Homeಸಿನಿಮಾಕ್ರೀಡೆRCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

RCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದರೆ RCBಗೆ ಅನುಕೂಲ.

- Advertisement -
- Advertisement -

15ನೇ ಆವೃತ್ತಿಯ IPL2022 ರೋಚಕ ಘಟ್ಟಕ್ಕೆ ತಲುಪಿದೆ. ಲೀಗ್ ಹಂತದ ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇಆಫ್‌ ಹಂತಕ್ಕೆ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿದ್ದು, ಎಲ್ಲಾ ತಂಡಗಳಿಗೂ ಸಾಧ್ಯತೆಯಿದೆ. ಆದರೆ ಹೆಚ್ಚಿನ ಸಾಧ್ಯತೆ RCB ತಂಡಕ್ಕಿದೆ. ಆದರೆ ಈ ತಂಡಗಳು ಸೋತರಷ್ಟೆ ಅದಕ್ಕೆ ಅವಕಾಶ. ಅದು ಹೇಗೆ ಎಂಬುದನ್ನು ನೋಡೋಣ

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಉಳಿದ ನಾಲ್ಕು ತಂಡಗಳು ಸೋಲಬೇಕು ಮತ್ತು RCB ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಅದರೊಂದಿಗೆ ಪ್ಲೇಆಫ್ ಪೈಪೋಟಿಯಲ್ಲಿರುವ ಉಳಿದ ನಾಲ್ಕು ತಂಡಗಳ ನೆಟ್‌ ರನ್‌ರೇಟ್ ಹೆಚ್ಚಿದೆ ಮತ್ತು ಕೆಲವು ತಂಡಗಳಿಗೆ ಇನ್ನು ಎರಡು ಪಂದ್ಯ ಆಡುವ ಅವಕಾಶವಿದೆ. ಹಾಗಾಗಿ ಅವುಗಳು ಸೋತರಷ್ಟೆ ಆರ್‌ಸಿಬಿಗೆ ಅವಕಾಶ. ಒಂದೊಂದೆ ತಂಡಗಳ ವಿವರ ನೋಡೋಣ.

ಡೆಲ್ಲಿ ಕ್ಯಾಪಿಟಲ್ಸ್

13 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕ ಗಳಿಸಿರುವ ಉತ್ತಮ ಎನ್ನಬಹುದಾದ +255 ನೆಟ್ ರನ್‌ರೇಟ್ ಹೊಂದಿದೆ. ಅದು ಶನಿವಾರ ಮುಂಬೈ ಎದುರು ಸೆಣಸಲಿದೆ. ಅಲ್ಲಿ ಸೋತರೂ ಅದರ ಪ್ಲೇ ಆಫ್ ಕನಸು ಭಗ್ನಗೊಳ್ಳಲಿದೆ. ಅದು ಆರ್‌ಸಿಬಿಗೆ ರಹದಾರಿ ಮಾಡಿಕೊಡುತ್ತದೆ. ಒಂದು ವೇಳೆ ಆ ಪಂದ್ಯ ಗೆದ್ದಲ್ಲಿ ಅದು ಪ್ಲೇ ಆಫ್ ಪ್ರವೇಶಿಸುತ್ತದೆ ಮತ್ತು ಆರ್‌ಸಿಬಿ ಮನೆಗೆ ಹೋಗುತ್ತದೆ. ಏಕೆಂದರೆ ಡೆಲ್ಲಿ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಹೆಚ್ಚಿದೆ.

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಹೈದರಾಬಾದ್ ಸನ್‌ರೈಸರ್ಸ್

12 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 10 ಅಂಕ ಗಳಿಸಿರುವ ಹೈದರಾಬಾದ್ ತಂಡ -270 ರನ್ ರೇಟ್ ಹೊಂದಿದೆ. ಅದು ಮಂಗಳವಾರ ಚನ್ನೈ ಎದುರು ನಡೆಯುವ ಪಂದ್ಯದಲ್ಲಿ ಸೋಲಬೇಕು ನಂತರ ಭಾನುವಾರ ನಡೆಯುವ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಗೆಲ್ಲಬೇಕು. ಆಗ ಅದು ಒಟ್ಟು 12 ಅಂಕ ಗಳಿಸಿರುತ್ತದೆ (ಆರ್‌ಸಿಬಿಗಿಂತ ಕಡಿಮೆ)

ಪಂಜಾಬ್ ಕಿಂಗ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಪಂಜಾಬ್ ಕಿಂಗ್ಸ್ -043 ನೆಟ್ ರನ್ ರೇಟ್ ಹೊಂದಿದೆ. ಈ ತಂಡವು ಭಾನುವಾರ ಹೈದರಾಬಾದ್ ಎದುರು ನಡೆಯುವ ಪಂದ್ಯದಲ್ಲಿ ಸೋತರೆ ಆರ್‌ಸಿಬಿಗೆ ಅನುಕೂಲ. ಆಗ ಪಂಜಾಬ್ ಒಟ್ಟು 14 ಅಂಕ ಗಳಿಸಿರುತ್ತದೆ ಅಷ್ಟೇ.

ಕೋಲ್ಕತ್ತಾ ನೈಟ್ ರೈಡರ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ +160 ನೆಟ್ ರನ್ ರೇಟ್ ಹೊಂದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಎದುರು ಆಡಲಿದ್ದು ಅಲ್ಲಿ ಸೋತರೆ ಅದು ಮನೆಗೆ ಹೋಗುತ್ತದೆ. ಏಕೆಂದರೆ ಅದು ಕೇವಲ 12 ಅಂಕಗಳಿಗೆ ಸೀಮತವಾಗಲಿದೆ.

ಇಷ್ಟೆಲ್ಲಾ ಆಗಬೇಕಾದರೆ ಆರ್‌ಸಿಬಿ ತನ್ನ ಕಡೆಯ ಪಂದ್ಯ ಗುಜರಾತ್ ಎದುರು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕು. ಅಲ್ಲಿ ಸೋತರೆ ಉಳಿದ ತಂಡಗಳಿಗೆ ವರವಾಗುತ್ತದೆ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಮುಂಬೈ ತಂಡ ಗೆಲ್ಲಲಿ ಎಂದು ಆರ್‌ಸಿಬಿ ಹಾರೈಸಬೇಕಾಗಿದೆ. ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧ ಆಡಲಿದೆ. ಆ ಎರಡನ್ನು ಗೆದ್ದರೆ ಆ ಎರಡೂ ತಂಡಗಳನ್ನು ತಮ್ಮೊಡನೆ ಮನೆಗೆ ಕರೆದುಕೊಂಡು ಹೋಗಬಹುದಾಗಿದೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...