Homeಮುಖಪುಟಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

ಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

- Advertisement -
- Advertisement -

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಶನಿವಾರ ನಡೆದ ಶೃಂಗಸಭೆಯಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾ ನಾಯಕರು ಗಾಝಾ ಪಟ್ಟಿಯಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದು, ಮಾನವೀಯ ನೆರವಿಗೆ ಸೂಚಿಸಿದ್ದಾರೆ. ಜೊತೆಗೆ ಯುದ್ಧ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧದ ಬಳಿಕ ಸೌದಿ ಅರೇಬಿಯಾ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸೌದಿ ಅರೇಬಿಯಾಕ್ಕೆ ತೆರಳಿದ್ದಾರೆ. ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಇರಾನ್ ಅಧ್ಯಕ್ಷರೋರ್ವರು ಸೌದಿ ಅರೇಬಿಯಾಗೆ ಭೇಟಿ ನೀಡಿದ್ದಾರೆ. ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಇಬ್ರಾಹಿಂ ರೈಸಿ ಅವರನ್ನು ಶೃಂಗಸಭೆಗೆ ಸ್ವಾಗತಿಸಿದ್ದಾರೆ.

ಶೃಂಗಸಭೆಯಲ್ಲಿ ರೈಸಿ ಅವರು, ಗಾಝಾದಲ್ಲಿ ನಾಗರಿಕರ ವಿರುದ್ಧ ಮಾಡುತ್ತಿರುವ ಅನ್ಯಾಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯ ಮೌನವಾಗಿದೆ ಎಂದು ಟೀಕಿಸಿದ್ದಾರೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್  ಕದನ ವಿರಾಮವನ್ನು ವಿರೋಧಿಸುತ್ತವೆ, ಇದು ಹಮಾಸ್‌ನ ಮಿಲಿಟರಿ ವಿಭಾಗವನ್ನು ಮರುಸಂಘಟಿಸಲು  ಅವಕಾಶ ನೀಡುತ್ತದೆ ಎಂದು ಅವರು ವಾದಿಸುತ್ತಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸಿದ ದಾಳಿಯನ್ನು ಉಲ್ಲೇಖಿಸಿ, ಇಸ್ರೇಲ್‌ನೊಂದಿಗೆ ಸಂಬಂಧವನ್ನು ಕಡಿದುಹಾಕಲು ಇಸ್ಲಾಮಿಕ್ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ. ಪ್ಯಾಲೆಸ್ತೀನಿಯಾದವರಿಗೆ ಹೆಚ್ಚಿನ ಬೆಂಬಲ ನೀಡುವಂತೆ ಅವರು ಕರೆ ನೀಡಿದ್ದಾರೆ. ಇಸ್ರೇಲ್‌ನ ಸೈನ್ಯಕ್ಕೆ ಭಯೋತ್ಪಾದಕ ಗುಂಪು ಎಂದು ಹೆಸರಿಸಲು ಇಸ್ಲಾಮಿಕ್ ದೇಶಗಳಿಗೆ ರೈಸಿ ಒತ್ತಾಯಿಸಿದ್ದಾರೆ.

ಈ ಬಿಕ್ಕಟ್ಟು ಇಸ್ರೇಲ್‌ ಮಾಡಿದ ಅಂತರಾಷ್ಟ್ರೀಯ ಕಾನೂನು ಉಲ್ಲಂಘನೆಗಳನ್ನು ಕೊನೆಗೊಳಿಸಲು ಭದ್ರತಾ ಮಂಡಳಿ ಮತ್ತು ಅಂತರಾಷ್ಟ್ರೀಯ ಸಮುದಾಯ ವೈಫಲ್ಯವಾಗಿರುವುದನ್ನು ತೋರಿಸುತ್ತದೆ ಎಂದು ಸೌದಿ ಕ್ರೌನ್ ಪ್ರಿನ್ಸ್ ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ಅ.7ರಂದು ಯುದ್ಧ ಘೋಷಣೆಯ ಬಳಿಕ ಗಾಝಾ ಪಟ್ಟಿಯಲ್ಲಿ ಮೃತರ ಸಂಖ್ಯೆ 11,078ಕ್ಕೆ ತಲುಪಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಹಮಾಸ್ ಇಸ್ರೇಲ್‌ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ 1,600 ಇಸ್ರೇಲ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. 200ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿ ಇಡಲಾಗಿದೆ.

ಗಾಝಾ ಮೇಲಿನ ಬಾಂಬ್ ದಾಳಿ ಹಾಗೂ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು ಎಂದು ಶುಕ್ರವಾರ  ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಹೇಳಿದ್ದರು. ಬಾಂಬ್ ದಾಳಿಗೆ ಯಾವುದೇ ಸಮರ್ಥನೆಗಳಿಲ್ಲ ಎಂದು ಹೇಳಿರುವ ಮ್ಯಾಕ್ರನ್, ಹಮಾಸ್ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದರು.

ಇದನ್ನು ಓದಿ: ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...