Homeಮುಖಪುಟಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

ಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

- Advertisement -
- Advertisement -

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಶನಿವಾರ ನಡೆದ ಶೃಂಗಸಭೆಯಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾ ನಾಯಕರು ಗಾಝಾ ಪಟ್ಟಿಯಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದು, ಮಾನವೀಯ ನೆರವಿಗೆ ಸೂಚಿಸಿದ್ದಾರೆ. ಜೊತೆಗೆ ಯುದ್ಧ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ನ ಯುದ್ಧದ ಬಳಿಕ ಸೌದಿ ಅರೇಬಿಯಾ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸೌದಿ ಅರೇಬಿಯಾಕ್ಕೆ ತೆರಳಿದ್ದಾರೆ. ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಇರಾನ್ ಅಧ್ಯಕ್ಷರೋರ್ವರು ಸೌದಿ ಅರೇಬಿಯಾಗೆ ಭೇಟಿ ನೀಡಿದ್ದಾರೆ. ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಇಬ್ರಾಹಿಂ ರೈಸಿ ಅವರನ್ನು ಶೃಂಗಸಭೆಗೆ ಸ್ವಾಗತಿಸಿದ್ದಾರೆ.

ಶೃಂಗಸಭೆಯಲ್ಲಿ ರೈಸಿ ಅವರು, ಗಾಝಾದಲ್ಲಿ ನಾಗರಿಕರ ವಿರುದ್ಧ ಮಾಡುತ್ತಿರುವ ಅನ್ಯಾಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯ ಮೌನವಾಗಿದೆ ಎಂದು ಟೀಕಿಸಿದ್ದಾರೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್  ಕದನ ವಿರಾಮವನ್ನು ವಿರೋಧಿಸುತ್ತವೆ, ಇದು ಹಮಾಸ್‌ನ ಮಿಲಿಟರಿ ವಿಭಾಗವನ್ನು ಮರುಸಂಘಟಿಸಲು  ಅವಕಾಶ ನೀಡುತ್ತದೆ ಎಂದು ಅವರು ವಾದಿಸುತ್ತಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸಿದ ದಾಳಿಯನ್ನು ಉಲ್ಲೇಖಿಸಿ, ಇಸ್ರೇಲ್‌ನೊಂದಿಗೆ ಸಂಬಂಧವನ್ನು ಕಡಿದುಹಾಕಲು ಇಸ್ಲಾಮಿಕ್ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ. ಪ್ಯಾಲೆಸ್ತೀನಿಯಾದವರಿಗೆ ಹೆಚ್ಚಿನ ಬೆಂಬಲ ನೀಡುವಂತೆ ಅವರು ಕರೆ ನೀಡಿದ್ದಾರೆ. ಇಸ್ರೇಲ್‌ನ ಸೈನ್ಯಕ್ಕೆ ಭಯೋತ್ಪಾದಕ ಗುಂಪು ಎಂದು ಹೆಸರಿಸಲು ಇಸ್ಲಾಮಿಕ್ ದೇಶಗಳಿಗೆ ರೈಸಿ ಒತ್ತಾಯಿಸಿದ್ದಾರೆ.

ಈ ಬಿಕ್ಕಟ್ಟು ಇಸ್ರೇಲ್‌ ಮಾಡಿದ ಅಂತರಾಷ್ಟ್ರೀಯ ಕಾನೂನು ಉಲ್ಲಂಘನೆಗಳನ್ನು ಕೊನೆಗೊಳಿಸಲು ಭದ್ರತಾ ಮಂಡಳಿ ಮತ್ತು ಅಂತರಾಷ್ಟ್ರೀಯ ಸಮುದಾಯ ವೈಫಲ್ಯವಾಗಿರುವುದನ್ನು ತೋರಿಸುತ್ತದೆ ಎಂದು ಸೌದಿ ಕ್ರೌನ್ ಪ್ರಿನ್ಸ್ ಹೇಳಿದ್ದಾರೆ.

ಗಾಝಾ ಮೇಲೆ ಇಸ್ರೇಲ್‌ ಅ.7ರಂದು ಯುದ್ಧ ಘೋಷಣೆಯ ಬಳಿಕ ಗಾಝಾ ಪಟ್ಟಿಯಲ್ಲಿ ಮೃತರ ಸಂಖ್ಯೆ 11,078ಕ್ಕೆ ತಲುಪಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಹಮಾಸ್ ಇಸ್ರೇಲ್‌ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ 1,600 ಇಸ್ರೇಲ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. 200ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿ ಇಡಲಾಗಿದೆ.

ಗಾಝಾ ಮೇಲಿನ ಬಾಂಬ್ ದಾಳಿ ಹಾಗೂ ನಾಗರಿಕರ ಹತ್ಯೆಯನ್ನು ಇಸ್ರೇಲ್ ನಿಲ್ಲಿಸಬೇಕು ಎಂದು ಶುಕ್ರವಾರ  ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಹೇಳಿದ್ದರು. ಬಾಂಬ್ ದಾಳಿಗೆ ಯಾವುದೇ ಸಮರ್ಥನೆಗಳಿಲ್ಲ ಎಂದು ಹೇಳಿರುವ ಮ್ಯಾಕ್ರನ್, ಹಮಾಸ್ ದಾಳಿಯನ್ನು ಫ್ರಾನ್ಸ್ ಸ್ಪಷ್ಟವಾಗಿ ಖಂಡಿಸುತ್ತದೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಇದ್ದರೂ, ಗಾಝಾದಲ್ಲಿ ನಡೆಯುತ್ತಿರುವ ಬಾಂಬ್ ದಾಳಿಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದರು.

ಇದನ್ನು ಓದಿ: ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...