Homeಸಿನಿಮಾಕ್ರೀಡೆRCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

RCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದರೆ RCBಗೆ ಅನುಕೂಲ.

- Advertisement -
- Advertisement -

15ನೇ ಆವೃತ್ತಿಯ IPL2022 ರೋಚಕ ಘಟ್ಟಕ್ಕೆ ತಲುಪಿದೆ. ಲೀಗ್ ಹಂತದ ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇಆಫ್‌ ಹಂತಕ್ಕೆ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿದ್ದು, ಎಲ್ಲಾ ತಂಡಗಳಿಗೂ ಸಾಧ್ಯತೆಯಿದೆ. ಆದರೆ ಹೆಚ್ಚಿನ ಸಾಧ್ಯತೆ RCB ತಂಡಕ್ಕಿದೆ. ಆದರೆ ಈ ತಂಡಗಳು ಸೋತರಷ್ಟೆ ಅದಕ್ಕೆ ಅವಕಾಶ. ಅದು ಹೇಗೆ ಎಂಬುದನ್ನು ನೋಡೋಣ

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಉಳಿದ ನಾಲ್ಕು ತಂಡಗಳು ಸೋಲಬೇಕು ಮತ್ತು RCB ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಅದರೊಂದಿಗೆ ಪ್ಲೇಆಫ್ ಪೈಪೋಟಿಯಲ್ಲಿರುವ ಉಳಿದ ನಾಲ್ಕು ತಂಡಗಳ ನೆಟ್‌ ರನ್‌ರೇಟ್ ಹೆಚ್ಚಿದೆ ಮತ್ತು ಕೆಲವು ತಂಡಗಳಿಗೆ ಇನ್ನು ಎರಡು ಪಂದ್ಯ ಆಡುವ ಅವಕಾಶವಿದೆ. ಹಾಗಾಗಿ ಅವುಗಳು ಸೋತರಷ್ಟೆ ಆರ್‌ಸಿಬಿಗೆ ಅವಕಾಶ. ಒಂದೊಂದೆ ತಂಡಗಳ ವಿವರ ನೋಡೋಣ.

ಡೆಲ್ಲಿ ಕ್ಯಾಪಿಟಲ್ಸ್

13 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕ ಗಳಿಸಿರುವ ಉತ್ತಮ ಎನ್ನಬಹುದಾದ +255 ನೆಟ್ ರನ್‌ರೇಟ್ ಹೊಂದಿದೆ. ಅದು ಶನಿವಾರ ಮುಂಬೈ ಎದುರು ಸೆಣಸಲಿದೆ. ಅಲ್ಲಿ ಸೋತರೂ ಅದರ ಪ್ಲೇ ಆಫ್ ಕನಸು ಭಗ್ನಗೊಳ್ಳಲಿದೆ. ಅದು ಆರ್‌ಸಿಬಿಗೆ ರಹದಾರಿ ಮಾಡಿಕೊಡುತ್ತದೆ. ಒಂದು ವೇಳೆ ಆ ಪಂದ್ಯ ಗೆದ್ದಲ್ಲಿ ಅದು ಪ್ಲೇ ಆಫ್ ಪ್ರವೇಶಿಸುತ್ತದೆ ಮತ್ತು ಆರ್‌ಸಿಬಿ ಮನೆಗೆ ಹೋಗುತ್ತದೆ. ಏಕೆಂದರೆ ಡೆಲ್ಲಿ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಹೆಚ್ಚಿದೆ.

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಹೈದರಾಬಾದ್ ಸನ್‌ರೈಸರ್ಸ್

12 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 10 ಅಂಕ ಗಳಿಸಿರುವ ಹೈದರಾಬಾದ್ ತಂಡ -270 ರನ್ ರೇಟ್ ಹೊಂದಿದೆ. ಅದು ಮಂಗಳವಾರ ಚನ್ನೈ ಎದುರು ನಡೆಯುವ ಪಂದ್ಯದಲ್ಲಿ ಸೋಲಬೇಕು ನಂತರ ಭಾನುವಾರ ನಡೆಯುವ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಗೆಲ್ಲಬೇಕು. ಆಗ ಅದು ಒಟ್ಟು 12 ಅಂಕ ಗಳಿಸಿರುತ್ತದೆ (ಆರ್‌ಸಿಬಿಗಿಂತ ಕಡಿಮೆ)

ಪಂಜಾಬ್ ಕಿಂಗ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಪಂಜಾಬ್ ಕಿಂಗ್ಸ್ -043 ನೆಟ್ ರನ್ ರೇಟ್ ಹೊಂದಿದೆ. ಈ ತಂಡವು ಭಾನುವಾರ ಹೈದರಾಬಾದ್ ಎದುರು ನಡೆಯುವ ಪಂದ್ಯದಲ್ಲಿ ಸೋತರೆ ಆರ್‌ಸಿಬಿಗೆ ಅನುಕೂಲ. ಆಗ ಪಂಜಾಬ್ ಒಟ್ಟು 14 ಅಂಕ ಗಳಿಸಿರುತ್ತದೆ ಅಷ್ಟೇ.

ಕೋಲ್ಕತ್ತಾ ನೈಟ್ ರೈಡರ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ +160 ನೆಟ್ ರನ್ ರೇಟ್ ಹೊಂದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಎದುರು ಆಡಲಿದ್ದು ಅಲ್ಲಿ ಸೋತರೆ ಅದು ಮನೆಗೆ ಹೋಗುತ್ತದೆ. ಏಕೆಂದರೆ ಅದು ಕೇವಲ 12 ಅಂಕಗಳಿಗೆ ಸೀಮತವಾಗಲಿದೆ.

ಇಷ್ಟೆಲ್ಲಾ ಆಗಬೇಕಾದರೆ ಆರ್‌ಸಿಬಿ ತನ್ನ ಕಡೆಯ ಪಂದ್ಯ ಗುಜರಾತ್ ಎದುರು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕು. ಅಲ್ಲಿ ಸೋತರೆ ಉಳಿದ ತಂಡಗಳಿಗೆ ವರವಾಗುತ್ತದೆ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಮುಂಬೈ ತಂಡ ಗೆಲ್ಲಲಿ ಎಂದು ಆರ್‌ಸಿಬಿ ಹಾರೈಸಬೇಕಾಗಿದೆ. ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧ ಆಡಲಿದೆ. ಆ ಎರಡನ್ನು ಗೆದ್ದರೆ ಆ ಎರಡೂ ತಂಡಗಳನ್ನು ತಮ್ಮೊಡನೆ ಮನೆಗೆ ಕರೆದುಕೊಂಡು ಹೋಗಬಹುದಾಗಿದೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...