Homeಮುಖಪುಟಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

- Advertisement -
- Advertisement -

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್ ಬಹ್ರೇನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ ಎಂದು newindianexpress.com ವರದಿ ಮಾಡಿದೆ.

ಫೆಬ್ರವರಿ 28ರಂದು ಆರಂಭವಾದ ಯುದ್ಧಕ್ಕೆ ಶಾಶ್ವತ ಅಂತ್ಯವನ್ನು ಕಂಡುಕೊಳ್ಳಲು ಇರಾನ್ ಮತ್ತು ಅಮೆರಿಕ ನಡುವೆ ಮುಂದಿನ ಯಾವುದೇ ಮಾತುಕತೆಗಳು ನಡೆಯಬೇಕಾದರೂ ಹಾರ್ಮುಝ್ ಜಲಸಂಧಿಯೇ ಪ್ರಮುಖ ವಿವಾದಾತ್ಮಕ ಅಂಶವಾಗಿದೆ (ಅಡ್ಡಿಯಾಗಿದೆ). ಯುದ್ಧ ಆರಂಭವಾಗುವ ಮೊದಲು ಜಾಗತಿಕವಾಗಿ ವಹಿವಾಟು ನಡೆಸಲಾಗುತ್ತಿದ್ದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಸುಮಾರು ಐದನೇ ಒಂದು ಭಾಗದಷ್ಟು ಈ ಜಲಸಂಧಿಯ ಮೂಲಕವೇ ಹಾದುಹೋಗುತ್ತಿತ್ತು. ಯುದ್ಧದ ಸಮಯದಲ್ಲಿ ಇದರ ಮೇಲೆ ಇರಾನ್ ಸಾಧಿಸಿದ ನಿಯಂತ್ರಣವು ಜಾಗತಿಕ ಇಂಧನ ಬಿಕ್ಕಟ್ಟಿಗೆ ಕಾರಣವಾಗಿತ್ತು. ಆದಾಗ್ಯೂ, ತೈಲ ಬೆಲೆಗಳು ಯುದ್ಧದ ಸಮಯದಲ್ಲಿದ್ದ ಗರಿಷ್ಠ ಮಟ್ಟವಾದ ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ನಿಂದ ಈಗ ಗಣನೀಯವಾಗಿ ಕುಸಿದಿವೆ.

ಅಮೆರಿಕದ ಸೇನೆಯ ಸೆಂಟ್ರಲ್ ಕಮಾಂಡ್ ನೀಡಿರುವ ಮಾಹಿತಿ ಪ್ರಕಾರ, ಈ ಹಿಂದಿನ ಎರಡು ಹಂತದ ದಾಳಿಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ, ಅಂದರೆ ಸುಮಾರು 140 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಪ್ರಮುಖವಾಗಿ ಕ್ಷಿಪಣಿ ಮತ್ತು ಡ್ರೋನ್ ಉಡಾವಣಾ ನೆಲೆಗಳು, ಯುದ್ಧಸಾಮಗ್ರಿ ಸಂಗ್ರಹಾಗಾರಗಳು, ಸಂಪರ್ಕ ಸಾಧನಗಳು ಹಾಗೂ ಇತರೆ ಆಯಕಟ್ಟಿನ ಸ್ಥಳಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

“ಹಾರ್ಮುಝ್ ಜಲಸಂಧಿಯ ಮೂಲಕ ಮುಕ್ತವಾಗಿ ಸಂಚರಿಸುವ ಹಡಗುಗಳ ಮೇಲೆ ಇರಾನ್ ಇಷ್ಟಬಂದಂತೆ ದಾಳಿ ಮಾಡುವ ಸಾಮರ್ಥ್ಯವನ್ನು ಈ ವೈಮಾನಿಕ ದಾಳಿಗಳು ಕುಂಠಿತಗೊಳಿಸುತ್ತವೆ” ಎಂದು ಅಮೆರಿಕ ಹೇಳಿಕೊಂಡಿದೆ.

ಪರ್ಷಿಯನ್ ಕೊಲ್ಲಿಯಲ್ಲಿ ನಡೆದಿರುವ ಈ ಹೊಸ ಪರಸ್ಪರ ದಾಳಿಗಳು, ಕದನ ವಿರಾಮ “ಅಂತ್ಯಗೊಂಡಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ದಿನಗಳಲ್ಲಿ ಸಂಭವಿಸಿವೆ. ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಇಂಟರ್‌ನೆಟ್‌ನಲ್ಲಿ, “ಇರಾನ್ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಈಗ ಅವರು ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಬಹ್ರೇನ್, ಕತಾರ್ ಮತ್ತು ಯುಎಇ ಮೇಲೆ ದಾಳಿ

ಇರಾನ್‌ನಿಂದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆಯಲಿರುವ ಬಗ್ಗೆ ಯುಎಇ ಭಾನುವಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಇದೇ ಸಮಯದಲ್ಲಿ ನೆರೆಯ ಕತಾರ್‌ನಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಈ ಸ್ಫೋಟಗಳು ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಕತಾರ್‌ನಲ್ಲೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್ ಮೊಳಗಿದೆ. ಇರಾನ್ ಕಡೆಯಿಂದ ಬಂದಿರುವ ಕ್ಷಿಪಣಿಗಳನ್ನು ತಡೆದು ಹೊಡೆದುರುಳಿಸಲಾಗಿದೆ ಎಂದು ಕತಾರ್ ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ, ಪರ್ಷಿಯನ್ ಕೊಲ್ಲಿಯ ದ್ವೀಪ ರಾಷ್ಟ್ರ ಹಾಗೂ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್‌ನ (ನೌಕಾಪಡೆಯ ಪ್ರಮುಖ ನೆಲೆ) ನೆಲೆಯಾಗಿರುವ ಬಹ್ರೇನ್‌ನಲ್ಲಿಯೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್‌ಗಳು ಮೊಳಗಿವೆ.

