Homeಮುಖಪುಟಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

- Advertisement -
- Advertisement -

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್ ಬಹ್ರೇನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ ಎಂದು newindianexpress.com ವರದಿ ಮಾಡಿದೆ.

ಫೆಬ್ರವರಿ 28ರಂದು ಆರಂಭವಾದ ಯುದ್ಧಕ್ಕೆ ಶಾಶ್ವತ ಅಂತ್ಯವನ್ನು ಕಂಡುಕೊಳ್ಳಲು ಇರಾನ್ ಮತ್ತು ಅಮೆರಿಕ ನಡುವೆ ಮುಂದಿನ ಯಾವುದೇ ಮಾತುಕತೆಗಳು ನಡೆಯಬೇಕಾದರೂ ಹಾರ್ಮುಝ್ ಜಲಸಂಧಿಯೇ ಪ್ರಮುಖ ವಿವಾದಾತ್ಮಕ ಅಂಶವಾಗಿದೆ (ಅಡ್ಡಿಯಾಗಿದೆ). ಯುದ್ಧ ಆರಂಭವಾಗುವ ಮೊದಲು ಜಾಗತಿಕವಾಗಿ ವಹಿವಾಟು ನಡೆಸಲಾಗುತ್ತಿದ್ದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಸುಮಾರು ಐದನೇ ಒಂದು ಭಾಗದಷ್ಟು ಈ ಜಲಸಂಧಿಯ ಮೂಲಕವೇ ಹಾದುಹೋಗುತ್ತಿತ್ತು. ಯುದ್ಧದ ಸಮಯದಲ್ಲಿ ಇದರ ಮೇಲೆ ಇರಾನ್ ಸಾಧಿಸಿದ ನಿಯಂತ್ರಣವು ಜಾಗತಿಕ ಇಂಧನ ಬಿಕ್ಕಟ್ಟಿಗೆ ಕಾರಣವಾಗಿತ್ತು. ಆದಾಗ್ಯೂ, ತೈಲ ಬೆಲೆಗಳು ಯುದ್ಧದ ಸಮಯದಲ್ಲಿದ್ದ ಗರಿಷ್ಠ ಮಟ್ಟವಾದ ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ನಿಂದ ಈಗ ಗಣನೀಯವಾಗಿ ಕುಸಿದಿವೆ.

ಅಮೆರಿಕದ ಸೇನೆಯ ಸೆಂಟ್ರಲ್ ಕಮಾಂಡ್ ನೀಡಿರುವ ಮಾಹಿತಿ ಪ್ರಕಾರ, ಈ ಹಿಂದಿನ ಎರಡು ಹಂತದ ದಾಳಿಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ, ಅಂದರೆ ಸುಮಾರು 140 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಪ್ರಮುಖವಾಗಿ ಕ್ಷಿಪಣಿ ಮತ್ತು ಡ್ರೋನ್ ಉಡಾವಣಾ ನೆಲೆಗಳು, ಯುದ್ಧಸಾಮಗ್ರಿ ಸಂಗ್ರಹಾಗಾರಗಳು, ಸಂಪರ್ಕ ಸಾಧನಗಳು ಹಾಗೂ ಇತರೆ ಆಯಕಟ್ಟಿನ ಸ್ಥಳಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

“ಹಾರ್ಮುಝ್ ಜಲಸಂಧಿಯ ಮೂಲಕ ಮುಕ್ತವಾಗಿ ಸಂಚರಿಸುವ ಹಡಗುಗಳ ಮೇಲೆ ಇರಾನ್ ಇಷ್ಟಬಂದಂತೆ ದಾಳಿ ಮಾಡುವ ಸಾಮರ್ಥ್ಯವನ್ನು ಈ ವೈಮಾನಿಕ ದಾಳಿಗಳು ಕುಂಠಿತಗೊಳಿಸುತ್ತವೆ” ಎಂದು ಅಮೆರಿಕ ಹೇಳಿಕೊಂಡಿದೆ.

ಪರ್ಷಿಯನ್ ಕೊಲ್ಲಿಯಲ್ಲಿ ನಡೆದಿರುವ ಈ ಹೊಸ ಪರಸ್ಪರ ದಾಳಿಗಳು, ಕದನ ವಿರಾಮ “ಅಂತ್ಯಗೊಂಡಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ದಿನಗಳಲ್ಲಿ ಸಂಭವಿಸಿವೆ. ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಇಂಟರ್‌ನೆಟ್‌ನಲ್ಲಿ, “ಇರಾನ್ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಈಗ ಅವರು ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಬಹ್ರೇನ್, ಕತಾರ್ ಮತ್ತು ಯುಎಇ ಮೇಲೆ ದಾಳಿ

ಇರಾನ್‌ನಿಂದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆಯಲಿರುವ ಬಗ್ಗೆ ಯುಎಇ ಭಾನುವಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಇದೇ ಸಮಯದಲ್ಲಿ ನೆರೆಯ ಕತಾರ್‌ನಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಈ ಸ್ಫೋಟಗಳು ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಕತಾರ್‌ನಲ್ಲೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್ ಮೊಳಗಿದೆ. ಇರಾನ್ ಕಡೆಯಿಂದ ಬಂದಿರುವ ಕ್ಷಿಪಣಿಗಳನ್ನು ತಡೆದು ಹೊಡೆದುರುಳಿಸಲಾಗಿದೆ ಎಂದು ಕತಾರ್ ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ, ಪರ್ಷಿಯನ್ ಕೊಲ್ಲಿಯ ದ್ವೀಪ ರಾಷ್ಟ್ರ ಹಾಗೂ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್‌ನ (ನೌಕಾಪಡೆಯ ಪ್ರಮುಖ ನೆಲೆ) ನೆಲೆಯಾಗಿರುವ ಬಹ್ರೇನ್‌ನಲ್ಲಿಯೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್‌ಗಳು ಮೊಳಗಿವೆ.

