Homeಮುಖಪುಟಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

- Advertisement -
- Advertisement -

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್ ಬಹ್ರೇನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ ಎಂದು newindianexpress.com ವರದಿ ಮಾಡಿದೆ.

ಫೆಬ್ರವರಿ 28ರಂದು ಆರಂಭವಾದ ಯುದ್ಧಕ್ಕೆ ಶಾಶ್ವತ ಅಂತ್ಯವನ್ನು ಕಂಡುಕೊಳ್ಳಲು ಇರಾನ್ ಮತ್ತು ಅಮೆರಿಕ ನಡುವೆ ಮುಂದಿನ ಯಾವುದೇ ಮಾತುಕತೆಗಳು ನಡೆಯಬೇಕಾದರೂ ಹಾರ್ಮುಝ್ ಜಲಸಂಧಿಯೇ ಪ್ರಮುಖ ವಿವಾದಾತ್ಮಕ ಅಂಶವಾಗಿದೆ (ಅಡ್ಡಿಯಾಗಿದೆ). ಯುದ್ಧ ಆರಂಭವಾಗುವ ಮೊದಲು ಜಾಗತಿಕವಾಗಿ ವಹಿವಾಟು ನಡೆಸಲಾಗುತ್ತಿದ್ದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಸುಮಾರು ಐದನೇ ಒಂದು ಭಾಗದಷ್ಟು ಈ ಜಲಸಂಧಿಯ ಮೂಲಕವೇ ಹಾದುಹೋಗುತ್ತಿತ್ತು. ಯುದ್ಧದ ಸಮಯದಲ್ಲಿ ಇದರ ಮೇಲೆ ಇರಾನ್ ಸಾಧಿಸಿದ ನಿಯಂತ್ರಣವು ಜಾಗತಿಕ ಇಂಧನ ಬಿಕ್ಕಟ್ಟಿಗೆ ಕಾರಣವಾಗಿತ್ತು. ಆದಾಗ್ಯೂ, ತೈಲ ಬೆಲೆಗಳು ಯುದ್ಧದ ಸಮಯದಲ್ಲಿದ್ದ ಗರಿಷ್ಠ ಮಟ್ಟವಾದ ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ನಿಂದ ಈಗ ಗಣನೀಯವಾಗಿ ಕುಸಿದಿವೆ.

ಅಮೆರಿಕದ ಸೇನೆಯ ಸೆಂಟ್ರಲ್ ಕಮಾಂಡ್ ನೀಡಿರುವ ಮಾಹಿತಿ ಪ್ರಕಾರ, ಈ ಹಿಂದಿನ ಎರಡು ಹಂತದ ದಾಳಿಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ, ಅಂದರೆ ಸುಮಾರು 140 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಪ್ರಮುಖವಾಗಿ ಕ್ಷಿಪಣಿ ಮತ್ತು ಡ್ರೋನ್ ಉಡಾವಣಾ ನೆಲೆಗಳು, ಯುದ್ಧಸಾಮಗ್ರಿ ಸಂಗ್ರಹಾಗಾರಗಳು, ಸಂಪರ್ಕ ಸಾಧನಗಳು ಹಾಗೂ ಇತರೆ ಆಯಕಟ್ಟಿನ ಸ್ಥಳಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

“ಹಾರ್ಮುಝ್ ಜಲಸಂಧಿಯ ಮೂಲಕ ಮುಕ್ತವಾಗಿ ಸಂಚರಿಸುವ ಹಡಗುಗಳ ಮೇಲೆ ಇರಾನ್ ಇಷ್ಟಬಂದಂತೆ ದಾಳಿ ಮಾಡುವ ಸಾಮರ್ಥ್ಯವನ್ನು ಈ ವೈಮಾನಿಕ ದಾಳಿಗಳು ಕುಂಠಿತಗೊಳಿಸುತ್ತವೆ” ಎಂದು ಅಮೆರಿಕ ಹೇಳಿಕೊಂಡಿದೆ.

ಪರ್ಷಿಯನ್ ಕೊಲ್ಲಿಯಲ್ಲಿ ನಡೆದಿರುವ ಈ ಹೊಸ ಪರಸ್ಪರ ದಾಳಿಗಳು, ಕದನ ವಿರಾಮ “ಅಂತ್ಯಗೊಂಡಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ದಿನಗಳಲ್ಲಿ ಸಂಭವಿಸಿವೆ. ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಇಂಟರ್‌ನೆಟ್‌ನಲ್ಲಿ, “ಇರಾನ್ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಈಗ ಅವರು ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಬಹ್ರೇನ್, ಕತಾರ್ ಮತ್ತು ಯುಎಇ ಮೇಲೆ ದಾಳಿ

ಇರಾನ್‌ನಿಂದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆಯಲಿರುವ ಬಗ್ಗೆ ಯುಎಇ ಭಾನುವಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಇದೇ ಸಮಯದಲ್ಲಿ ನೆರೆಯ ಕತಾರ್‌ನಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಈ ಸ್ಫೋಟಗಳು ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಕತಾರ್‌ನಲ್ಲೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್ ಮೊಳಗಿದೆ. ಇರಾನ್ ಕಡೆಯಿಂದ ಬಂದಿರುವ ಕ್ಷಿಪಣಿಗಳನ್ನು ತಡೆದು ಹೊಡೆದುರುಳಿಸಲಾಗಿದೆ ಎಂದು ಕತಾರ್ ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ, ಪರ್ಷಿಯನ್ ಕೊಲ್ಲಿಯ ದ್ವೀಪ ರಾಷ್ಟ್ರ ಹಾಗೂ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್‌ನ (ನೌಕಾಪಡೆಯ ಪ್ರಮುಖ ನೆಲೆ) ನೆಲೆಯಾಗಿರುವ ಬಹ್ರೇನ್‌ನಲ್ಲಿಯೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್‌ಗಳು ಮೊಳಗಿವೆ.

