಎಂದರೆ ತಪ್ಪಾಗಲಾರದು. ಆದರೆ ಇದುವರೆಗೂ ನಡೆದ 14 ಆವೃತ್ತಿಗಳಲ್ಲಿ ಒಮ್ಮೆಯೂ ಕಪ್ ಗೆಲ್ಲಲಾಗದ ಆರ್‌ಸಿಬಿ 3 ಬಾರಿ ಫೈನಲ್ ತಲುಪಿ ಎಡವಿದೆ. ಈ 15 ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಕಂಡ ತಂಡವು ನಂತರ ಸತತ ಮೂರು ಸೋಲುಗಳಿಂದ ಕಂಗೆಟ್ಟಿದೆ. ತಾನಾಡಿದ 10 ಪಂದ್ಯಗಳಲ್ಲಿ 5 ಗೆಲುವು ಮತ್ತು 5 ಸೋಲು ಕಂಡಿದ್ದು 10 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಆದರೆ ಪ್ಲೇ ಆಫ್ ತಲುಪಲು ಮೊದಲ ನಾಲ್ಕು ಸ್ಥಾನಗಳಲ್ಲಿ ಆರ್‌ಸಿಬಿ ಇರಬೇಕು. ತಂಡದ ಪ್ರದರ್ಶನ ನೋಡುತ್ತಿದ್ದರೆ ಸುಲಭ ಸಾಧ್ಯವಲ್ಲ ಅನಿಸುತ್ತಿದೆ.

ಇನ್ನು ವಯಕ್ತಿಕವಾಗಿ ನೋಡುವುದಾದರೆ 2019, 2020, 2021ರಲ್ಲಿ ಚನ್ನೈ ತಂಡಕ್ಕಾಗಿ ಆಡಿದ್ದ ಡು ಪ್ಲೆಸಿಸ್ ಅದ್ಬುತ ಪ್ರದರ್ಶನ ನೀಡಿದ್ದರು. ಕ್ರಮವಾಗಿ 396, 449, 633 ರನ್ ಗಳಿಸಿ ಮಿಂಚಿದ್ದರು. ಆದರೆ ಈ ಬಾರಿ ಆರ್‌ಸಿಬಿ ಪರವಾಗಿ 10 ಪಂದ್ಯಗಳಲ್ಲಿ 278 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕಗಳು ಸೇರಿವೆ. ಆದರೆ ಅದು ಸಾಲುತ್ತಿಲ್ಲ. ಒಂದೆಡೆ ನಾಯಕನಾಗಿ ವಿಫಲನಾಗಿರುವುದರಿಂದ ವಯಕ್ತಿಕ ಮೊತ್ತವು ಕಡಿಮೆ ಎನಿಸುತ್ತದೆ. ಇನ್ನು ಆರ್‌ಸಿಬಿಯ ಯಾವ ಆಟಗಾರರು ಸ್ಥಿರ ಪ್ರದರ್ಶನ ನೀಡದಿರುವುದು ನಾಯಕನ ಮೇಲೆ ಒತ್ತಡ ಹೆಚ್ಚಿಸಿದೆ. ಅವರು ಯಾವ ತೀರ್ಮಾನ ಮಾಡುತ್ತಾರೆ ನೋಡಬೇಕಿದೆ.