ಇರಾನ್ ಯುಎಇಯ ಯಾವ ಪ್ರದೇಶಗಳ ಮೇಲೆ ದಾಳಿ ಮಾಡಿದೆ ಎಂಬುವುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಅಬುಧಾಬಿ ಮತ್ತು ದುಬೈ ನಗರಗಳನ್ನು ಒಳಗೊಂಡಿರುವ ಯುಎಇ ಮೇಲೆ ಕೊನೆಯ ಬಾರಿಗೆ ಕಳೆದ ಮೇ ತಿಂಗಳಿನಲ್ಲಿ ದಾಳಿ ನಡೆದಿತ್ತು. ಆಗ ಡ್ರೋನ್ ದಾಳಿಯೊಂದರಿಂದಾಗಿ ದೇಶದ ಏಕೈಕ ಪರಮಾಣು ವಿದ್ಯುತ್ ಸ್ಥಾವರದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಹಾರ್ಮುಝ್ ಜಲಸಂಧಿಯಲ್ಲಿ ಸೈಪ್ರಸ್ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಹಡಗಿನ ಇಂಜಿನ್ ಕೋಣೆಗೆ ಗಂಭೀರ ಹಾನಿಯಾಗಿದೆ. ದಾಳಿ ಬಳಿಕ ಹಡಗಿನ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಬ್ರಿಟಿಷ್ ಸೇನೆಯ ಮೇಲ್ವಿಚಾರಣೆಯಲ್ಲಿರುವ ಯುನೈಟೆಡ್ ಕಿಂಗ್ಡಮ್ ಮಾರಿಟೈಮ್ ಟ್ರೇಡ್ ಆಪರೇಷನ್ಸ್ (ಯುಕೆಎಂಟಿಒ) ಕೇಂದ್ರವು, ಆ ಹಡಗು ಒಮಾನ್‌ನ ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿ ಚಲಿಸುತ್ತಿತ್ತು ಎಂದು ತಿಳಿಸಿದೆ. ಇರಾನ್‌ನ ಪ್ರಾದೇಶಿಕ ಜಲಪ್ರದೇಶವನ್ನು ತಪ್ಪಿಸಿ, ಪರ್ಷಿಯನ್ ಕೊಲ್ಲಿಯನ್ನು ಪ್ರವೇಶಿಸಲು ಮತ್ತು ಅಲ್ಲಿಂದ ಹೊರಹೋಗಲು ಹಡಗುಗಳು ಈ ಮಾರ್ಗವನ್ನೇ ಬಳಸುತ್ತಿದ್ದವು. ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಕಾರಣ ಸಿಬ್ಬಂದಿ ಅದನ್ನು ಬಿಟ್ಟು ಹೊರಟಿದ್ದಾರೆ ಎಂದು ಈ ಕೇಂದ್ರವು ಹೇಳಿದೆ.

ಇರಾನ್‌ನ ಅರೆಸೇನಾ ಪಡೆಯಾದ ರೆವಲ್ಯೂಷನರಿ ಗಾರ್ಡ್, “ಹಲವಾರು ಹಡಗುಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಂಡು ಅನುಮೋದಿತ ಮಾರ್ಗದಲ್ಲಿ ಮುಂದುವರಿಯುವಂತೆ ನಾವು ನೀಡಿದ ಎಚ್ಚರಿಕೆಗಳು ಮತ್ತು ಸೂಚನೆಗಳನ್ನು ನಿರ್ಲಕ್ಷಿಸಿವೆ. ಅವುಗಳಲ್ಲಿ ಒಂದಕ್ಕೆ ಎಚ್ಚರಿಕೆಯ ಗುಂಡು ಹಾರಿಸಿ (ವಾರ್ನಿಂಗ್ ಶಾಟ್) ಅದನ್ನು ತಡೆದು ನಿಲ್ಲಿಸಲಾಗಿದೆ” ಎಂದು ತಿಳಿಸಿದೆ.

ಇರಾನ್ ಮತ್ತಷ್ಟು ದಾಳಿಗಳನ್ನು ಎದುರಿಸಬೇಕಾಗಿ ಬಂದರೆ ಪ್ರಾದೇಶಿಕವಾಗಿ ಇರುವ “ಶತ್ರುಗಳ ಹೆಚ್ಚುವರಿ ನೆಲೆಗಳನ್ನು” ಗುರಿಯಾಗಿಸಿಕೊಳ್ಳುವುದಾಗಿ ಎಚ್ಚರಿಸಿದೆ, ಹಾಗೂ ಮುಂದಿನ ಆದೇಶದವರೆಗೆ ಹಾರ್ಮುಝ್ ಜಲಸಂಧಿಯು ಮುಚ್ಚಲ್ಪಟ್ಟಿರುತ್ತದೆ ಎಂದು ಹೇಳಿದೆ.

ಅಮೆರಿಕವು ಇರಾನ್‌ನ ಬಂದರ್ ಅಬ್ಬಾಸ್, ಸಿರಿಕ್ ಮತ್ತು ಜಲಸಂಧಿಯ ಕರಾವಳಿಯುದ್ದಕ್ಕೂ ಇರುವ ಇತರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಆದಾಗ್ಯೂ, ಈ ದಾಳಿಯಿಂದ ಸಂಭವಿಸಿದ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ಇರಾನ್ ತಕ್ಷಣಕ್ಕೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...