Homeಅಂತರಾಷ್ಟ್ರೀಯಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

- Advertisement -
- Advertisement -

ಪೊಲೀಸ್‌‌ ಕಸ್ಟಡಿಯಲ್ಲಿದ್ದ ಯುವತಿಯ ಸಾವಿನಿಂದ ಆರಂಭವಾದ ಪ್ರತಿಭಟನೆಗಳು ಇರಾನ್‌ನಲ್ಲಿ ತೀವ್ರ ಸ್ವರೂಪ ಪಡೆದಿವೆ. ಅಧಿಕಾರಿಗಳ ಶಿಸ್ತುಕ್ರಮವನ್ನು ಧಿಕ್ಕರಿಸಿ ಭಾನುವಾರ ಇರಾನ್‌ನಾದ್ಯಂತ ಪ್ರತಿಭಟನೆಗಳು ನಡೆದಿವೆ. ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ಮಾಡಿದೆ.

ಸೆಪ್ಟೆಂಬರ್ 17ರಂದು ಕುರ್ದಿಶ್ ಪಟ್ಟಣವಾದ ಸಾಕೆಜ್‌ನಲ್ಲಿ 22 ವರ್ಷದ ಮಹ್ಸಾ ಅಮಿನಿಯ ಅಂತ್ಯಕ್ರಿಯೆಯ ನಂತರ ವಿವಾದ ಭುಗಿಲೆದ್ದಿದೆ. ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಕೊನೆಯುಸಿರೆಳೆದಿದ್ದಳು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ದಾಳಿ ಮಾಡಲಾಗಿತ್ತು. ಅಂದಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ.

“ಇರಾನ್‌ನಾದ್ಯಂತ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಕನಿಷ್ಠ 19 ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಸಾವನ್ನಪ್ಪಿದ್ದಾರೆ. ಈಗ ವರದಿಯಾಗಿರುವ ಸಾವುಗಳಲ್ಲಿ ಅರ್ಧದಷ್ಟು ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿವೆ” ಎಂದು ನಾರ್ವೆ ಮೂಲದ ಇರಾನ್ ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿದ್ದಾರೆ.

“ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಇರಾನ್‌ ವೈರಿಗಳ ಸಂಚಿನ ಭಾಗವಾಗಿ ಪ್ರತಿಭಟನೆಗಳು ನಡೆಯುತ್ತಿವೆ” ಎಂದು ಅಧಿಕಾರಿಗಳು ವಾದಿಸಿದ್ದಾರೆ. ಹಿಂಸಾಚಾರದಲ್ಲಿ ಶಸ್ತ್ರಸಜ್ಜಿತ ಭಿನ್ನಮತೀಯರೂ ಇದ್ದಾರೆಂದು ಆರೋಪಿಸಲಾಗಿದೆ. ಭದ್ರತಾ ಪಡೆಗಳ ಕನಿಷ್ಠ 20 ಸದಸ್ಯರೂ ಸಾವಿಗೀಡಾಗಿದ್ದಾರೆಂದು ಹೇಳಲಾಗುತ್ತಿದೆ.

ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಮದ್ದುಗುಂಡುಗಳನ್ನು ಬಳಸಿವೆ. ಇದರ ನಡುವೆ ನೂರಾರು ಹೈಸ್ಕೂಲ್ ಹುಡುಗಿಯರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರ ಮುಂಜಾನೆ ಇರಾನ್‌ನ ಹಲವು ನಗರಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದರು. ಹೋರಾಟ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸಜೀವ ಗುಂಡುಗಳನ್ನು ಬಳಸಲಾಗಿದೆ ಎಂಬ ಆರೋಪವನ್ನು ಇರಾನ್ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನನ್ನ ಹೆಂಡತಿಗೆ ಹೊಡೆಯಬೇಡ, ಆಕೆ ಗರ್ಭಿಣಿ’

ಸಾಮಾಜಿಕ ಕಾರ್ಯಕರ್ತ ತಸ್ವಿರ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳು ಪ್ರತಿಭಟನೆಯ ತೀವ್ರತೆಯನ್ನು ತೆರೆದಿಟ್ಟಿದೆ. ಟೆಹ್ರಾನ್‌ನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಸ್ತ್ರಸಜ್ಜಿತವಾದ ಭದ್ರತಾ ಪಡೆಗಳು ದಾಳಿ ಮಾಡುವುದನ್ನು ಒಂದು ವಿಡಿಯೊ ತೋರಿಸಿದೆ.

ಮತ್ತೊಂದು ವೀಡಿಯೊದಲ್ಲಿ ವ್ಯಕ್ತಿಯೊಬ್ಬರು, “ನನ್ನ ಹೆಂಡತಿಯನ್ನು ಹೊಡೆಯಬೇಡಿ, ಆಕೆ ಗರ್ಭಿಣಿ” ಎಂದು ಪೊಲೀಸರಿಗೆ ಮನವಿ ಮಾಡುತ್ತಿರುವುದು ದಾಖಲಾಗಿದೆ.

ಇದನ್ನೂ ಓದಿರಿ: ಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

150,000ಕ್ಕೂ ಹೆಚ್ಚು ಫಾಲೋಯರ್ಸ್‌ಗಳನ್ನು ಹೊಂದಿರುವ ಟ್ವಿಟರ್ ಖಾತೆ ಮಾಮ್ಲೆಕೇಟ್‌ನಲ್ಲಿ ಹಂಚಿಕೊಂಡ ವೀಡಿಯೊವೊಂದರಲ್ಲಿ ಹುಡುಗಿಯರ ಪರಿಸ್ಥಿತಿಯನ್ನು ತೋರಿಸಲಾಗಿದೆ. ಬಂದರ್ ಅಬ್ಬಾಸ್ ನಗರದಲ್ಲಿ ಭದ್ರತಾ ಪಡೆಗಳು ಶಾಲಾ ಹುಡುಗಿಯರನ್ನು ಬೆನ್ನಟ್ಟುತ್ತಿರುವುದು ಸೆರೆಯಾಗಿದೆ. ಹೋರಾಟಗಾರರು ಸಾಮೂಹಿಕ ಮುಷ್ಕರಕ್ಕೆ ಕರೆ ನೀಡಿದ ನಂತರ ಹಲವಾರು ನಗರಗಳಲ್ಲಿ ಅಂಗಡಿಗಳನ್ನು ಮುಚ್ಚಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಪೋಸ್ಟ್‌ಗಳು ತಿಳಿಸಿವೆ.

ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ರಾಯಿಟರ್ಸ್ ತಿಳಿಸಿದೆ. ಅಧಿಕಾರಿಗಳು ವಿಧಿಸಿದ ಇಂಟರ್ನೆಟ್ ನಿರ್ಬಂಧಗಳ ಕಾರಣದಿಂದಾಗಿ ಸಾವುನೋವುಗಳ ವಿವರಗಳು ನಿಧಾನವಾಗಿ ಹೊರಬರುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...