ಅದೃಷ್ಟದಲ್ಲಿ ತೇಲುತ್ತಿರುವ ಗುಜರಾತ್ ತಂಡ ಮತ್ತು ಅದರ ನಾಯಕ ಹಾರ್ದಿಕ್ ಪಾಂಡ್ಯ

ಅದು ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯ. ಮೊದಲು ಬ್ಯಾಟ್ ಮಾಡಿದ ಪಂಜಾಬ್ 189 ರನ್ ಗಳಿಸಿ ಪೈಪೋಟಿಯ ಮೊತ್ತ ಪೇರಿಸಿತು. ಅದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಗುಜರಾತ್ ಅಂತಿಮ ಓವರ್‌ನಲ್ಲಿ 19 ರನ್ ಗಳಿಸಬೇಕಿತ್ತು. ಒಡಿಯನ್ ಸ್ಮಿತ್ ಮಾಡಿದ ಮೊದಲ ಬಾಲ್ ವೈಡ್ ಆದರೆ ನಂತರದ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ರನ್ ಔಟ್ ಆದರು. ಆಗ ಕ್ರೀಸ್‌ಗೆ ಬಂದ ರಾಹುಲ್ ತಿವಾಟಿಯ ಎರಡನೆ ಬಾಲ್ ನಲ್ಲಿ ಒಂದು ರನ್ ಗಳಿಸಿದರು. ಮೂರನೇ ಎಸೆತದಲ್ಲಿ ಡೇವಿಡ್ ಮಿಲ್ಲರ್ ಫೋರ್ ಬಾರಿಸಿದರು. ನಂತರು ಮೂರು ಬಾಲ್‌ನಲ್ಲಿ 13 ರನ್ ಬೇಕಿತ್ತು. ನಾಲ್ಕನೇ ಎಸೆತದಲ್ಲಿ ಮಿಲ್ಲರ್ ಬ್ಯಾಟ್ ನಿಂದ ಹೊರಟ ಬಾಲ್ ಬೌಲರ್ ಒಡಿಯನ್ ಸ್ಮಿತ್ ಕೈಗೆ ತಲುಪಿತ್ತು. ಆದರೆ ಅವರು ಅದನ್ನು ವಿಕೆಟ್‌ ಕಡೆ ಎಸೆದ ಕಾರಣ ಬಾಲ್ ವಿಕೆಟ್ ತಾಗದೆ ದೂರ ಹೋಗಿದ್ದರಿಂದ ಒಂದು ರನ್ ಗಳಿಸಿದರು. ನಂತರದ ಎರೆಡು ಎಸೆತಗಳಲ್ಲಿ ಎರೆಡು ಸಿಕ್ಸರ್ ಬಾರಿಸಿದರು ತಿವಾಟಿಯ. ಗುಜರಾತ್ ತಂಡಕ್ಕೆ 6 ವಿಕೆಟ್ ಗಳ ಜಯ. ಆದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ನಂಬಲು ಸಾಧ್ಯವಾಗದೆ ತಲೆ ಮೇಲೆ ಕೈ ಹೊತ್ತು ನಗುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದ್ಭುತ ಆಟದ ಜೊತೆಗೆ ಗುಜರಾತ್ ತಂಡಕ್ಕೆ ಅದೃಷ್ಟವೂ ಸಹ ಕೈ ಹಿಡಿದಿದೆ ಎನ್ನಲೇಬೇಕು. ಇದೇ ರೀತಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿಯೂ ಕೊನೆಯ ಓವರ್‌ನಲ್ಲಿ 22 ರನ್ ಗಳಿಸಬೇಕಿದ್ದ ತಂಡ ರಶೀದ್ ಖಾನ್ ಮತ್ತು ರಾಹುಲ್ ತಿವಾಟಿಯ ಸೇರಿ 4 ಸಿಕ್ಸರ್ ಸಿಡಿಸಿ ಆ ಪಂದ್ಯವನ್ನು ಗೆದ್ದುಕೊಟ್ಟರು. ಹೀಗೆ 2022ರಲ್ಲಿ ಹೊಸದಾಗಿ ಪಾದಾರ್ಪಣೆ ಮಾಡಿದ ಈ ತಂಡ ತಾನಾಡಿದ 9 ಪಂದ್ಯಗಳಲ್ಲಿ 8 ಅನ್ನು ಗೆದ್ದು, ಒಂದು ಪಂದ್ಯದಲ್ಲಿ ಮಾತ್ರ ಸೋತು ಅಗ್ರಸ್ಥಾನ ಕಾಯ್ದುಕೊಂಡಿದೆ. ಬಹಳಷ್ಟು ಪಂದ್ಯಗಳಲ್ಲಿ ಅದು ಕೊನೆಯ ಓವರ್‌ವರೆಗೂ ತಲುಪಿ ಗೆಲುವು ಸಾಧಿಸುತ್ತಿದೆ.

