Homeಅಂತರಾಷ್ಟ್ರೀಯಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

- Advertisement -
- Advertisement -

ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು ಪ್ಯಾಲೆಸ್ತೀನಿ ಪ್ರತಿರೋಧ ಪಡೆ ಹಮಾಸ್‌ ಶನಿವಾರ ಶ್ಲಾಘಿಸಿದ್ದು, ಇಸ್ರೇಲ್ ಭಾರಿ ಪ್ರಚಾರ ಮಾಡುವ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಾದ “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್”ನ ದೌರ್ಬಲ್ಯವನ್ನು ಈ ದಾಳಿ ಬಹಿರಂಗಪಡಿಸಿದೆ ಎಂದು ಹೇಳಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇರಾನ್‌ನ ಪರಮಾಣು ಕೇಂದ್ರ ಮತ್ತು ಇತರ ಪ್ರದೇಶಗಳನ್ನು ಗುರಿಯಾಗಿಸಿ ಶುಕ್ರವಾರ ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ದೇಶದ ಪರಮಾಣು ವಿಜ್ಞಾನಿಗಳು, ಹಿರಿಯ ಸೇನಾಧಿಕಾರಿಗಳು ಹಾಗೂ ನಾಗರಿಕರ ಮೃತಪಟ್ಟಿದ್ದರು. ಇರಾನ್‌ ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಪ್ರತಿದಾಳಿ ನಡೆಸಿದ್ದು, ಈ ವರೆಗೆ ಇಬ್ಬರು ಮೃತಪಟ್ಟಿದ್ದು, 40 ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇರಾನ್‌ನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ಯಾಲೆಸ್ತೀನ್‌ನ ಪರ ಹೋರಾಟಗಾರ ಸಂಘಟನೆ ಹಮಾಸ್‌ನ ನಾಯಕ ಇಜ್ಜತ್ ಅಲ್-ರಿಷೇಕ್ ಅವರು, “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಬಗ್ಗೆಗಿನ ಇಸ್ರೇಲ್‌ನ ಎಲ್ಲಾ ಪ್ರಚಾರದ ಹೊರತಾಗಿಯೂ ಇರಾನ್ ಇಸ್ರೇಲ್‌ನಲ್ಲಿರುವ ತಾಣಗಳನ್ನು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿದೆ” ಎಂದು ಶ್ಲಾಘಿಸಿದ್ದಾರೆ.

ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಗಳು ವಿಫಲವಾಗಿವೆ ಮತ್ತು ದೇಶವು ಈ ಪ್ರದೇಶದ ಜನರಲ್ಲಿ ದೀರ್ಘಕಾಲದಿಂದ ಹೊತ್ತಿಸಿರುವ ಬೆಂಕಿಯಿಂದ ಅದು ಬಳಲುತ್ತದೆ ಎಂದು ಅಲ್-ರಿಷೇಕ್ ಅವರು ಹೇಳಿದ್ದಾರೆ ಎಂದು ಸ್ಥಳೀಯ ಪ್ಯಾಲೆಸ್ತೀನಿ ಸುದ್ದಿ ತಾಣಗಳು ತಿಳಿಸಿವೆ. “ಇರಾನ್‌ನ ಬಲವಾದ ಪ್ರತಿಕ್ರಿಯೆಯು ಇದನ್ನು ಸಾಬೀತುಪಡಿಸುತ್ತದೆ. ಇರಾನ್‌ನ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ಇಸ್ರೇಲ್ ನಡೆಸುತ್ತಿರುವ ವರ್ಷಗಳ ಆಕ್ರಮಣದ ವಿರುದ್ಧದ ತೀವ್ರ ಮತ್ತು ನೇರ ಪ್ರತಿಕ್ರಿಯೆ” ಎಂದು ಅವರು ಹೇಳಿದ್ದಾರೆ.

ಇರಾನ್ ಇಸ್ರೇಲ್‌ನಾದ್ಯಂತ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ನೂರಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಒಳಗೊಂಡ ದೊಡ್ಡ ಪ್ರಮಾಣದ ಪ್ರತೀಕಾರದ ದಾಳಿ ”ಆಪರೇಷನ್ ಟ್ರೂ ಪ್ರಾಮಿಸ್ III” ಅನ್ನು ಪ್ರಾರಂಭಿಸಿದ ನಂತರ ಹಮಾಸ್ ಈ ಹೇಳಿಕೆ ನೀಡಿದೆ.

ಇರಾನಿನ ಪ್ರತಿಕ್ರಿಯೆಯನ್ನು “ಕಾನೂನುಬದ್ಧ” ಎಂದು ಬಣ್ಣಿಸಿದ ಅಲ್-ರಿಷೇಕ್ ಅವರು, ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶಗಳಲ್ಲಿ ಮತ್ತು ಅದರಾಚೆ ನಡೆಸುತ್ತಿರುವ ತನ್ನ ನಿರಂತರ ಕೃತ್ಯಗಳಿಗೆ ಇಸ್ರೇಲ್ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

“ಇರಾನ್‌ನ ಈ ತೀವ್ರ ಪ್ರತಿಕ್ರಿಯೆಯು ಯಾವುದೇ ದುರಹಂಕಾರವನ್ನು ಪ್ರಶ್ನಿಸದೆ ಬಿಡುವುದಿಲ್ಲ ಮತ್ತು ಯಾವುದೇ ಆಕ್ರಮಣಕ್ಕೆ ಶಿಕ್ಷೆಯಿಲ್ಲದೆ ಇರುವುದಿಲ್ಲ ಎಂದು ಸಾಬೀತುಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ಒಳಬರುವ ಬಹುಪಾಲು ಸ್ಪೋಟಕಗಳನ್ನು ತಡೆದಿವೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿಕೊಂಡಿದ್ದರೂ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ನಿರಾಕರಿಸಿದ್ದು, ತಮ್ಮ ಕ್ಷಿಪಣಿಗಳು ಹಲವಾರು ಸೇನಾ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿ ಬಹು-ಪದರದ ವಾಯು ರಕ್ಷಣಾ ಗುರಾಣಿಯನ್ನು ಭೇದಿಸಿದೆ ಎಂದು ಹೇಳಿದೆ.

ಇಸ್ರೇಲಿ ನೀತಿಗಳಿಗೆ ವಿರುದ್ಧವಾಗಿ ದೀರ್ಘಕಾಲದಿಂದ ಇರಾನ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಹಮಾಸ್, ಈ ಬಲಪ್ರದರ್ಶನವನ್ನು ಪ್ರಾದೇಶಿಕ ಅಧಿಕಾರ ಸಮತೋಲನದಲ್ಲಿ ಒಂದು ಮಹತ್ವದ ತಿರುವು ಎಂದು ಶ್ಲಾಘಿಸಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...