Homeಅಂತರಾಷ್ಟ್ರೀಯಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

- Advertisement -
- Advertisement -

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ ‘ಹತ್ಯೆಗಳು ನಿಂತಿವೆ’ ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು ಸರ್ಕಾರ ಗಲ್ಲಿಗೇರಿಸಲು ಯೋಜಿಸಿದೆ ಎಂಬುವುದನ್ನು ತಳ್ಳಿ ಹಾಕಿದ್ದಾರೆ.

ಆಡಳಿತ ವಿರೋಧಿ ಪ್ರತಿಭಟನಾಕಾರರು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್) ಬೆಂಬಲಿಗರು ಎಂದು ಆರಂಭದಲ್ಲಿ ಇರಾನ್ ಸರ್ಕಾರ ಹೇಳಿತ್ತು. ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಅದಾಗ್ಯೂ ಪ್ರತಿಭಟನೆಗಳು ತೀವ್ರಗೊಂಡಾಗ ಪ್ರತಿಭಟನಾಕಾರರು ದೇವರ ಶತ್ರುಗಳು ಎಂದಿತ್ತು. ಅವರನ್ನು ಗಲ್ಲಿಗೇರಿಸುವ ಘೋಷಣೆ ಮಾಡಿತ್ತು.

ಈ ಹಿಂದಿನಿಂದಲೂ ಹಲವು ನೆಪ ಹೇಳಿ ಇರಾನ್‌ ಮೇಲೆ ದಾಳಿ ನಡೆಸುವ ಹಪಹಪಿಯಲ್ಲಿದ್ದ ಟ್ರಂಪ್‌ಗೆ ಈ ಘೋಷಣೆ ದೊಡ್ಡ ಬಲ ನೀಡಿತ್ತು. ಇರಾನ್‌ ಪ್ರತಿಭಟನಾಕಾರರನ್ನು ಕ್ರೂರವಾಗಿ ಧಮನಿಸಲು ಮುಂದಾದರೆ, ಅಥವಾ ಹತ್ಯೆಗಳು ಮುಂದುವರಿದರೆ ಅಮೆರಿಕ ಮಧ್ಯ ಪ್ರವೇಶಿಸಲಿದೆ ಎಂದಿದ್ದರು. ಈ ಮೂಲಕ ಇರಾನ್‌ನ ಆಂತರಿಕ ದಂಗೆಗೆ ಪರೋಕ್ಷ ಬೆಂಬಲ ನೀಡಿದ್ದರು.

ಆದರೆ, ಬುಧವಾರ ಇರಾನ್‌ ಮತ್ತು ಅಮೆರಿಕ ಎರಡೂ ಕಡೆಯ ವರಸೆ ಬದಲಾಗಿದೆ. ಅತ್ತ ಕಡೆಯಿಂದ ಟ್ರಂಪ್ ‘ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ’ ಎಂದರೆ, ಇತ್ತ ಫಾಕ್ಸ್ ನ್ಯೂಸ್‌ ಜೊತೆ ಮಾತನಾಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ‘ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಿಲ್ಲ’ ಎಂದಿದ್ದಾರೆ.

ಈ ನಡುವೆ ಬುಧವಾರ-ಗುರುವಾರದ ಮಧ್ಯೆ ಎರಡು ಮಹತ್ವದ ಬೆಳವಣಿಗೆಳು ಆಗಿವೆ. ಅಮೆರಿಕ ಮತ್ತು ಯುಕೆ ಎರಡೂ ಕತಾರ್‌ನಲ್ಲಿರುವ ಅಲ್-ಉದೈದ್ ವಾಯುನೆಲೆಯಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಕಡಿಮೆ ಮಾಡುತ್ತಿವೆ. ಅಂದರೆ, ಅಲ್ಲಿನ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುತ್ತಿವೆ ಎಂದು ಬುಧವಾರ ಸಂಜೆ ವರದಿಯಾಗಿತ್ತು.

ಅಮೆರಿಕ ಇರಾನ್‌ ಮೇಲೆ ದಾಳಿ ನಡೆಸುವುದು ನಿಚ್ಚಳವಾಗಿದೆ. ಅದರ ಪೂರ್ವಭಾವಿಯಾಗಿ ತಮ್ಮ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಏನು ಬೇಕಾದರು ಆಗಬಹುದು ಎಂದು ಬುಧವಾರ ಸಂಜೆ ಜಗತ್ತು ಆತಂಕಗೊಂಡಿತ್ತು. ಆದರೆ, ಅಮೆರಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾತ್ರ ತಮ್ಮ ಸೈನಿಕರನ್ನು ವಾಪಸ್ ಕರೆಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಮತ್ತೊಂದೆಡೆ, ಅಮೆರಿಕದ ದಾಳಿ ಸಾಧ್ಯತೆ ಹಿನ್ನೆಲೆ ಬುಧವಾರ ಸಂಜೆಯಿಂದ ಇರಾನ್‌ ತನ್ನ ವಾಯು ಪ್ರದೇಶವನ್ನು ಮುಚ್ಚಿತ್ತು. ಅದರೆ, ಗುರುವಾರ ಮುಂಜಾನೆ ತೆರೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ. ಆದರೆ, ನಾವು ಸೇನಾ ಕಾರ್ಯಾಚರಣೆಯ ಆಯ್ಕೆಯನ್ನು ವಾಪಸ್ ತೆಗೆದುಕೊಂಡಿಲ್ಲ. ಮುಂದಿನ ಬೆಳವಣಿಗೆಯನ್ನು ಕಾದು ನೋಡುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇತ್ತ ಇರಾನ್‌ನಲ್ಲಿ ಪ್ರತಿಭಟನೆಗಳು ಕೊಂಚ ತಣ್ಣಗಾಗಿವೆ ಎಂದು ವರದಿಯಾಗಿದೆ. ಕೆಲ ಮಾನವ ಹಕ್ಕು ಸಂಘಟನೆಗಳು ಇರಾನ್‌ನಲ್ಲಿ ಇದುವರೆಗೆ ಸುಮಾರು 2,500ರಿಂದ 3000 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿವೆ. ಈ ಕುರಿತು ಖಚಿತ ಮಾಹಿತಿಯನ್ನು ಇರಾನ್‌ ಹೊರ ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...