ಇರಾನ್ ಯುಎಇಯ ಯಾವ ಪ್ರದೇಶಗಳ ಮೇಲೆ ದಾಳಿ ಮಾಡಿದೆ ಎಂಬುವುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಅಬುಧಾಬಿ ಮತ್ತು ದುಬೈ ನಗರಗಳನ್ನು ಒಳಗೊಂಡಿರುವ ಯುಎಇ ಮೇಲೆ ಕೊನೆಯ ಬಾರಿಗೆ ಕಳೆದ ಮೇ ತಿಂಗಳಿನಲ್ಲಿ ದಾಳಿ ನಡೆದಿತ್ತು. ಆಗ ಡ್ರೋನ್ ದಾಳಿಯೊಂದರಿಂದಾಗಿ ದೇಶದ ಏಕೈಕ ಪರಮಾಣು ವಿದ್ಯುತ್ ಸ್ಥಾವರದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಹಾರ್ಮುಝ್ ಜಲಸಂಧಿಯಲ್ಲಿ ಸೈಪ್ರಸ್ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಹಡಗಿನ ಇಂಜಿನ್ ಕೋಣೆಗೆ ಗಂಭೀರ ಹಾನಿಯಾಗಿದೆ. ದಾಳಿ ಬಳಿಕ ಹಡಗಿನ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಬ್ರಿಟಿಷ್ ಸೇನೆಯ ಮೇಲ್ವಿಚಾರಣೆಯಲ್ಲಿರುವ ಯುನೈಟೆಡ್ ಕಿಂಗ್ಡಮ್ ಮಾರಿಟೈಮ್ ಟ್ರೇಡ್ ಆಪರೇಷನ್ಸ್ (ಯುಕೆಎಂಟಿಒ) ಕೇಂದ್ರವು, ಆ ಹಡಗು ಒಮಾನ್‌ನ ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿ ಚಲಿಸುತ್ತಿತ್ತು ಎಂದು ತಿಳಿಸಿದೆ. ಇರಾನ್‌ನ ಪ್ರಾದೇಶಿಕ ಜಲಪ್ರದೇಶವನ್ನು ತಪ್ಪಿಸಿ, ಪರ್ಷಿಯನ್ ಕೊಲ್ಲಿಯನ್ನು ಪ್ರವೇಶಿಸಲು ಮತ್ತು ಅಲ್ಲಿಂದ ಹೊರಹೋಗಲು ಹಡಗುಗಳು ಈ ಮಾರ್ಗವನ್ನೇ ಬಳಸುತ್ತಿದ್ದವು. ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಕಾರಣ ಸಿಬ್ಬಂದಿ ಅದನ್ನು ಬಿಟ್ಟು ಹೊರಟಿದ್ದಾರೆ ಎಂದು ಈ ಕೇಂದ್ರವು ಹೇಳಿದೆ.

ಇರಾನ್‌ನ ಅರೆಸೇನಾ ಪಡೆಯಾದ ರೆವಲ್ಯೂಷನರಿ ಗಾರ್ಡ್, “ಹಲವಾರು ಹಡಗುಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಂಡು ಅನುಮೋದಿತ ಮಾರ್ಗದಲ್ಲಿ ಮುಂದುವರಿಯುವಂತೆ ನಾವು ನೀಡಿದ ಎಚ್ಚರಿಕೆಗಳು ಮತ್ತು ಸೂಚನೆಗಳನ್ನು ನಿರ್ಲಕ್ಷಿಸಿವೆ. ಅವುಗಳಲ್ಲಿ ಒಂದಕ್ಕೆ ಎಚ್ಚರಿಕೆಯ ಗುಂಡು ಹಾರಿಸಿ (ವಾರ್ನಿಂಗ್ ಶಾಟ್) ಅದನ್ನು ತಡೆದು ನಿಲ್ಲಿಸಲಾಗಿದೆ” ಎಂದು ತಿಳಿಸಿದೆ.

ಇರಾನ್ ಮತ್ತಷ್ಟು ದಾಳಿಗಳನ್ನು ಎದುರಿಸಬೇಕಾಗಿ ಬಂದರೆ ಪ್ರಾದೇಶಿಕವಾಗಿ ಇರುವ “ಶತ್ರುಗಳ ಹೆಚ್ಚುವರಿ ನೆಲೆಗಳನ್ನು” ಗುರಿಯಾಗಿಸಿಕೊಳ್ಳುವುದಾಗಿ ಎಚ್ಚರಿಸಿದೆ, ಹಾಗೂ ಮುಂದಿನ ಆದೇಶದವರೆಗೆ ಹಾರ್ಮುಝ್ ಜಲಸಂಧಿಯು ಮುಚ್ಚಲ್ಪಟ್ಟಿರುತ್ತದೆ ಎಂದು ಹೇಳಿದೆ.

ಅಮೆರಿಕವು ಇರಾನ್‌ನ ಬಂದರ್ ಅಬ್ಬಾಸ್, ಸಿರಿಕ್ ಮತ್ತು ಜಲಸಂಧಿಯ ಕರಾವಳಿಯುದ್ದಕ್ಕೂ ಇರುವ ಇತರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಆದಾಗ್ಯೂ, ಈ ದಾಳಿಯಿಂದ ಸಂಭವಿಸಿದ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ಇರಾನ್ ತಕ್ಷಣಕ್ಕೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...