Homeಸಿನಿಮಾಕ್ರೀಡೆಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

ಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

- Advertisement -
- Advertisement -

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ RCB ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಆ ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ RCB ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಟೈಟನ್ಸ್ ಆರಂಭದಲ್ಲೆ ಎಡವಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‌ಗೆ ಹೆಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಮ್ಯಾಕ್ಸ್‌ವೆಲ್ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದು ಗಿಲ್ ರನ್ನು ಪೆವಿಲಿಯನ್‌ಗೆ ಕಳಿಸಿದರು. ನಂತರ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಾಡೆ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆನಂತರ ಉತ್ತಮವಾಗಿ ಆಡುತ್ತಿದ್ದ ವೃದ್ದಿಮಾನ್ ಶಾ ರನ್‌ ಔಟ್ ಆಗಿ 31ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಲ್ಲರ್ 34 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 64 ಗಳಿಸಿ ನಾಟ್‌ ಔಟ್ ಆದರು. ಕೊನೆಯಲ್ಲಿ ಬಂದ ರ‍ಶೀದ್ ಖಾನ್ 19 ರನ್ ಸಿಡಿಸಿ ತಂಡಕ್ಕೆ ನೆರವಾದರು. ಗುಜರಾತ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.

ಸಾಧಾರಣ ಮೊತ್ತ ಬೆನ್ನಟ್ಟಿದ್ದ ಆರ್‌ಸಿಬಿ ಉತ್ತಮ ಆರಂಭ ಕಂಡಿತು. ಮೊದಲ ವಿಕೆಟ್ ಜೊತೆಯಾಟಕ್ಕೆ ವಿರಾಟ್ ಮತ್ತು ಡುಪ್ಲೆಸಿಸ್ 115 ರನ್ ಗಳಿಸಿದರು. ಡುಪ್ಲೆಸಿಸ್ 44 ರನ್ ಗಳಿಸಿ ಔಟ್ ಆದರೆ ವಿರಾಟ್ 73 ರನ್ ಚಚ್ಚಿದರು. ನಂತರ ಕ್ರೀಸ್‌ಗಿಳಿದ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ 40 ರನ್‌ ಬಾರಿಸಿ ಇನ್ನು 8 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರ್‌ಸಿಬಿ 8 ವಿಕೆಟ್‌ಗಳ ಜಯ ಸಾಧಿಸಿತು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

IPL 2022ರ ಲೀಗ್ ಹಂತದ ಮೂರು ಪಂದ್ಯಗಳು ಮಾತ್ರ ಉಳಿದಿದ್ದು, ಪ್ಲೇಆಫ್ ಪ್ರವೇಶಿಸಲು RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇಂದು ಪಂದ್ಯ ಗೆದ್ದಿರುವ ಆರ್‌ಸಿಬಿ 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಶನಿವಾರ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಗೆಲುವಿಗಾಗಿ ಪ್ರಾರ್ಥಿಸಬೇಕಿದೆ. ಏಕೆಂದರೆ ಬೆಂಗಳೂರು ತಂಡದ ನೆಟ್‌ ರನ್‌ ರೇಟ್ -253 ಇದೆ. ಆದರೆ ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 20 ಮತ್ತು 18 ಅಂಕಗಳೊಂದಿಗೆ ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕ ಗಳಿಸಿದ್ದು +304 ನೆಟ್‌ ರನ್‌ ರೇಟ್ ಹೊಂದಿರುವ ಕಾರಣ ಅದು ಕೂಡ ಪ್ಲೇಆಫ್ ಪ್ರವೇಶದ ಹೊಸ್ತಿಲಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಶುಕ್ರವಾರ ಚನ್ನೈ ಎದುರು ಸೆಣಸಲಿದ್ದು, ಗೆದ್ದರೂ ಅಥವಾ ಕಡಿಮೆ ಅಂತರದಿಂದ ಸೋತರೂ ಸಹ ಅದ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಭಾರೀ ಅಂತರದಿಂದ ಸೋತಲ್ಲಿ ಮಾತ್ರ ಅದರ ನೆಟ್‌ ರನ್‌ ರೇಟ್ ಲೆಕ್ಕಕ್ಕೆ ಬರುತ್ತದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರುವ ಗುಜರಾತ್ ಮತ್ತು ಎರಡನೇ ಸ್ಥಾನ ಪಡೆಯುವ ತಂಡದ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ನಡೆಯಲಿದೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದವರ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...