Homeಸಿನಿಮಾಕ್ರೀಡೆಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

ಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

- Advertisement -
- Advertisement -

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ RCB ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಆ ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ RCB ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಟೈಟನ್ಸ್ ಆರಂಭದಲ್ಲೆ ಎಡವಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‌ಗೆ ಹೆಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಮ್ಯಾಕ್ಸ್‌ವೆಲ್ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದು ಗಿಲ್ ರನ್ನು ಪೆವಿಲಿಯನ್‌ಗೆ ಕಳಿಸಿದರು. ನಂತರ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಾಡೆ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆನಂತರ ಉತ್ತಮವಾಗಿ ಆಡುತ್ತಿದ್ದ ವೃದ್ದಿಮಾನ್ ಶಾ ರನ್‌ ಔಟ್ ಆಗಿ 31ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಲ್ಲರ್ 34 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 64 ಗಳಿಸಿ ನಾಟ್‌ ಔಟ್ ಆದರು. ಕೊನೆಯಲ್ಲಿ ಬಂದ ರ‍ಶೀದ್ ಖಾನ್ 19 ರನ್ ಸಿಡಿಸಿ ತಂಡಕ್ಕೆ ನೆರವಾದರು. ಗುಜರಾತ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.

ಸಾಧಾರಣ ಮೊತ್ತ ಬೆನ್ನಟ್ಟಿದ್ದ ಆರ್‌ಸಿಬಿ ಉತ್ತಮ ಆರಂಭ ಕಂಡಿತು. ಮೊದಲ ವಿಕೆಟ್ ಜೊತೆಯಾಟಕ್ಕೆ ವಿರಾಟ್ ಮತ್ತು ಡುಪ್ಲೆಸಿಸ್ 115 ರನ್ ಗಳಿಸಿದರು. ಡುಪ್ಲೆಸಿಸ್ 44 ರನ್ ಗಳಿಸಿ ಔಟ್ ಆದರೆ ವಿರಾಟ್ 73 ರನ್ ಚಚ್ಚಿದರು. ನಂತರ ಕ್ರೀಸ್‌ಗಿಳಿದ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ 40 ರನ್‌ ಬಾರಿಸಿ ಇನ್ನು 8 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರ್‌ಸಿಬಿ 8 ವಿಕೆಟ್‌ಗಳ ಜಯ ಸಾಧಿಸಿತು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

IPL 2022ರ ಲೀಗ್ ಹಂತದ ಮೂರು ಪಂದ್ಯಗಳು ಮಾತ್ರ ಉಳಿದಿದ್ದು, ಪ್ಲೇಆಫ್ ಪ್ರವೇಶಿಸಲು RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇಂದು ಪಂದ್ಯ ಗೆದ್ದಿರುವ ಆರ್‌ಸಿಬಿ 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಶನಿವಾರ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಗೆಲುವಿಗಾಗಿ ಪ್ರಾರ್ಥಿಸಬೇಕಿದೆ. ಏಕೆಂದರೆ ಬೆಂಗಳೂರು ತಂಡದ ನೆಟ್‌ ರನ್‌ ರೇಟ್ -253 ಇದೆ. ಆದರೆ ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 20 ಮತ್ತು 18 ಅಂಕಗಳೊಂದಿಗೆ ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕ ಗಳಿಸಿದ್ದು +304 ನೆಟ್‌ ರನ್‌ ರೇಟ್ ಹೊಂದಿರುವ ಕಾರಣ ಅದು ಕೂಡ ಪ್ಲೇಆಫ್ ಪ್ರವೇಶದ ಹೊಸ್ತಿಲಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಶುಕ್ರವಾರ ಚನ್ನೈ ಎದುರು ಸೆಣಸಲಿದ್ದು, ಗೆದ್ದರೂ ಅಥವಾ ಕಡಿಮೆ ಅಂತರದಿಂದ ಸೋತರೂ ಸಹ ಅದ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಭಾರೀ ಅಂತರದಿಂದ ಸೋತಲ್ಲಿ ಮಾತ್ರ ಅದರ ನೆಟ್‌ ರನ್‌ ರೇಟ್ ಲೆಕ್ಕಕ್ಕೆ ಬರುತ್ತದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರುವ ಗುಜರಾತ್ ಮತ್ತು ಎರಡನೇ ಸ್ಥಾನ ಪಡೆಯುವ ತಂಡದ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ನಡೆಯಲಿದೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದವರ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....