Homeಅಂತರಾಷ್ಟ್ರೀಯಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

- Advertisement -
- Advertisement -

ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು ಪ್ಯಾಲೆಸ್ತೀನಿ ಪ್ರತಿರೋಧ ಪಡೆ ಹಮಾಸ್‌ ಶನಿವಾರ ಶ್ಲಾಘಿಸಿದ್ದು, ಇಸ್ರೇಲ್ ಭಾರಿ ಪ್ರಚಾರ ಮಾಡುವ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಾದ “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್”ನ ದೌರ್ಬಲ್ಯವನ್ನು ಈ ದಾಳಿ ಬಹಿರಂಗಪಡಿಸಿದೆ ಎಂದು ಹೇಳಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇರಾನ್‌ನ ಪರಮಾಣು ಕೇಂದ್ರ ಮತ್ತು ಇತರ ಪ್ರದೇಶಗಳನ್ನು ಗುರಿಯಾಗಿಸಿ ಶುಕ್ರವಾರ ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ದೇಶದ ಪರಮಾಣು ವಿಜ್ಞಾನಿಗಳು, ಹಿರಿಯ ಸೇನಾಧಿಕಾರಿಗಳು ಹಾಗೂ ನಾಗರಿಕರ ಮೃತಪಟ್ಟಿದ್ದರು. ಇರಾನ್‌ ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಪ್ರತಿದಾಳಿ ನಡೆಸಿದ್ದು, ಈ ವರೆಗೆ ಇಬ್ಬರು ಮೃತಪಟ್ಟಿದ್ದು, 40 ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇರಾನ್‌ನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ಯಾಲೆಸ್ತೀನ್‌ನ ಪರ ಹೋರಾಟಗಾರ ಸಂಘಟನೆ ಹಮಾಸ್‌ನ ನಾಯಕ ಇಜ್ಜತ್ ಅಲ್-ರಿಷೇಕ್ ಅವರು, “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಬಗ್ಗೆಗಿನ ಇಸ್ರೇಲ್‌ನ ಎಲ್ಲಾ ಪ್ರಚಾರದ ಹೊರತಾಗಿಯೂ ಇರಾನ್ ಇಸ್ರೇಲ್‌ನಲ್ಲಿರುವ ತಾಣಗಳನ್ನು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿದೆ” ಎಂದು ಶ್ಲಾಘಿಸಿದ್ದಾರೆ.

ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಗಳು ವಿಫಲವಾಗಿವೆ ಮತ್ತು ದೇಶವು ಈ ಪ್ರದೇಶದ ಜನರಲ್ಲಿ ದೀರ್ಘಕಾಲದಿಂದ ಹೊತ್ತಿಸಿರುವ ಬೆಂಕಿಯಿಂದ ಅದು ಬಳಲುತ್ತದೆ ಎಂದು ಅಲ್-ರಿಷೇಕ್ ಅವರು ಹೇಳಿದ್ದಾರೆ ಎಂದು ಸ್ಥಳೀಯ ಪ್ಯಾಲೆಸ್ತೀನಿ ಸುದ್ದಿ ತಾಣಗಳು ತಿಳಿಸಿವೆ. “ಇರಾನ್‌ನ ಬಲವಾದ ಪ್ರತಿಕ್ರಿಯೆಯು ಇದನ್ನು ಸಾಬೀತುಪಡಿಸುತ್ತದೆ. ಇರಾನ್‌ನ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ಇಸ್ರೇಲ್ ನಡೆಸುತ್ತಿರುವ ವರ್ಷಗಳ ಆಕ್ರಮಣದ ವಿರುದ್ಧದ ತೀವ್ರ ಮತ್ತು ನೇರ ಪ್ರತಿಕ್ರಿಯೆ” ಎಂದು ಅವರು ಹೇಳಿದ್ದಾರೆ.

ಇರಾನ್ ಇಸ್ರೇಲ್‌ನಾದ್ಯಂತ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ನೂರಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಒಳಗೊಂಡ ದೊಡ್ಡ ಪ್ರಮಾಣದ ಪ್ರತೀಕಾರದ ದಾಳಿ ”ಆಪರೇಷನ್ ಟ್ರೂ ಪ್ರಾಮಿಸ್ III” ಅನ್ನು ಪ್ರಾರಂಭಿಸಿದ ನಂತರ ಹಮಾಸ್ ಈ ಹೇಳಿಕೆ ನೀಡಿದೆ.

ಇರಾನಿನ ಪ್ರತಿಕ್ರಿಯೆಯನ್ನು “ಕಾನೂನುಬದ್ಧ” ಎಂದು ಬಣ್ಣಿಸಿದ ಅಲ್-ರಿಷೇಕ್ ಅವರು, ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶಗಳಲ್ಲಿ ಮತ್ತು ಅದರಾಚೆ ನಡೆಸುತ್ತಿರುವ ತನ್ನ ನಿರಂತರ ಕೃತ್ಯಗಳಿಗೆ ಇಸ್ರೇಲ್ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

“ಇರಾನ್‌ನ ಈ ತೀವ್ರ ಪ್ರತಿಕ್ರಿಯೆಯು ಯಾವುದೇ ದುರಹಂಕಾರವನ್ನು ಪ್ರಶ್ನಿಸದೆ ಬಿಡುವುದಿಲ್ಲ ಮತ್ತು ಯಾವುದೇ ಆಕ್ರಮಣಕ್ಕೆ ಶಿಕ್ಷೆಯಿಲ್ಲದೆ ಇರುವುದಿಲ್ಲ ಎಂದು ಸಾಬೀತುಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ಒಳಬರುವ ಬಹುಪಾಲು ಸ್ಪೋಟಕಗಳನ್ನು ತಡೆದಿವೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿಕೊಂಡಿದ್ದರೂ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ನಿರಾಕರಿಸಿದ್ದು, ತಮ್ಮ ಕ್ಷಿಪಣಿಗಳು ಹಲವಾರು ಸೇನಾ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿ ಬಹು-ಪದರದ ವಾಯು ರಕ್ಷಣಾ ಗುರಾಣಿಯನ್ನು ಭೇದಿಸಿದೆ ಎಂದು ಹೇಳಿದೆ.

ಇಸ್ರೇಲಿ ನೀತಿಗಳಿಗೆ ವಿರುದ್ಧವಾಗಿ ದೀರ್ಘಕಾಲದಿಂದ ಇರಾನ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಹಮಾಸ್, ಈ ಬಲಪ್ರದರ್ಶನವನ್ನು ಪ್ರಾದೇಶಿಕ ಅಧಿಕಾರ ಸಮತೋಲನದಲ್ಲಿ ಒಂದು ಮಹತ್ವದ ತಿರುವು ಎಂದು ಶ್ಲಾಘಿಸಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...