Homeಸಿನಿಮಾಕ್ರೀಡೆRCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

RCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದರೆ RCBಗೆ ಅನುಕೂಲ.

- Advertisement -
- Advertisement -

15ನೇ ಆವೃತ್ತಿಯ IPL2022 ರೋಚಕ ಘಟ್ಟಕ್ಕೆ ತಲುಪಿದೆ. ಲೀಗ್ ಹಂತದ ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇಆಫ್‌ ಹಂತಕ್ಕೆ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿದ್ದು, ಎಲ್ಲಾ ತಂಡಗಳಿಗೂ ಸಾಧ್ಯತೆಯಿದೆ. ಆದರೆ ಹೆಚ್ಚಿನ ಸಾಧ್ಯತೆ RCB ತಂಡಕ್ಕಿದೆ. ಆದರೆ ಈ ತಂಡಗಳು ಸೋತರಷ್ಟೆ ಅದಕ್ಕೆ ಅವಕಾಶ. ಅದು ಹೇಗೆ ಎಂಬುದನ್ನು ನೋಡೋಣ

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಉಳಿದ ನಾಲ್ಕು ತಂಡಗಳು ಸೋಲಬೇಕು ಮತ್ತು RCB ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಅದರೊಂದಿಗೆ ಪ್ಲೇಆಫ್ ಪೈಪೋಟಿಯಲ್ಲಿರುವ ಉಳಿದ ನಾಲ್ಕು ತಂಡಗಳ ನೆಟ್‌ ರನ್‌ರೇಟ್ ಹೆಚ್ಚಿದೆ ಮತ್ತು ಕೆಲವು ತಂಡಗಳಿಗೆ ಇನ್ನು ಎರಡು ಪಂದ್ಯ ಆಡುವ ಅವಕಾಶವಿದೆ. ಹಾಗಾಗಿ ಅವುಗಳು ಸೋತರಷ್ಟೆ ಆರ್‌ಸಿಬಿಗೆ ಅವಕಾಶ. ಒಂದೊಂದೆ ತಂಡಗಳ ವಿವರ ನೋಡೋಣ.

ಡೆಲ್ಲಿ ಕ್ಯಾಪಿಟಲ್ಸ್

13 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕ ಗಳಿಸಿರುವ ಉತ್ತಮ ಎನ್ನಬಹುದಾದ +255 ನೆಟ್ ರನ್‌ರೇಟ್ ಹೊಂದಿದೆ. ಅದು ಶನಿವಾರ ಮುಂಬೈ ಎದುರು ಸೆಣಸಲಿದೆ. ಅಲ್ಲಿ ಸೋತರೂ ಅದರ ಪ್ಲೇ ಆಫ್ ಕನಸು ಭಗ್ನಗೊಳ್ಳಲಿದೆ. ಅದು ಆರ್‌ಸಿಬಿಗೆ ರಹದಾರಿ ಮಾಡಿಕೊಡುತ್ತದೆ. ಒಂದು ವೇಳೆ ಆ ಪಂದ್ಯ ಗೆದ್ದಲ್ಲಿ ಅದು ಪ್ಲೇ ಆಫ್ ಪ್ರವೇಶಿಸುತ್ತದೆ ಮತ್ತು ಆರ್‌ಸಿಬಿ ಮನೆಗೆ ಹೋಗುತ್ತದೆ. ಏಕೆಂದರೆ ಡೆಲ್ಲಿ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಹೆಚ್ಚಿದೆ.

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಹೈದರಾಬಾದ್ ಸನ್‌ರೈಸರ್ಸ್

12 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 10 ಅಂಕ ಗಳಿಸಿರುವ ಹೈದರಾಬಾದ್ ತಂಡ -270 ರನ್ ರೇಟ್ ಹೊಂದಿದೆ. ಅದು ಮಂಗಳವಾರ ಚನ್ನೈ ಎದುರು ನಡೆಯುವ ಪಂದ್ಯದಲ್ಲಿ ಸೋಲಬೇಕು ನಂತರ ಭಾನುವಾರ ನಡೆಯುವ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಗೆಲ್ಲಬೇಕು. ಆಗ ಅದು ಒಟ್ಟು 12 ಅಂಕ ಗಳಿಸಿರುತ್ತದೆ (ಆರ್‌ಸಿಬಿಗಿಂತ ಕಡಿಮೆ)

ಪಂಜಾಬ್ ಕಿಂಗ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಪಂಜಾಬ್ ಕಿಂಗ್ಸ್ -043 ನೆಟ್ ರನ್ ರೇಟ್ ಹೊಂದಿದೆ. ಈ ತಂಡವು ಭಾನುವಾರ ಹೈದರಾಬಾದ್ ಎದುರು ನಡೆಯುವ ಪಂದ್ಯದಲ್ಲಿ ಸೋತರೆ ಆರ್‌ಸಿಬಿಗೆ ಅನುಕೂಲ. ಆಗ ಪಂಜಾಬ್ ಒಟ್ಟು 14 ಅಂಕ ಗಳಿಸಿರುತ್ತದೆ ಅಷ್ಟೇ.

ಕೋಲ್ಕತ್ತಾ ನೈಟ್ ರೈಡರ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ +160 ನೆಟ್ ರನ್ ರೇಟ್ ಹೊಂದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಎದುರು ಆಡಲಿದ್ದು ಅಲ್ಲಿ ಸೋತರೆ ಅದು ಮನೆಗೆ ಹೋಗುತ್ತದೆ. ಏಕೆಂದರೆ ಅದು ಕೇವಲ 12 ಅಂಕಗಳಿಗೆ ಸೀಮತವಾಗಲಿದೆ.

ಇಷ್ಟೆಲ್ಲಾ ಆಗಬೇಕಾದರೆ ಆರ್‌ಸಿಬಿ ತನ್ನ ಕಡೆಯ ಪಂದ್ಯ ಗುಜರಾತ್ ಎದುರು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕು. ಅಲ್ಲಿ ಸೋತರೆ ಉಳಿದ ತಂಡಗಳಿಗೆ ವರವಾಗುತ್ತದೆ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಮುಂಬೈ ತಂಡ ಗೆಲ್ಲಲಿ ಎಂದು ಆರ್‌ಸಿಬಿ ಹಾರೈಸಬೇಕಾಗಿದೆ. ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧ ಆಡಲಿದೆ. ಆ ಎರಡನ್ನು ಗೆದ್ದರೆ ಆ ಎರಡೂ ತಂಡಗಳನ್ನು ತಮ್ಮೊಡನೆ ಮನೆಗೆ ಕರೆದುಕೊಂಡು ಹೋಗಬಹುದಾಗಿದೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...