Homeಸಿನಿಮಾಕ್ರೀಡೆಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

ಪ್ಲೇಆಫ್ ಆಸೆ ಇನ್ನೂ ಜೀವಂತ: RCBಗೆ ಭರ್ಜರಿ ಜಯ

- Advertisement -
- Advertisement -

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ RCB ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಆ ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ RCB ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಟೈಟನ್ಸ್ ಆರಂಭದಲ್ಲೆ ಎಡವಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‌ಗೆ ಹೆಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಮ್ಯಾಕ್ಸ್‌ವೆಲ್ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದು ಗಿಲ್ ರನ್ನು ಪೆವಿಲಿಯನ್‌ಗೆ ಕಳಿಸಿದರು. ನಂತರ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಾಡೆ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆನಂತರ ಉತ್ತಮವಾಗಿ ಆಡುತ್ತಿದ್ದ ವೃದ್ದಿಮಾನ್ ಶಾ ರನ್‌ ಔಟ್ ಆಗಿ 31ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಲ್ಲರ್ 34 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 64 ಗಳಿಸಿ ನಾಟ್‌ ಔಟ್ ಆದರು. ಕೊನೆಯಲ್ಲಿ ಬಂದ ರ‍ಶೀದ್ ಖಾನ್ 19 ರನ್ ಸಿಡಿಸಿ ತಂಡಕ್ಕೆ ನೆರವಾದರು. ಗುಜರಾತ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.

ಸಾಧಾರಣ ಮೊತ್ತ ಬೆನ್ನಟ್ಟಿದ್ದ ಆರ್‌ಸಿಬಿ ಉತ್ತಮ ಆರಂಭ ಕಂಡಿತು. ಮೊದಲ ವಿಕೆಟ್ ಜೊತೆಯಾಟಕ್ಕೆ ವಿರಾಟ್ ಮತ್ತು ಡುಪ್ಲೆಸಿಸ್ 115 ರನ್ ಗಳಿಸಿದರು. ಡುಪ್ಲೆಸಿಸ್ 44 ರನ್ ಗಳಿಸಿ ಔಟ್ ಆದರೆ ವಿರಾಟ್ 73 ರನ್ ಚಚ್ಚಿದರು. ನಂತರ ಕ್ರೀಸ್‌ಗಿಳಿದ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ 40 ರನ್‌ ಬಾರಿಸಿ ಇನ್ನು 8 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರ್‌ಸಿಬಿ 8 ವಿಕೆಟ್‌ಗಳ ಜಯ ಸಾಧಿಸಿತು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

IPL 2022ರ ಲೀಗ್ ಹಂತದ ಮೂರು ಪಂದ್ಯಗಳು ಮಾತ್ರ ಉಳಿದಿದ್ದು, ಪ್ಲೇಆಫ್ ಪ್ರವೇಶಿಸಲು RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇಂದು ಪಂದ್ಯ ಗೆದ್ದಿರುವ ಆರ್‌ಸಿಬಿ 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಶನಿವಾರ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಗೆಲುವಿಗಾಗಿ ಪ್ರಾರ್ಥಿಸಬೇಕಿದೆ. ಏಕೆಂದರೆ ಬೆಂಗಳೂರು ತಂಡದ ನೆಟ್‌ ರನ್‌ ರೇಟ್ -253 ಇದೆ. ಆದರೆ ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 20 ಮತ್ತು 18 ಅಂಕಗಳೊಂದಿಗೆ ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕ ಗಳಿಸಿದ್ದು +304 ನೆಟ್‌ ರನ್‌ ರೇಟ್ ಹೊಂದಿರುವ ಕಾರಣ ಅದು ಕೂಡ ಪ್ಲೇಆಫ್ ಪ್ರವೇಶದ ಹೊಸ್ತಿಲಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಶುಕ್ರವಾರ ಚನ್ನೈ ಎದುರು ಸೆಣಸಲಿದ್ದು, ಗೆದ್ದರೂ ಅಥವಾ ಕಡಿಮೆ ಅಂತರದಿಂದ ಸೋತರೂ ಸಹ ಅದ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಭಾರೀ ಅಂತರದಿಂದ ಸೋತಲ್ಲಿ ಮಾತ್ರ ಅದರ ನೆಟ್‌ ರನ್‌ ರೇಟ್ ಲೆಕ್ಕಕ್ಕೆ ಬರುತ್ತದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರುವ ಗುಜರಾತ್ ಮತ್ತು ಎರಡನೇ ಸ್ಥಾನ ಪಡೆಯುವ ತಂಡದ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ನಡೆಯಲಿದೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದವರ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...