Homeಅಂತರಾಷ್ಟ್ರೀಯಇರಾನ್ | ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ ಮೇಲೆ ಸೈಬರ್ ದಾಳಿ!

ಇರಾನ್ | ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ ಮೇಲೆ ಸೈಬರ್ ದಾಳಿ!

- Advertisement -
- Advertisement -

ಇರಾನ್ ಮತ್ತು ಇಸ್ರೇಲ್ ನಡುವೆ ವಾಯು ಯುದ್ಧ ಹೆಚ್ಚುತ್ತಿರುವ ಮಧ್ಯೆ, ಇರಾನ್‌ನ ಪ್ರಮುಖ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಒಂದಾದ ”ಸೆಪಾ ಬ್ಯಾಂಕ್” ಮೇಲೆ ಮಂಗಳವಾರ ಸೈಬರ್ ದಾಳಿ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇರಾನ್‌ನ ಸೈನ್ಯ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನೊಂದಿಗೆ ಸಂಬಂಧ ಹೊಂದಿರುವ ಇರಾನ್‌ನ ಅತ್ಯಂತ ಹಳೆಯ ಹಣಕಾಸು ಸಂಸ್ಥೆಗಳಲ್ಲಿ ಇದು ಒಂದಾಗಿದೆ. ಇರಾನ್ | ಸರ್ಕಾರಿ

“ಸೆಪಾ ಬ್ಯಾಂಕಿನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಸೈಬರ್ ದಾಳಿ ನಡೆಸಲಾಗಿದ್ದು, ಸಂಸ್ಥೆಯ ಆನ್‌ಲೈನ್ ಸೇವೆಗಳಿಗೆ ಅಡ್ಡಿ ಉಂಟಾಗಿದೆ” ಎಂದು ಫಾರ್ಸ್ ಸುದ್ದಿ ಸಂಸ್ಥೆ ಹೇಳಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಸಮಸ್ಯೆ ಬಗೆಹರಿಯುವ ನಿರೀಕ್ಷೆಯಿದೆ ಎಂದು ಹೇಳಿದೆ.

ಹ್ಯಾಕರ್‌ಗಳ ಗುಂಪಾದ ಪ್ರಿಡೇಟರಿ ಸ್ಪ್ಯಾರೋ ಈ ಸೈಬರ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ತಾನು ಬ್ಯಾಂಕ್‌ನ ಎಲ್ಲಾ ಡೇಟಾವನ್ನು ನಾಶಪಡಿಸಿದ್ದೇನೆ ಎಂದು ಅದು ಹೇಳಿಕೊಂಡಿದೆ. ಇರಾನ್‌ನಲ್ಲಿ ವ್ಯಾಪಕ ಬ್ಯಾಂಕಿಂಗ್ ಅಡಚಣೆಗಳ ವರದಿಗಳ ನಡುವೆ ಈ ಹೇಳಿಕೆ ಹೊರಬಿದ್ದಿದೆ.

ಸೈಬರ್ ದಾಳಿಯ ಹಿನ್ನಲೆ ಮಂಗಳವಾರ ಹಲವಾರು ಸೆಪಾ ಬ್ಯಾಂಕ್‌ನ ಶಾಖೆಗಳನ್ನು ಮುಚ್ಚಲಾಯಿತು ಮತ್ತು ಗ್ರಾಹಕರು ತಮ್ಮ ಖಾತೆಗಳಿಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಹಕರು ಹೇಳಿದ್ದಾಗಿ ಇರಾನ್ ಇಂಟರ್‌ನ್ಯಾಷನಲ್‌ ವರದಿ ಮಾಡಿದೆ.

ಸೆಪಾ ಬ್ಯಾಂಕ್ ಇರಾನ್‌ನಲ್ಲಿ 1,800 ಶಾಖೆಗಳನ್ನು ಹೊಂದಿದ್ದು, ಜೊತೆಗೆ ಬ್ರಿಟನ್, ಫ್ರಾನ್ಸ್, ಜರ್ಮನಿ ಮತ್ತು ಇಟಲಿಯಲ್ಲಿ ಕೂಡಾ ಶಾಖೆಗಳನ್ನು ಹೊಂದಿದೆ. 2015ರ ವೇಳೆ ಇರಾನ್‌ ಪರಮಾಣು ಒಪ್ಪಂದದಿಂದ ಹಿಂದೆ ಸರಿದ ನಂತರ ಅಮೆರಿಕ 2019 ರಲ್ಲಿ ಸೆಪಾ ಬ್ಯಾಂಕ್ ಮೇಲೆ ನಿರ್ಬಂಧಗಳನ್ನು ವಿಧಿಸಿತ್ತು.

ಅದಾಗ್ಯೂ, ಇರಾನ್ ಅಧಿಕಾರಿಗಳು ಬ್ಯಾಂಕ್ ಸ್ಥಗಿತವಾಗಿರುವ ಬಗ್ಗೆ ಅಥವಾ ಸೈಬರ್ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದಾಗ್ಯೂ, ಸೆಪಾ ಬ್ಯಾಂಕಿನಲ್ಲಿನ ಸಮಸ್ಯೆಯನ್ನು ಕೆಲವೇ ಗಂಟೆಗಳಲ್ಲಿ ಪರಿಹರಿಸಲಾಗುವುದು ಎಂದು ಫಾರ್ಸ್ ನ್ಯೂಸ್ ಹೇಳಿದೆ.

ಈ ಹಿಂದೆ ಇರಾನಿನ ಉಕ್ಕಿನ ಸ್ಥಾವರಗಳು ಮತ್ತು ಇಂಧನ ಕೇಂದ್ರಗಳ ವಿರುದ್ಧ ನಡೆದ ಸೈಬರ್ ಕಾರ್ಯಾಚರಣೆಗಳ ಹೊಣೆಯನ್ನು ಹೊತ್ತುಕೊಂಡಿದ್ದ ಪ್ರಿಡೇಟರಿ ಸ್ಪ್ಯಾರೋ, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸೆಪಾ ಬ್ಯಾಂಕ್ ಮಿಲಿಟರಿ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸಲು ಮತ್ತು ಅಂತರರಾಷ್ಟ್ರೀಯ ನಿರ್ಬಂಧಗಳನ್ನು ತಪ್ಪಿಸಲು ಬಳಸಲಾಗಿದೆ ಎಂದು ಹೇಳಿದೆ. ಇರಾನ್ | ಸರ್ಕಾರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...