Homeಸಿನಿಮಾಕ್ರೀಡೆಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

ಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

- Advertisement -
- Advertisement -

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ RCB ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಆ ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ RCB ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಟೈಟನ್ಸ್ ಆರಂಭದಲ್ಲೆ ಎಡವಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‌ಗೆ ಹೆಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಮ್ಯಾಕ್ಸ್‌ವೆಲ್ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದು ಗಿಲ್ ರನ್ನು ಪೆವಿಲಿಯನ್‌ಗೆ ಕಳಿಸಿದರು. ನಂತರ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಾಡೆ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆನಂತರ ಉತ್ತಮವಾಗಿ ಆಡುತ್ತಿದ್ದ ವೃದ್ದಿಮಾನ್ ಶಾ ರನ್‌ ಔಟ್ ಆಗಿ 31ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಲ್ಲರ್ 34 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 64 ಗಳಿಸಿ ನಾಟ್‌ ಔಟ್ ಆದರು. ಕೊನೆಯಲ್ಲಿ ಬಂದ ರ‍ಶೀದ್ ಖಾನ್ 19 ರನ್ ಸಿಡಿಸಿ ತಂಡಕ್ಕೆ ನೆರವಾದರು. ಗುಜರಾತ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.

ಸಾಧಾರಣ ಮೊತ್ತ ಬೆನ್ನಟ್ಟಿದ್ದ ಆರ್‌ಸಿಬಿ ಉತ್ತಮ ಆರಂಭ ಕಂಡಿತು. ಮೊದಲ ವಿಕೆಟ್ ಜೊತೆಯಾಟಕ್ಕೆ ವಿರಾಟ್ ಮತ್ತು ಡುಪ್ಲೆಸಿಸ್ 115 ರನ್ ಗಳಿಸಿದರು. ಡುಪ್ಲೆಸಿಸ್ 44 ರನ್ ಗಳಿಸಿ ಔಟ್ ಆದರೆ ವಿರಾಟ್ 73 ರನ್ ಚಚ್ಚಿದರು. ನಂತರ ಕ್ರೀಸ್‌ಗಿಳಿದ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ 40 ರನ್‌ ಬಾರಿಸಿ ಇನ್ನು 8 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರ್‌ಸಿಬಿ 8 ವಿಕೆಟ್‌ಗಳ ಜಯ ಸಾಧಿಸಿತು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

IPL 2022ರ ಲೀಗ್ ಹಂತದ ಮೂರು ಪಂದ್ಯಗಳು ಮಾತ್ರ ಉಳಿದಿದ್ದು, ಪ್ಲೇಆಫ್ ಪ್ರವೇಶಿಸಲು RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇಂದು ಪಂದ್ಯ ಗೆದ್ದಿರುವ ಆರ್‌ಸಿಬಿ 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಶನಿವಾರ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಗೆಲುವಿಗಾಗಿ ಪ್ರಾರ್ಥಿಸಬೇಕಿದೆ. ಏಕೆಂದರೆ ಬೆಂಗಳೂರು ತಂಡದ ನೆಟ್‌ ರನ್‌ ರೇಟ್ -253 ಇದೆ. ಆದರೆ ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 20 ಮತ್ತು 18 ಅಂಕಗಳೊಂದಿಗೆ ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕ ಗಳಿಸಿದ್ದು +304 ನೆಟ್‌ ರನ್‌ ರೇಟ್ ಹೊಂದಿರುವ ಕಾರಣ ಅದು ಕೂಡ ಪ್ಲೇಆಫ್ ಪ್ರವೇಶದ ಹೊಸ್ತಿಲಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಶುಕ್ರವಾರ ಚನ್ನೈ ಎದುರು ಸೆಣಸಲಿದ್ದು, ಗೆದ್ದರೂ ಅಥವಾ ಕಡಿಮೆ ಅಂತರದಿಂದ ಸೋತರೂ ಸಹ ಅದ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಭಾರೀ ಅಂತರದಿಂದ ಸೋತಲ್ಲಿ ಮಾತ್ರ ಅದರ ನೆಟ್‌ ರನ್‌ ರೇಟ್ ಲೆಕ್ಕಕ್ಕೆ ಬರುತ್ತದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರುವ ಗುಜರಾತ್ ಮತ್ತು ಎರಡನೇ ಸ್ಥಾನ ಪಡೆಯುವ ತಂಡದ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ನಡೆಯಲಿದೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದವರ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...