Homeಮುಖಪುಟಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

ಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಆಂಧ್ರ ಪ್ರದೇಶ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೇಲಿನ ಪ್ರಕರಣಗಳ ತನಿಖೆಯ ಉಸ್ತುವಾರಿ ವಹಿಸಿದ್ದ ಐಪಿಎಸ್ ಅಧಿಕಾರಿ ಎನ್‌. ಸಂಜಯ್ ಅವರನ್ನು ಸರ್ಕಾರ ಮಂಗಳವಾರ (ಡಿ.4) ಅಮಾನತು ಮಾಡಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸಂಜಯ್‌ ಅವರನ್ನು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಸಂಜಯ್ ಅವರು ಜಗನ್‌ ಮೋಹನ್ ರೆಡ್ಡಿ ಸಿಎಂ ಆಗಿದ್ದ ಈ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಆಂಧ್ರ ಪ್ರದೇಶ ಸಿಐಡಿಯ ಮುಖ್ಯಸ್ಥರಾಗಿದ್ದರು. ಆಗ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಬಾಬು ನಾಯ್ಡು ವಿರುದ್ದದ ಆಂಧ್ರ ಪ್ರದೇಶ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣ ಮತ್ತು ಅಮರಾವತಿ ಒಳವರ್ತುಲ ರಸ್ತೆಯ ಜೋಡಣೆ ಹಗರಣದ ತನಿಖೆಯ ಉಸ್ತುವಾರಿ ವಹಿಸಿದ್ದರು. ಸಂಜಯ್ ಅವರ ಉಸ್ತುವಾರಿಯಲ್ಲಿ ನಡೆದ ಸಿಐಡಿ ತನಿಖೆ ಚಂದ್ರಬಾಬು ನಾಯ್ಡು ಜೈಲು ಸೇರುವಂತೆ ಮಾಡಿತ್ತು.

1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸಂಜಯ್ ಅವರು, ರಾಜ್ಯ ವಿಪತ್ತು ನಿರ್ವಹಣೆ ಮತ್ತು ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ಕೆಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿವೆ.

ಈ ಹಿನ್ನೆಲೆ ಅವರನ್ನು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ರ ನಿಯಮ 3 (1) ಅಡಿಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ಆದೇಶ ಹೊರಡಿಸಿದೆ. ಪೊಲೀಸ್ ಪ್ರಧಾನ ಕಚೇರಿ ಬಿಟ್ಟು ತೆರಳದಂತೆ ಸೂಚಿಸಿದೆ.

ಟಿಡಿಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಚಂದ್ರಬಾಬು ನಾಯ್ಡು ಸಿಎಂ ಆದ ಬೆನ್ನಲ್ಲೇ, ಈ ವರ್ಷದ ಜೂನ್‌ನಲ್ಲಿ ಸಂಜಯ್ ಅವರನ್ನು ಸಿಐಡಿ ಮುಖ್ಯಸ್ಥ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿತ್ತು.

ಸಂಜಯ್ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ವಿಜಿಲೆನ್ಸ್ ಮತ್ತು ಎನ್‌ಫೋರ್ಸ್‌ಮೆಂಟ್ (ವಿ ಮತ್ತು ಇ) ಇಲಾಖೆಗೆ ಸರ್ಕಾರ ಆದೇಶಿಸಿದೆ.

ಸಂಜಯ್ ಅವರು ನಿಯೋಜಿತ ಕೆಲಸದಲ್ಲಿ ಯಾವುದೇ ಪ್ರಗತಿ ಮಾಡಿಲ್ಲ. ತನ್ನ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ಸೌತ್ರಿಕಾ ಟೆಕ್ನಾಲಜೀಸ್ ಮತ್ತು ಇನ್ಫ್ರಾ ಪ್ರೈವೇಟ್ ಲಿಮಿಟೆಡ್‌ ಎಂಬ ಸಂಸ್ಥೆಗಳಿಗೆ 1 ಕೋಟಿ ರೂಪಾಯಿಗಳನ್ನು ಪಾವತಿಸಲು ಅನುಕೂಲವಾಗುವಂತೆ ಕೆಲಸ ಮಾಡಿದ್ದಾರೆ ಎಂದು ವಿ & ಇ ಇಲಾಖೆ ಆರೋಪಿಸಿದೆ.

ಸಂಜಯ್ ಅವರು ಟೆಂಡರ್ ನೀಡುವಾಗ ಬಿಡ್ ವಂಚನೆ ಮಾಡಿದ್ದಾರೆ. ಕಂಪನಿಗಳ ಪರ ಒಲವು ತೋರಿದ್ದಾರೆ. ಟೆಂಡರ್ ಪ್ರಕ್ರಿಯೆಯ ಸಮಗ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಸಾರ್ವಜನಿಕ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ದೂರಿದೆ.

ವಿಜಿಲೆನ್ಸ್ ವರದಿಯು ಕಂಪನಿಯ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಮತ್ತು ಕೇಂದ್ರ ಸೇವಾ ನೀತಿ ನಿಯಮಗಳ ಅಡಿಯಲ್ಲಿ ಸಂಜಯ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಟಿಡಿಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಡಿಜಿಪಿ ಶ್ರೇಣಿಯ ಅಧಿಕಾರಿಗಳಾದ ಪಿ.ಎಸ್.ಆರ್.ಆಂಜನೇಯುಲು ಮತ್ತು ಪಿ.ವಿ.ಸುನೀಲ್ ಕುಮಾರ್, ಹೆಚ್ಚುವರಿ ಡಿಜಿಪಿ ಎನ್.ಸಂಜಯ್, ಐಜಿಪಿಗಳಾದ ಕಂಠಿ ರಾಣಾ ಟಾಟಾ, ಜಿ.ಪಾಲ ರಾಜು ಮತ್ತು ಕೆ.ರಘುರಾಮರೆಡ್ಡಿ ಮತ್ತು ಡಿಐಜಿ ಶ್ರೇಣಿಯ ಅಧಿಕಾರಿಗಳಾದ ಆರ್.ಎನ್. ಅಮ್ಮಿ ರೆಡ್ಡಿ, ಚಿ. ವಿಜಯರಾವ್ ಮತ್ತು ವಿಶಾಲ್ ಗುನ್ನಿ ಅವರನ್ನು ವರ್ಗಾಯಿಸಿದೆ.

ಈ ಕೆಲವು ಅಧಿಕಾರಿಗಳು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರನ್ನು ಗುರಿಯಾಗಿಸಿಕೊಂಡ ಆರೋಪವನ್ನು ಎದುರಿಸಿದ್ದರು.

ಇದನ್ನೂ ಓದಿ : ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...