Homeಅಂತರಾಷ್ಟ್ರೀಯಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

- Advertisement -
- Advertisement -

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ ‘ಹತ್ಯೆಗಳು ನಿಂತಿವೆ’ ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು ಸರ್ಕಾರ ಗಲ್ಲಿಗೇರಿಸಲು ಯೋಜಿಸಿದೆ ಎಂಬುವುದನ್ನು ತಳ್ಳಿ ಹಾಕಿದ್ದಾರೆ.

ಆಡಳಿತ ವಿರೋಧಿ ಪ್ರತಿಭಟನಾಕಾರರು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್) ಬೆಂಬಲಿಗರು ಎಂದು ಆರಂಭದಲ್ಲಿ ಇರಾನ್ ಸರ್ಕಾರ ಹೇಳಿತ್ತು. ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಅದಾಗ್ಯೂ ಪ್ರತಿಭಟನೆಗಳು ತೀವ್ರಗೊಂಡಾಗ ಪ್ರತಿಭಟನಾಕಾರರು ದೇವರ ಶತ್ರುಗಳು ಎಂದಿತ್ತು. ಅವರನ್ನು ಗಲ್ಲಿಗೇರಿಸುವ ಘೋಷಣೆ ಮಾಡಿತ್ತು.

ಈ ಹಿಂದಿನಿಂದಲೂ ಹಲವು ನೆಪ ಹೇಳಿ ಇರಾನ್‌ ಮೇಲೆ ದಾಳಿ ನಡೆಸುವ ಹಪಹಪಿಯಲ್ಲಿದ್ದ ಟ್ರಂಪ್‌ಗೆ ಈ ಘೋಷಣೆ ದೊಡ್ಡ ಬಲ ನೀಡಿತ್ತು. ಇರಾನ್‌ ಪ್ರತಿಭಟನಾಕಾರರನ್ನು ಕ್ರೂರವಾಗಿ ಧಮನಿಸಲು ಮುಂದಾದರೆ, ಅಥವಾ ಹತ್ಯೆಗಳು ಮುಂದುವರಿದರೆ ಅಮೆರಿಕ ಮಧ್ಯ ಪ್ರವೇಶಿಸಲಿದೆ ಎಂದಿದ್ದರು. ಈ ಮೂಲಕ ಇರಾನ್‌ನ ಆಂತರಿಕ ದಂಗೆಗೆ ಪರೋಕ್ಷ ಬೆಂಬಲ ನೀಡಿದ್ದರು.

ಆದರೆ, ಬುಧವಾರ ಇರಾನ್‌ ಮತ್ತು ಅಮೆರಿಕ ಎರಡೂ ಕಡೆಯ ವರಸೆ ಬದಲಾಗಿದೆ. ಅತ್ತ ಕಡೆಯಿಂದ ಟ್ರಂಪ್ ‘ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ’ ಎಂದರೆ, ಇತ್ತ ಫಾಕ್ಸ್ ನ್ಯೂಸ್‌ ಜೊತೆ ಮಾತನಾಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ‘ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಿಲ್ಲ’ ಎಂದಿದ್ದಾರೆ.

ಈ ನಡುವೆ ಬುಧವಾರ-ಗುರುವಾರದ ಮಧ್ಯೆ ಎರಡು ಮಹತ್ವದ ಬೆಳವಣಿಗೆಳು ಆಗಿವೆ. ಅಮೆರಿಕ ಮತ್ತು ಯುಕೆ ಎರಡೂ ಕತಾರ್‌ನಲ್ಲಿರುವ ಅಲ್-ಉದೈದ್ ವಾಯುನೆಲೆಯಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಕಡಿಮೆ ಮಾಡುತ್ತಿವೆ. ಅಂದರೆ, ಅಲ್ಲಿನ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುತ್ತಿವೆ ಎಂದು ಬುಧವಾರ ಸಂಜೆ ವರದಿಯಾಗಿತ್ತು.

ಅಮೆರಿಕ ಇರಾನ್‌ ಮೇಲೆ ದಾಳಿ ನಡೆಸುವುದು ನಿಚ್ಚಳವಾಗಿದೆ. ಅದರ ಪೂರ್ವಭಾವಿಯಾಗಿ ತಮ್ಮ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಏನು ಬೇಕಾದರು ಆಗಬಹುದು ಎಂದು ಬುಧವಾರ ಸಂಜೆ ಜಗತ್ತು ಆತಂಕಗೊಂಡಿತ್ತು. ಆದರೆ, ಅಮೆರಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾತ್ರ ತಮ್ಮ ಸೈನಿಕರನ್ನು ವಾಪಸ್ ಕರೆಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಮತ್ತೊಂದೆಡೆ, ಅಮೆರಿಕದ ದಾಳಿ ಸಾಧ್ಯತೆ ಹಿನ್ನೆಲೆ ಬುಧವಾರ ಸಂಜೆಯಿಂದ ಇರಾನ್‌ ತನ್ನ ವಾಯು ಪ್ರದೇಶವನ್ನು ಮುಚ್ಚಿತ್ತು. ಅದರೆ, ಗುರುವಾರ ಮುಂಜಾನೆ ತೆರೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ. ಆದರೆ, ನಾವು ಸೇನಾ ಕಾರ್ಯಾಚರಣೆಯ ಆಯ್ಕೆಯನ್ನು ವಾಪಸ್ ತೆಗೆದುಕೊಂಡಿಲ್ಲ. ಮುಂದಿನ ಬೆಳವಣಿಗೆಯನ್ನು ಕಾದು ನೋಡುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇತ್ತ ಇರಾನ್‌ನಲ್ಲಿ ಪ್ರತಿಭಟನೆಗಳು ಕೊಂಚ ತಣ್ಣಗಾಗಿವೆ ಎಂದು ವರದಿಯಾಗಿದೆ. ಕೆಲ ಮಾನವ ಹಕ್ಕು ಸಂಘಟನೆಗಳು ಇರಾನ್‌ನಲ್ಲಿ ಇದುವರೆಗೆ ಸುಮಾರು 2,500ರಿಂದ 3000 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿವೆ. ಈ ಕುರಿತು ಖಚಿತ ಮಾಹಿತಿಯನ್ನು ಇರಾನ್‌ ಹೊರ ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...