Homeಅಂತರಾಷ್ಟ್ರೀಯಇರಾನ್ | ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ ಮೇಲೆ ಸೈಬರ್ ದಾಳಿ!

ಇರಾನ್ | ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ ಮೇಲೆ ಸೈಬರ್ ದಾಳಿ!

- Advertisement -
- Advertisement -

ಇರಾನ್ ಮತ್ತು ಇಸ್ರೇಲ್ ನಡುವೆ ವಾಯು ಯುದ್ಧ ಹೆಚ್ಚುತ್ತಿರುವ ಮಧ್ಯೆ, ಇರಾನ್‌ನ ಪ್ರಮುಖ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಒಂದಾದ ”ಸೆಪಾ ಬ್ಯಾಂಕ್” ಮೇಲೆ ಮಂಗಳವಾರ ಸೈಬರ್ ದಾಳಿ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇರಾನ್‌ನ ಸೈನ್ಯ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನೊಂದಿಗೆ ಸಂಬಂಧ ಹೊಂದಿರುವ ಇರಾನ್‌ನ ಅತ್ಯಂತ ಹಳೆಯ ಹಣಕಾಸು ಸಂಸ್ಥೆಗಳಲ್ಲಿ ಇದು ಒಂದಾಗಿದೆ. ಇರಾನ್ | ಸರ್ಕಾರಿ

“ಸೆಪಾ ಬ್ಯಾಂಕಿನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಸೈಬರ್ ದಾಳಿ ನಡೆಸಲಾಗಿದ್ದು, ಸಂಸ್ಥೆಯ ಆನ್‌ಲೈನ್ ಸೇವೆಗಳಿಗೆ ಅಡ್ಡಿ ಉಂಟಾಗಿದೆ” ಎಂದು ಫಾರ್ಸ್ ಸುದ್ದಿ ಸಂಸ್ಥೆ ಹೇಳಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಸಮಸ್ಯೆ ಬಗೆಹರಿಯುವ ನಿರೀಕ್ಷೆಯಿದೆ ಎಂದು ಹೇಳಿದೆ.

ಹ್ಯಾಕರ್‌ಗಳ ಗುಂಪಾದ ಪ್ರಿಡೇಟರಿ ಸ್ಪ್ಯಾರೋ ಈ ಸೈಬರ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ತಾನು ಬ್ಯಾಂಕ್‌ನ ಎಲ್ಲಾ ಡೇಟಾವನ್ನು ನಾಶಪಡಿಸಿದ್ದೇನೆ ಎಂದು ಅದು ಹೇಳಿಕೊಂಡಿದೆ. ಇರಾನ್‌ನಲ್ಲಿ ವ್ಯಾಪಕ ಬ್ಯಾಂಕಿಂಗ್ ಅಡಚಣೆಗಳ ವರದಿಗಳ ನಡುವೆ ಈ ಹೇಳಿಕೆ ಹೊರಬಿದ್ದಿದೆ.

ಸೈಬರ್ ದಾಳಿಯ ಹಿನ್ನಲೆ ಮಂಗಳವಾರ ಹಲವಾರು ಸೆಪಾ ಬ್ಯಾಂಕ್‌ನ ಶಾಖೆಗಳನ್ನು ಮುಚ್ಚಲಾಯಿತು ಮತ್ತು ಗ್ರಾಹಕರು ತಮ್ಮ ಖಾತೆಗಳಿಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಹಕರು ಹೇಳಿದ್ದಾಗಿ ಇರಾನ್ ಇಂಟರ್‌ನ್ಯಾಷನಲ್‌ ವರದಿ ಮಾಡಿದೆ.

ಸೆಪಾ ಬ್ಯಾಂಕ್ ಇರಾನ್‌ನಲ್ಲಿ 1,800 ಶಾಖೆಗಳನ್ನು ಹೊಂದಿದ್ದು, ಜೊತೆಗೆ ಬ್ರಿಟನ್, ಫ್ರಾನ್ಸ್, ಜರ್ಮನಿ ಮತ್ತು ಇಟಲಿಯಲ್ಲಿ ಕೂಡಾ ಶಾಖೆಗಳನ್ನು ಹೊಂದಿದೆ. 2015ರ ವೇಳೆ ಇರಾನ್‌ ಪರಮಾಣು ಒಪ್ಪಂದದಿಂದ ಹಿಂದೆ ಸರಿದ ನಂತರ ಅಮೆರಿಕ 2019 ರಲ್ಲಿ ಸೆಪಾ ಬ್ಯಾಂಕ್ ಮೇಲೆ ನಿರ್ಬಂಧಗಳನ್ನು ವಿಧಿಸಿತ್ತು.

ಅದಾಗ್ಯೂ, ಇರಾನ್ ಅಧಿಕಾರಿಗಳು ಬ್ಯಾಂಕ್ ಸ್ಥಗಿತವಾಗಿರುವ ಬಗ್ಗೆ ಅಥವಾ ಸೈಬರ್ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದಾಗ್ಯೂ, ಸೆಪಾ ಬ್ಯಾಂಕಿನಲ್ಲಿನ ಸಮಸ್ಯೆಯನ್ನು ಕೆಲವೇ ಗಂಟೆಗಳಲ್ಲಿ ಪರಿಹರಿಸಲಾಗುವುದು ಎಂದು ಫಾರ್ಸ್ ನ್ಯೂಸ್ ಹೇಳಿದೆ.

ಈ ಹಿಂದೆ ಇರಾನಿನ ಉಕ್ಕಿನ ಸ್ಥಾವರಗಳು ಮತ್ತು ಇಂಧನ ಕೇಂದ್ರಗಳ ವಿರುದ್ಧ ನಡೆದ ಸೈಬರ್ ಕಾರ್ಯಾಚರಣೆಗಳ ಹೊಣೆಯನ್ನು ಹೊತ್ತುಕೊಂಡಿದ್ದ ಪ್ರಿಡೇಟರಿ ಸ್ಪ್ಯಾರೋ, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸೆಪಾ ಬ್ಯಾಂಕ್ ಮಿಲಿಟರಿ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸಲು ಮತ್ತು ಅಂತರರಾಷ್ಟ್ರೀಯ ನಿರ್ಬಂಧಗಳನ್ನು ತಪ್ಪಿಸಲು ಬಳಸಲಾಗಿದೆ ಎಂದು ಹೇಳಿದೆ. ಇರಾನ್ | ಸರ್ಕಾರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...