Homeಸಿನಿಮಾಕ್ರೀಡೆRCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

RCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದರೆ RCBಗೆ ಅನುಕೂಲ.

- Advertisement -
- Advertisement -

15ನೇ ಆವೃತ್ತಿಯ IPL2022 ರೋಚಕ ಘಟ್ಟಕ್ಕೆ ತಲುಪಿದೆ. ಲೀಗ್ ಹಂತದ ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇಆಫ್‌ ಹಂತಕ್ಕೆ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿದ್ದು, ಎಲ್ಲಾ ತಂಡಗಳಿಗೂ ಸಾಧ್ಯತೆಯಿದೆ. ಆದರೆ ಹೆಚ್ಚಿನ ಸಾಧ್ಯತೆ RCB ತಂಡಕ್ಕಿದೆ. ಆದರೆ ಈ ತಂಡಗಳು ಸೋತರಷ್ಟೆ ಅದಕ್ಕೆ ಅವಕಾಶ. ಅದು ಹೇಗೆ ಎಂಬುದನ್ನು ನೋಡೋಣ

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಉಳಿದ ನಾಲ್ಕು ತಂಡಗಳು ಸೋಲಬೇಕು ಮತ್ತು RCB ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಅದರೊಂದಿಗೆ ಪ್ಲೇಆಫ್ ಪೈಪೋಟಿಯಲ್ಲಿರುವ ಉಳಿದ ನಾಲ್ಕು ತಂಡಗಳ ನೆಟ್‌ ರನ್‌ರೇಟ್ ಹೆಚ್ಚಿದೆ ಮತ್ತು ಕೆಲವು ತಂಡಗಳಿಗೆ ಇನ್ನು ಎರಡು ಪಂದ್ಯ ಆಡುವ ಅವಕಾಶವಿದೆ. ಹಾಗಾಗಿ ಅವುಗಳು ಸೋತರಷ್ಟೆ ಆರ್‌ಸಿಬಿಗೆ ಅವಕಾಶ. ಒಂದೊಂದೆ ತಂಡಗಳ ವಿವರ ನೋಡೋಣ.

ಡೆಲ್ಲಿ ಕ್ಯಾಪಿಟಲ್ಸ್

13 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕ ಗಳಿಸಿರುವ ಉತ್ತಮ ಎನ್ನಬಹುದಾದ +255 ನೆಟ್ ರನ್‌ರೇಟ್ ಹೊಂದಿದೆ. ಅದು ಶನಿವಾರ ಮುಂಬೈ ಎದುರು ಸೆಣಸಲಿದೆ. ಅಲ್ಲಿ ಸೋತರೂ ಅದರ ಪ್ಲೇ ಆಫ್ ಕನಸು ಭಗ್ನಗೊಳ್ಳಲಿದೆ. ಅದು ಆರ್‌ಸಿಬಿಗೆ ರಹದಾರಿ ಮಾಡಿಕೊಡುತ್ತದೆ. ಒಂದು ವೇಳೆ ಆ ಪಂದ್ಯ ಗೆದ್ದಲ್ಲಿ ಅದು ಪ್ಲೇ ಆಫ್ ಪ್ರವೇಶಿಸುತ್ತದೆ ಮತ್ತು ಆರ್‌ಸಿಬಿ ಮನೆಗೆ ಹೋಗುತ್ತದೆ. ಏಕೆಂದರೆ ಡೆಲ್ಲಿ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಹೆಚ್ಚಿದೆ.

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಹೈದರಾಬಾದ್ ಸನ್‌ರೈಸರ್ಸ್

12 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 10 ಅಂಕ ಗಳಿಸಿರುವ ಹೈದರಾಬಾದ್ ತಂಡ -270 ರನ್ ರೇಟ್ ಹೊಂದಿದೆ. ಅದು ಮಂಗಳವಾರ ಚನ್ನೈ ಎದುರು ನಡೆಯುವ ಪಂದ್ಯದಲ್ಲಿ ಸೋಲಬೇಕು ನಂತರ ಭಾನುವಾರ ನಡೆಯುವ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಗೆಲ್ಲಬೇಕು. ಆಗ ಅದು ಒಟ್ಟು 12 ಅಂಕ ಗಳಿಸಿರುತ್ತದೆ (ಆರ್‌ಸಿಬಿಗಿಂತ ಕಡಿಮೆ)

ಪಂಜಾಬ್ ಕಿಂಗ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಪಂಜಾಬ್ ಕಿಂಗ್ಸ್ -043 ನೆಟ್ ರನ್ ರೇಟ್ ಹೊಂದಿದೆ. ಈ ತಂಡವು ಭಾನುವಾರ ಹೈದರಾಬಾದ್ ಎದುರು ನಡೆಯುವ ಪಂದ್ಯದಲ್ಲಿ ಸೋತರೆ ಆರ್‌ಸಿಬಿಗೆ ಅನುಕೂಲ. ಆಗ ಪಂಜಾಬ್ ಒಟ್ಟು 14 ಅಂಕ ಗಳಿಸಿರುತ್ತದೆ ಅಷ್ಟೇ.

ಕೋಲ್ಕತ್ತಾ ನೈಟ್ ರೈಡರ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ +160 ನೆಟ್ ರನ್ ರೇಟ್ ಹೊಂದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಎದುರು ಆಡಲಿದ್ದು ಅಲ್ಲಿ ಸೋತರೆ ಅದು ಮನೆಗೆ ಹೋಗುತ್ತದೆ. ಏಕೆಂದರೆ ಅದು ಕೇವಲ 12 ಅಂಕಗಳಿಗೆ ಸೀಮತವಾಗಲಿದೆ.

ಇಷ್ಟೆಲ್ಲಾ ಆಗಬೇಕಾದರೆ ಆರ್‌ಸಿಬಿ ತನ್ನ ಕಡೆಯ ಪಂದ್ಯ ಗುಜರಾತ್ ಎದುರು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕು. ಅಲ್ಲಿ ಸೋತರೆ ಉಳಿದ ತಂಡಗಳಿಗೆ ವರವಾಗುತ್ತದೆ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಮುಂಬೈ ತಂಡ ಗೆಲ್ಲಲಿ ಎಂದು ಆರ್‌ಸಿಬಿ ಹಾರೈಸಬೇಕಾಗಿದೆ. ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧ ಆಡಲಿದೆ. ಆ ಎರಡನ್ನು ಗೆದ್ದರೆ ಆ ಎರಡೂ ತಂಡಗಳನ್ನು ತಮ್ಮೊಡನೆ ಮನೆಗೆ ಕರೆದುಕೊಂಡು ಹೋಗಬಹುದಾಗಿದೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...