Homeಸಿನಿಮಾಕ್ರೀಡೆRCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

RCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದರೆ RCBಗೆ ಅನುಕೂಲ.

- Advertisement -
- Advertisement -

15ನೇ ಆವೃತ್ತಿಯ IPL2022 ರೋಚಕ ಘಟ್ಟಕ್ಕೆ ತಲುಪಿದೆ. ಲೀಗ್ ಹಂತದ ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇಆಫ್‌ ಹಂತಕ್ಕೆ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿದ್ದು, ಎಲ್ಲಾ ತಂಡಗಳಿಗೂ ಸಾಧ್ಯತೆಯಿದೆ. ಆದರೆ ಹೆಚ್ಚಿನ ಸಾಧ್ಯತೆ RCB ತಂಡಕ್ಕಿದೆ. ಆದರೆ ಈ ತಂಡಗಳು ಸೋತರಷ್ಟೆ ಅದಕ್ಕೆ ಅವಕಾಶ. ಅದು ಹೇಗೆ ಎಂಬುದನ್ನು ನೋಡೋಣ

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಉಳಿದ ನಾಲ್ಕು ತಂಡಗಳು ಸೋಲಬೇಕು ಮತ್ತು RCB ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಅದರೊಂದಿಗೆ ಪ್ಲೇಆಫ್ ಪೈಪೋಟಿಯಲ್ಲಿರುವ ಉಳಿದ ನಾಲ್ಕು ತಂಡಗಳ ನೆಟ್‌ ರನ್‌ರೇಟ್ ಹೆಚ್ಚಿದೆ ಮತ್ತು ಕೆಲವು ತಂಡಗಳಿಗೆ ಇನ್ನು ಎರಡು ಪಂದ್ಯ ಆಡುವ ಅವಕಾಶವಿದೆ. ಹಾಗಾಗಿ ಅವುಗಳು ಸೋತರಷ್ಟೆ ಆರ್‌ಸಿಬಿಗೆ ಅವಕಾಶ. ಒಂದೊಂದೆ ತಂಡಗಳ ವಿವರ ನೋಡೋಣ.

ಡೆಲ್ಲಿ ಕ್ಯಾಪಿಟಲ್ಸ್

13 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕ ಗಳಿಸಿರುವ ಉತ್ತಮ ಎನ್ನಬಹುದಾದ +255 ನೆಟ್ ರನ್‌ರೇಟ್ ಹೊಂದಿದೆ. ಅದು ಶನಿವಾರ ಮುಂಬೈ ಎದುರು ಸೆಣಸಲಿದೆ. ಅಲ್ಲಿ ಸೋತರೂ ಅದರ ಪ್ಲೇ ಆಫ್ ಕನಸು ಭಗ್ನಗೊಳ್ಳಲಿದೆ. ಅದು ಆರ್‌ಸಿಬಿಗೆ ರಹದಾರಿ ಮಾಡಿಕೊಡುತ್ತದೆ. ಒಂದು ವೇಳೆ ಆ ಪಂದ್ಯ ಗೆದ್ದಲ್ಲಿ ಅದು ಪ್ಲೇ ಆಫ್ ಪ್ರವೇಶಿಸುತ್ತದೆ ಮತ್ತು ಆರ್‌ಸಿಬಿ ಮನೆಗೆ ಹೋಗುತ್ತದೆ. ಏಕೆಂದರೆ ಡೆಲ್ಲಿ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಹೆಚ್ಚಿದೆ.

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಹೈದರಾಬಾದ್ ಸನ್‌ರೈಸರ್ಸ್

12 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 10 ಅಂಕ ಗಳಿಸಿರುವ ಹೈದರಾಬಾದ್ ತಂಡ -270 ರನ್ ರೇಟ್ ಹೊಂದಿದೆ. ಅದು ಮಂಗಳವಾರ ಚನ್ನೈ ಎದುರು ನಡೆಯುವ ಪಂದ್ಯದಲ್ಲಿ ಸೋಲಬೇಕು ನಂತರ ಭಾನುವಾರ ನಡೆಯುವ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಗೆಲ್ಲಬೇಕು. ಆಗ ಅದು ಒಟ್ಟು 12 ಅಂಕ ಗಳಿಸಿರುತ್ತದೆ (ಆರ್‌ಸಿಬಿಗಿಂತ ಕಡಿಮೆ)

ಪಂಜಾಬ್ ಕಿಂಗ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಪಂಜಾಬ್ ಕಿಂಗ್ಸ್ -043 ನೆಟ್ ರನ್ ರೇಟ್ ಹೊಂದಿದೆ. ಈ ತಂಡವು ಭಾನುವಾರ ಹೈದರಾಬಾದ್ ಎದುರು ನಡೆಯುವ ಪಂದ್ಯದಲ್ಲಿ ಸೋತರೆ ಆರ್‌ಸಿಬಿಗೆ ಅನುಕೂಲ. ಆಗ ಪಂಜಾಬ್ ಒಟ್ಟು 14 ಅಂಕ ಗಳಿಸಿರುತ್ತದೆ ಅಷ್ಟೇ.

ಕೋಲ್ಕತ್ತಾ ನೈಟ್ ರೈಡರ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ +160 ನೆಟ್ ರನ್ ರೇಟ್ ಹೊಂದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಎದುರು ಆಡಲಿದ್ದು ಅಲ್ಲಿ ಸೋತರೆ ಅದು ಮನೆಗೆ ಹೋಗುತ್ತದೆ. ಏಕೆಂದರೆ ಅದು ಕೇವಲ 12 ಅಂಕಗಳಿಗೆ ಸೀಮತವಾಗಲಿದೆ.

ಇಷ್ಟೆಲ್ಲಾ ಆಗಬೇಕಾದರೆ ಆರ್‌ಸಿಬಿ ತನ್ನ ಕಡೆಯ ಪಂದ್ಯ ಗುಜರಾತ್ ಎದುರು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕು. ಅಲ್ಲಿ ಸೋತರೆ ಉಳಿದ ತಂಡಗಳಿಗೆ ವರವಾಗುತ್ತದೆ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಮುಂಬೈ ತಂಡ ಗೆಲ್ಲಲಿ ಎಂದು ಆರ್‌ಸಿಬಿ ಹಾರೈಸಬೇಕಾಗಿದೆ. ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧ ಆಡಲಿದೆ. ಆ ಎರಡನ್ನು ಗೆದ್ದರೆ ಆ ಎರಡೂ ತಂಡಗಳನ್ನು ತಮ್ಮೊಡನೆ ಮನೆಗೆ ಕರೆದುಕೊಂಡು ಹೋಗಬಹುದಾಗಿದೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...