ಇರಾನ್ ಯುಎಇಯ ಯಾವ ಪ್ರದೇಶಗಳ ಮೇಲೆ ದಾಳಿ ಮಾಡಿದೆ ಎಂಬುವುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಅಬುಧಾಬಿ ಮತ್ತು ದುಬೈ ನಗರಗಳನ್ನು ಒಳಗೊಂಡಿರುವ ಯುಎಇ ಮೇಲೆ ಕೊನೆಯ ಬಾರಿಗೆ ಕಳೆದ ಮೇ ತಿಂಗಳಿನಲ್ಲಿ ದಾಳಿ ನಡೆದಿತ್ತು. ಆಗ ಡ್ರೋನ್ ದಾಳಿಯೊಂದರಿಂದಾಗಿ ದೇಶದ ಏಕೈಕ ಪರಮಾಣು ವಿದ್ಯುತ್ ಸ್ಥಾವರದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಹಾರ್ಮುಝ್ ಜಲಸಂಧಿಯಲ್ಲಿ ಸೈಪ್ರಸ್ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಹಡಗಿನ ಇಂಜಿನ್ ಕೋಣೆಗೆ ಗಂಭೀರ ಹಾನಿಯಾಗಿದೆ. ದಾಳಿ ಬಳಿಕ ಹಡಗಿನ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಬ್ರಿಟಿಷ್ ಸೇನೆಯ ಮೇಲ್ವಿಚಾರಣೆಯಲ್ಲಿರುವ ಯುನೈಟೆಡ್ ಕಿಂಗ್ಡಮ್ ಮಾರಿಟೈಮ್ ಟ್ರೇಡ್ ಆಪರೇಷನ್ಸ್ (ಯುಕೆಎಂಟಿಒ) ಕೇಂದ್ರವು, ಆ ಹಡಗು ಒಮಾನ್‌ನ ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿ ಚಲಿಸುತ್ತಿತ್ತು ಎಂದು ತಿಳಿಸಿದೆ. ಇರಾನ್‌ನ ಪ್ರಾದೇಶಿಕ ಜಲಪ್ರದೇಶವನ್ನು ತಪ್ಪಿಸಿ, ಪರ್ಷಿಯನ್ ಕೊಲ್ಲಿಯನ್ನು ಪ್ರವೇಶಿಸಲು ಮತ್ತು ಅಲ್ಲಿಂದ ಹೊರಹೋಗಲು ಹಡಗುಗಳು ಈ ಮಾರ್ಗವನ್ನೇ ಬಳಸುತ್ತಿದ್ದವು. ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಕಾರಣ ಸಿಬ್ಬಂದಿ ಅದನ್ನು ಬಿಟ್ಟು ಹೊರಟಿದ್ದಾರೆ ಎಂದು ಈ ಕೇಂದ್ರವು ಹೇಳಿದೆ.

ಇರಾನ್‌ನ ಅರೆಸೇನಾ ಪಡೆಯಾದ ರೆವಲ್ಯೂಷನರಿ ಗಾರ್ಡ್, “ಹಲವಾರು ಹಡಗುಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಂಡು ಅನುಮೋದಿತ ಮಾರ್ಗದಲ್ಲಿ ಮುಂದುವರಿಯುವಂತೆ ನಾವು ನೀಡಿದ ಎಚ್ಚರಿಕೆಗಳು ಮತ್ತು ಸೂಚನೆಗಳನ್ನು ನಿರ್ಲಕ್ಷಿಸಿವೆ. ಅವುಗಳಲ್ಲಿ ಒಂದಕ್ಕೆ ಎಚ್ಚರಿಕೆಯ ಗುಂಡು ಹಾರಿಸಿ (ವಾರ್ನಿಂಗ್ ಶಾಟ್) ಅದನ್ನು ತಡೆದು ನಿಲ್ಲಿಸಲಾಗಿದೆ” ಎಂದು ತಿಳಿಸಿದೆ.

ಇರಾನ್ ಮತ್ತಷ್ಟು ದಾಳಿಗಳನ್ನು ಎದುರಿಸಬೇಕಾಗಿ ಬಂದರೆ ಪ್ರಾದೇಶಿಕವಾಗಿ ಇರುವ “ಶತ್ರುಗಳ ಹೆಚ್ಚುವರಿ ನೆಲೆಗಳನ್ನು” ಗುರಿಯಾಗಿಸಿಕೊಳ್ಳುವುದಾಗಿ ಎಚ್ಚರಿಸಿದೆ, ಹಾಗೂ ಮುಂದಿನ ಆದೇಶದವರೆಗೆ ಹಾರ್ಮುಝ್ ಜಲಸಂಧಿಯು ಮುಚ್ಚಲ್ಪಟ್ಟಿರುತ್ತದೆ ಎಂದು ಹೇಳಿದೆ.

ಅಮೆರಿಕವು ಇರಾನ್‌ನ ಬಂದರ್ ಅಬ್ಬಾಸ್, ಸಿರಿಕ್ ಮತ್ತು ಜಲಸಂಧಿಯ ಕರಾವಳಿಯುದ್ದಕ್ಕೂ ಇರುವ ಇತರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಆದಾಗ್ಯೂ, ಈ ದಾಳಿಯಿಂದ ಸಂಭವಿಸಿದ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ಇರಾನ್ ತಕ್ಷಣಕ್ಕೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...