ಇನ್ನು ತಂಡದ ನಾಯಕ ಹಾರ್ದಿಕ್ ಪಾಂಡ್ಯ ಸಹ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. 8 ಪಂದ್ಯಗಳಲ್ಲಿ 308 ರನ್ ಗಳಿಸಿದ್ದಾರೆ. ಇದು ಅವರ 8 ಐಪಿಎಲ್‌ಗಳಲ್ಲಿಯೇ ಎರಡನೇ ಅತಿ ಹೆಚ್ಚು ರನ್‌ಗಳಾಗಿದೆ. ಈ ಬಾರಿ ಮೂರು ಅರ್ಧ ಶತಕ ಸಿಡಿಸಿರುವ ಅವರು 32 ಫೋರ್‌ ಮತ್ತು 08 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಅಲ್ಲದೆ ಉತ್ತಮ ನಾಯಕನಾಗಿಯೂ ಹೆಸರು ಗಳಿಸಿದ್ದಾರೆ. ಈ ಬಾರಿ ಚಾಂಪಿಯನ್ ಆಗುವ ಸಾಮರ್ಥ್ಯ ಹೊಂದಿದೆ ಈ ತಂಡ.

IPL 2022ರ ಪಾಯಿಂಟ್ಸ್ ಪಟ್ಟಿ

ಇನ್ನು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ತಾನ್ ತಂಡವು 9 ಪಂದ್ಯಗಳಲ್ಲಿ 6 ಅನ್ನು ಗೆದ್ದು 12 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಆ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಜಾಸ್ ಬಟ್ಲರ್ ಕೇವಲ 09 ಪಂದ್ಯಗಳಲ್ಲಿ 556 ರನ್ ಸಿಡಿಸಿದ್ದಾರೆ. ಅದರಲ್ಲಿ ಮೂರು ಶತಕ ಮತ್ತು ಮೂರು ಅರ್ಧ ಶತಕಗಳು ಸೇರಿವೆ. ಕನ್ನಡಿಗ ಕೆ.ಎಲ್ ರಾಹುಲ್ ನಾಯಕನಾಗಿರುವ ಲಕ್ನೋ ತಂಡ ಕೂಡ 9 ಪಂದ್ಯಗಳಲ್ಲಿ 6 ಅನ್ನು ಗೆದ್ದು 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ರಾಹುಲ್ ಕೂಡ 9 ಪಂದ್ಯಗಳಲ್ಲಿ ಎರಡು ಶತಕ ಮತ್ತು ಒಂದು ಅರ್ಧ ಶತಕದೊಂದಿಗೆ 374 ರನ್ ಗಳಿಸಿ ಮಿಂಚಿದ್ದಾರೆ. ಕೇನ್ ವಿಲಿಯಂಸನ್ ನಾಯಕತ್ವದ ಸನ್‌ ರೈಸರ್ಸ್ ಹೈದರಾಬಾದ್ 8 ಪಂದ್ಯಗಳಲ್ಲಿ 5 ಅನ್ನು ಗೆದ್ದು 10 ಅಂಕಗಳೊಂದಿಗೆ 4 ನೇ ಸ್ಥಾನ ಪಡೆದಿದೆ. ಡೆಲ್ಲಿ ಮತ್ತು ಪಂಜಾಬ್ ತಂಡಗಳು ಕ್ರಮವಾಗಿ 7 ಮತ್ತು 8ನೇ ಸ್ಥಾನ ಪಡೆದು ತಿಣುಕಾಡುತ್ತಿವೆ.

ಈ ಅಂಕಿ ಅಂಶಗಳು ಹೇಳುವುದೇನೆಂದರೆ ನಾಯಕತ್ವ ಮತ್ತು ತಂಡದ ಸ್ಥಿರ ಪ್ರದರ್ಶನಗಳು ಗೆಲುವಿಗೆ ಅಗತ್ಯವಾಗಿವೆ. ಹಲವಾರು ತಂಡಗಳು ಇವುಗಳಲ್ಲಿಯೇ ಎಡವುತ್ತಿವೆ. ಹಾಗಾಗಿ ನಾಯಕತ್ವ ಬದಲಾವಣೆ ಚರ್ಚೆಗಳು ಆರಂಭಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...