Homeಮುಖಪುಟಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

ಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಆಂಧ್ರ ಪ್ರದೇಶ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೇಲಿನ ಪ್ರಕರಣಗಳ ತನಿಖೆಯ ಉಸ್ತುವಾರಿ ವಹಿಸಿದ್ದ ಐಪಿಎಸ್ ಅಧಿಕಾರಿ ಎನ್‌. ಸಂಜಯ್ ಅವರನ್ನು ಸರ್ಕಾರ ಮಂಗಳವಾರ (ಡಿ.4) ಅಮಾನತು ಮಾಡಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸಂಜಯ್‌ ಅವರನ್ನು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಸಂಜಯ್ ಅವರು ಜಗನ್‌ ಮೋಹನ್ ರೆಡ್ಡಿ ಸಿಎಂ ಆಗಿದ್ದ ಈ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಆಂಧ್ರ ಪ್ರದೇಶ ಸಿಐಡಿಯ ಮುಖ್ಯಸ್ಥರಾಗಿದ್ದರು. ಆಗ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಬಾಬು ನಾಯ್ಡು ವಿರುದ್ದದ ಆಂಧ್ರ ಪ್ರದೇಶ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣ ಮತ್ತು ಅಮರಾವತಿ ಒಳವರ್ತುಲ ರಸ್ತೆಯ ಜೋಡಣೆ ಹಗರಣದ ತನಿಖೆಯ ಉಸ್ತುವಾರಿ ವಹಿಸಿದ್ದರು. ಸಂಜಯ್ ಅವರ ಉಸ್ತುವಾರಿಯಲ್ಲಿ ನಡೆದ ಸಿಐಡಿ ತನಿಖೆ ಚಂದ್ರಬಾಬು ನಾಯ್ಡು ಜೈಲು ಸೇರುವಂತೆ ಮಾಡಿತ್ತು.

1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸಂಜಯ್ ಅವರು, ರಾಜ್ಯ ವಿಪತ್ತು ನಿರ್ವಹಣೆ ಮತ್ತು ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ಕೆಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿವೆ.

ಈ ಹಿನ್ನೆಲೆ ಅವರನ್ನು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ರ ನಿಯಮ 3 (1) ಅಡಿಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ಆದೇಶ ಹೊರಡಿಸಿದೆ. ಪೊಲೀಸ್ ಪ್ರಧಾನ ಕಚೇರಿ ಬಿಟ್ಟು ತೆರಳದಂತೆ ಸೂಚಿಸಿದೆ.

ಟಿಡಿಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಚಂದ್ರಬಾಬು ನಾಯ್ಡು ಸಿಎಂ ಆದ ಬೆನ್ನಲ್ಲೇ, ಈ ವರ್ಷದ ಜೂನ್‌ನಲ್ಲಿ ಸಂಜಯ್ ಅವರನ್ನು ಸಿಐಡಿ ಮುಖ್ಯಸ್ಥ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿತ್ತು.

ಸಂಜಯ್ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ವಿಜಿಲೆನ್ಸ್ ಮತ್ತು ಎನ್‌ಫೋರ್ಸ್‌ಮೆಂಟ್ (ವಿ ಮತ್ತು ಇ) ಇಲಾಖೆಗೆ ಸರ್ಕಾರ ಆದೇಶಿಸಿದೆ.

ಸಂಜಯ್ ಅವರು ನಿಯೋಜಿತ ಕೆಲಸದಲ್ಲಿ ಯಾವುದೇ ಪ್ರಗತಿ ಮಾಡಿಲ್ಲ. ತನ್ನ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ಸೌತ್ರಿಕಾ ಟೆಕ್ನಾಲಜೀಸ್ ಮತ್ತು ಇನ್ಫ್ರಾ ಪ್ರೈವೇಟ್ ಲಿಮಿಟೆಡ್‌ ಎಂಬ ಸಂಸ್ಥೆಗಳಿಗೆ 1 ಕೋಟಿ ರೂಪಾಯಿಗಳನ್ನು ಪಾವತಿಸಲು ಅನುಕೂಲವಾಗುವಂತೆ ಕೆಲಸ ಮಾಡಿದ್ದಾರೆ ಎಂದು ವಿ & ಇ ಇಲಾಖೆ ಆರೋಪಿಸಿದೆ.

ಸಂಜಯ್ ಅವರು ಟೆಂಡರ್ ನೀಡುವಾಗ ಬಿಡ್ ವಂಚನೆ ಮಾಡಿದ್ದಾರೆ. ಕಂಪನಿಗಳ ಪರ ಒಲವು ತೋರಿದ್ದಾರೆ. ಟೆಂಡರ್ ಪ್ರಕ್ರಿಯೆಯ ಸಮಗ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಸಾರ್ವಜನಿಕ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ದೂರಿದೆ.

ವಿಜಿಲೆನ್ಸ್ ವರದಿಯು ಕಂಪನಿಯ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಮತ್ತು ಕೇಂದ್ರ ಸೇವಾ ನೀತಿ ನಿಯಮಗಳ ಅಡಿಯಲ್ಲಿ ಸಂಜಯ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಟಿಡಿಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಡಿಜಿಪಿ ಶ್ರೇಣಿಯ ಅಧಿಕಾರಿಗಳಾದ ಪಿ.ಎಸ್.ಆರ್.ಆಂಜನೇಯುಲು ಮತ್ತು ಪಿ.ವಿ.ಸುನೀಲ್ ಕುಮಾರ್, ಹೆಚ್ಚುವರಿ ಡಿಜಿಪಿ ಎನ್.ಸಂಜಯ್, ಐಜಿಪಿಗಳಾದ ಕಂಠಿ ರಾಣಾ ಟಾಟಾ, ಜಿ.ಪಾಲ ರಾಜು ಮತ್ತು ಕೆ.ರಘುರಾಮರೆಡ್ಡಿ ಮತ್ತು ಡಿಐಜಿ ಶ್ರೇಣಿಯ ಅಧಿಕಾರಿಗಳಾದ ಆರ್.ಎನ್. ಅಮ್ಮಿ ರೆಡ್ಡಿ, ಚಿ. ವಿಜಯರಾವ್ ಮತ್ತು ವಿಶಾಲ್ ಗುನ್ನಿ ಅವರನ್ನು ವರ್ಗಾಯಿಸಿದೆ.

ಈ ಕೆಲವು ಅಧಿಕಾರಿಗಳು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರನ್ನು ಗುರಿಯಾಗಿಸಿಕೊಂಡ ಆರೋಪವನ್ನು ಎದುರಿಸಿದ್ದರು.

ಇದನ್ನೂ ಓದಿ : ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...