Homeಮುಖಪುಟಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

ಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಆಂಧ್ರ ಪ್ರದೇಶ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೇಲಿನ ಪ್ರಕರಣಗಳ ತನಿಖೆಯ ಉಸ್ತುವಾರಿ ವಹಿಸಿದ್ದ ಐಪಿಎಸ್ ಅಧಿಕಾರಿ ಎನ್‌. ಸಂಜಯ್ ಅವರನ್ನು ಸರ್ಕಾರ ಮಂಗಳವಾರ (ಡಿ.4) ಅಮಾನತು ಮಾಡಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸಂಜಯ್‌ ಅವರನ್ನು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಸಂಜಯ್ ಅವರು ಜಗನ್‌ ಮೋಹನ್ ರೆಡ್ಡಿ ಸಿಎಂ ಆಗಿದ್ದ ಈ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಆಂಧ್ರ ಪ್ರದೇಶ ಸಿಐಡಿಯ ಮುಖ್ಯಸ್ಥರಾಗಿದ್ದರು. ಆಗ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಬಾಬು ನಾಯ್ಡು ವಿರುದ್ದದ ಆಂಧ್ರ ಪ್ರದೇಶ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣ ಮತ್ತು ಅಮರಾವತಿ ಒಳವರ್ತುಲ ರಸ್ತೆಯ ಜೋಡಣೆ ಹಗರಣದ ತನಿಖೆಯ ಉಸ್ತುವಾರಿ ವಹಿಸಿದ್ದರು. ಸಂಜಯ್ ಅವರ ಉಸ್ತುವಾರಿಯಲ್ಲಿ ನಡೆದ ಸಿಐಡಿ ತನಿಖೆ ಚಂದ್ರಬಾಬು ನಾಯ್ಡು ಜೈಲು ಸೇರುವಂತೆ ಮಾಡಿತ್ತು.

1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸಂಜಯ್ ಅವರು, ರಾಜ್ಯ ವಿಪತ್ತು ನಿರ್ವಹಣೆ ಮತ್ತು ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ಕೆಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿವೆ.

ಈ ಹಿನ್ನೆಲೆ ಅವರನ್ನು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ರ ನಿಯಮ 3 (1) ಅಡಿಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ಆದೇಶ ಹೊರಡಿಸಿದೆ. ಪೊಲೀಸ್ ಪ್ರಧಾನ ಕಚೇರಿ ಬಿಟ್ಟು ತೆರಳದಂತೆ ಸೂಚಿಸಿದೆ.

ಟಿಡಿಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಚಂದ್ರಬಾಬು ನಾಯ್ಡು ಸಿಎಂ ಆದ ಬೆನ್ನಲ್ಲೇ, ಈ ವರ್ಷದ ಜೂನ್‌ನಲ್ಲಿ ಸಂಜಯ್ ಅವರನ್ನು ಸಿಐಡಿ ಮುಖ್ಯಸ್ಥ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿತ್ತು.

ಸಂಜಯ್ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ವಿಜಿಲೆನ್ಸ್ ಮತ್ತು ಎನ್‌ಫೋರ್ಸ್‌ಮೆಂಟ್ (ವಿ ಮತ್ತು ಇ) ಇಲಾಖೆಗೆ ಸರ್ಕಾರ ಆದೇಶಿಸಿದೆ.

ಸಂಜಯ್ ಅವರು ನಿಯೋಜಿತ ಕೆಲಸದಲ್ಲಿ ಯಾವುದೇ ಪ್ರಗತಿ ಮಾಡಿಲ್ಲ. ತನ್ನ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ಸೌತ್ರಿಕಾ ಟೆಕ್ನಾಲಜೀಸ್ ಮತ್ತು ಇನ್ಫ್ರಾ ಪ್ರೈವೇಟ್ ಲಿಮಿಟೆಡ್‌ ಎಂಬ ಸಂಸ್ಥೆಗಳಿಗೆ 1 ಕೋಟಿ ರೂಪಾಯಿಗಳನ್ನು ಪಾವತಿಸಲು ಅನುಕೂಲವಾಗುವಂತೆ ಕೆಲಸ ಮಾಡಿದ್ದಾರೆ ಎಂದು ವಿ & ಇ ಇಲಾಖೆ ಆರೋಪಿಸಿದೆ.

ಸಂಜಯ್ ಅವರು ಟೆಂಡರ್ ನೀಡುವಾಗ ಬಿಡ್ ವಂಚನೆ ಮಾಡಿದ್ದಾರೆ. ಕಂಪನಿಗಳ ಪರ ಒಲವು ತೋರಿದ್ದಾರೆ. ಟೆಂಡರ್ ಪ್ರಕ್ರಿಯೆಯ ಸಮಗ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಸಾರ್ವಜನಿಕ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ದೂರಿದೆ.

ವಿಜಿಲೆನ್ಸ್ ವರದಿಯು ಕಂಪನಿಯ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಮತ್ತು ಕೇಂದ್ರ ಸೇವಾ ನೀತಿ ನಿಯಮಗಳ ಅಡಿಯಲ್ಲಿ ಸಂಜಯ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಟಿಡಿಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಡಿಜಿಪಿ ಶ್ರೇಣಿಯ ಅಧಿಕಾರಿಗಳಾದ ಪಿ.ಎಸ್.ಆರ್.ಆಂಜನೇಯುಲು ಮತ್ತು ಪಿ.ವಿ.ಸುನೀಲ್ ಕುಮಾರ್, ಹೆಚ್ಚುವರಿ ಡಿಜಿಪಿ ಎನ್.ಸಂಜಯ್, ಐಜಿಪಿಗಳಾದ ಕಂಠಿ ರಾಣಾ ಟಾಟಾ, ಜಿ.ಪಾಲ ರಾಜು ಮತ್ತು ಕೆ.ರಘುರಾಮರೆಡ್ಡಿ ಮತ್ತು ಡಿಐಜಿ ಶ್ರೇಣಿಯ ಅಧಿಕಾರಿಗಳಾದ ಆರ್.ಎನ್. ಅಮ್ಮಿ ರೆಡ್ಡಿ, ಚಿ. ವಿಜಯರಾವ್ ಮತ್ತು ವಿಶಾಲ್ ಗುನ್ನಿ ಅವರನ್ನು ವರ್ಗಾಯಿಸಿದೆ.

ಈ ಕೆಲವು ಅಧಿಕಾರಿಗಳು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರನ್ನು ಗುರಿಯಾಗಿಸಿಕೊಂಡ ಆರೋಪವನ್ನು ಎದುರಿಸಿದ್ದರು.

ಇದನ್ನೂ ಓದಿ : ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....