Homeಸಿನಿಮಾಕ್ರೀಡೆRCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

RCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದರೆ RCBಗೆ ಅನುಕೂಲ.

- Advertisement -
- Advertisement -

15ನೇ ಆವೃತ್ತಿಯ IPL2022 ರೋಚಕ ಘಟ್ಟಕ್ಕೆ ತಲುಪಿದೆ. ಲೀಗ್ ಹಂತದ ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇಆಫ್‌ ಹಂತಕ್ಕೆ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿದ್ದು, ಎಲ್ಲಾ ತಂಡಗಳಿಗೂ ಸಾಧ್ಯತೆಯಿದೆ. ಆದರೆ ಹೆಚ್ಚಿನ ಸಾಧ್ಯತೆ RCB ತಂಡಕ್ಕಿದೆ. ಆದರೆ ಈ ತಂಡಗಳು ಸೋತರಷ್ಟೆ ಅದಕ್ಕೆ ಅವಕಾಶ. ಅದು ಹೇಗೆ ಎಂಬುದನ್ನು ನೋಡೋಣ

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಉಳಿದ ನಾಲ್ಕು ತಂಡಗಳು ಸೋಲಬೇಕು ಮತ್ತು RCB ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಅದರೊಂದಿಗೆ ಪ್ಲೇಆಫ್ ಪೈಪೋಟಿಯಲ್ಲಿರುವ ಉಳಿದ ನಾಲ್ಕು ತಂಡಗಳ ನೆಟ್‌ ರನ್‌ರೇಟ್ ಹೆಚ್ಚಿದೆ ಮತ್ತು ಕೆಲವು ತಂಡಗಳಿಗೆ ಇನ್ನು ಎರಡು ಪಂದ್ಯ ಆಡುವ ಅವಕಾಶವಿದೆ. ಹಾಗಾಗಿ ಅವುಗಳು ಸೋತರಷ್ಟೆ ಆರ್‌ಸಿಬಿಗೆ ಅವಕಾಶ. ಒಂದೊಂದೆ ತಂಡಗಳ ವಿವರ ನೋಡೋಣ.

ಡೆಲ್ಲಿ ಕ್ಯಾಪಿಟಲ್ಸ್

13 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕ ಗಳಿಸಿರುವ ಉತ್ತಮ ಎನ್ನಬಹುದಾದ +255 ನೆಟ್ ರನ್‌ರೇಟ್ ಹೊಂದಿದೆ. ಅದು ಶನಿವಾರ ಮುಂಬೈ ಎದುರು ಸೆಣಸಲಿದೆ. ಅಲ್ಲಿ ಸೋತರೂ ಅದರ ಪ್ಲೇ ಆಫ್ ಕನಸು ಭಗ್ನಗೊಳ್ಳಲಿದೆ. ಅದು ಆರ್‌ಸಿಬಿಗೆ ರಹದಾರಿ ಮಾಡಿಕೊಡುತ್ತದೆ. ಒಂದು ವೇಳೆ ಆ ಪಂದ್ಯ ಗೆದ್ದಲ್ಲಿ ಅದು ಪ್ಲೇ ಆಫ್ ಪ್ರವೇಶಿಸುತ್ತದೆ ಮತ್ತು ಆರ್‌ಸಿಬಿ ಮನೆಗೆ ಹೋಗುತ್ತದೆ. ಏಕೆಂದರೆ ಡೆಲ್ಲಿ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಹೆಚ್ಚಿದೆ.

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಹೈದರಾಬಾದ್ ಸನ್‌ರೈಸರ್ಸ್

12 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 10 ಅಂಕ ಗಳಿಸಿರುವ ಹೈದರಾಬಾದ್ ತಂಡ -270 ರನ್ ರೇಟ್ ಹೊಂದಿದೆ. ಅದು ಮಂಗಳವಾರ ಚನ್ನೈ ಎದುರು ನಡೆಯುವ ಪಂದ್ಯದಲ್ಲಿ ಸೋಲಬೇಕು ನಂತರ ಭಾನುವಾರ ನಡೆಯುವ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಗೆಲ್ಲಬೇಕು. ಆಗ ಅದು ಒಟ್ಟು 12 ಅಂಕ ಗಳಿಸಿರುತ್ತದೆ (ಆರ್‌ಸಿಬಿಗಿಂತ ಕಡಿಮೆ)

ಪಂಜಾಬ್ ಕಿಂಗ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಪಂಜಾಬ್ ಕಿಂಗ್ಸ್ -043 ನೆಟ್ ರನ್ ರೇಟ್ ಹೊಂದಿದೆ. ಈ ತಂಡವು ಭಾನುವಾರ ಹೈದರಾಬಾದ್ ಎದುರು ನಡೆಯುವ ಪಂದ್ಯದಲ್ಲಿ ಸೋತರೆ ಆರ್‌ಸಿಬಿಗೆ ಅನುಕೂಲ. ಆಗ ಪಂಜಾಬ್ ಒಟ್ಟು 14 ಅಂಕ ಗಳಿಸಿರುತ್ತದೆ ಅಷ್ಟೇ.

ಕೋಲ್ಕತ್ತಾ ನೈಟ್ ರೈಡರ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ +160 ನೆಟ್ ರನ್ ರೇಟ್ ಹೊಂದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಎದುರು ಆಡಲಿದ್ದು ಅಲ್ಲಿ ಸೋತರೆ ಅದು ಮನೆಗೆ ಹೋಗುತ್ತದೆ. ಏಕೆಂದರೆ ಅದು ಕೇವಲ 12 ಅಂಕಗಳಿಗೆ ಸೀಮತವಾಗಲಿದೆ.

ಇಷ್ಟೆಲ್ಲಾ ಆಗಬೇಕಾದರೆ ಆರ್‌ಸಿಬಿ ತನ್ನ ಕಡೆಯ ಪಂದ್ಯ ಗುಜರಾತ್ ಎದುರು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕು. ಅಲ್ಲಿ ಸೋತರೆ ಉಳಿದ ತಂಡಗಳಿಗೆ ವರವಾಗುತ್ತದೆ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಮುಂಬೈ ತಂಡ ಗೆಲ್ಲಲಿ ಎಂದು ಆರ್‌ಸಿಬಿ ಹಾರೈಸಬೇಕಾಗಿದೆ. ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧ ಆಡಲಿದೆ. ಆ ಎರಡನ್ನು ಗೆದ್ದರೆ ಆ ಎರಡೂ ತಂಡಗಳನ್ನು ತಮ್ಮೊಡನೆ ಮನೆಗೆ ಕರೆದುಕೊಂಡು ಹೋಗಬಹುದಾಗಿದೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...