Homeಅಂತರಾಷ್ಟ್ರೀಯಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

- Advertisement -
- Advertisement -

ಪೊಲೀಸ್‌‌ ಕಸ್ಟಡಿಯಲ್ಲಿದ್ದ ಯುವತಿಯ ಸಾವಿನಿಂದ ಆರಂಭವಾದ ಪ್ರತಿಭಟನೆಗಳು ಇರಾನ್‌ನಲ್ಲಿ ತೀವ್ರ ಸ್ವರೂಪ ಪಡೆದಿವೆ. ಅಧಿಕಾರಿಗಳ ಶಿಸ್ತುಕ್ರಮವನ್ನು ಧಿಕ್ಕರಿಸಿ ಭಾನುವಾರ ಇರಾನ್‌ನಾದ್ಯಂತ ಪ್ರತಿಭಟನೆಗಳು ನಡೆದಿವೆ. ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ಮಾಡಿದೆ.

ಸೆಪ್ಟೆಂಬರ್ 17ರಂದು ಕುರ್ದಿಶ್ ಪಟ್ಟಣವಾದ ಸಾಕೆಜ್‌ನಲ್ಲಿ 22 ವರ್ಷದ ಮಹ್ಸಾ ಅಮಿನಿಯ ಅಂತ್ಯಕ್ರಿಯೆಯ ನಂತರ ವಿವಾದ ಭುಗಿಲೆದ್ದಿದೆ. ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಕೊನೆಯುಸಿರೆಳೆದಿದ್ದಳು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ದಾಳಿ ಮಾಡಲಾಗಿತ್ತು. ಅಂದಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ.

“ಇರಾನ್‌ನಾದ್ಯಂತ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಕನಿಷ್ಠ 19 ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಸಾವನ್ನಪ್ಪಿದ್ದಾರೆ. ಈಗ ವರದಿಯಾಗಿರುವ ಸಾವುಗಳಲ್ಲಿ ಅರ್ಧದಷ್ಟು ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿವೆ” ಎಂದು ನಾರ್ವೆ ಮೂಲದ ಇರಾನ್ ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿದ್ದಾರೆ.

“ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಇರಾನ್‌ ವೈರಿಗಳ ಸಂಚಿನ ಭಾಗವಾಗಿ ಪ್ರತಿಭಟನೆಗಳು ನಡೆಯುತ್ತಿವೆ” ಎಂದು ಅಧಿಕಾರಿಗಳು ವಾದಿಸಿದ್ದಾರೆ. ಹಿಂಸಾಚಾರದಲ್ಲಿ ಶಸ್ತ್ರಸಜ್ಜಿತ ಭಿನ್ನಮತೀಯರೂ ಇದ್ದಾರೆಂದು ಆರೋಪಿಸಲಾಗಿದೆ. ಭದ್ರತಾ ಪಡೆಗಳ ಕನಿಷ್ಠ 20 ಸದಸ್ಯರೂ ಸಾವಿಗೀಡಾಗಿದ್ದಾರೆಂದು ಹೇಳಲಾಗುತ್ತಿದೆ.

ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಮದ್ದುಗುಂಡುಗಳನ್ನು ಬಳಸಿವೆ. ಇದರ ನಡುವೆ ನೂರಾರು ಹೈಸ್ಕೂಲ್ ಹುಡುಗಿಯರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರ ಮುಂಜಾನೆ ಇರಾನ್‌ನ ಹಲವು ನಗರಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದರು. ಹೋರಾಟ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸಜೀವ ಗುಂಡುಗಳನ್ನು ಬಳಸಲಾಗಿದೆ ಎಂಬ ಆರೋಪವನ್ನು ಇರಾನ್ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನನ್ನ ಹೆಂಡತಿಗೆ ಹೊಡೆಯಬೇಡ, ಆಕೆ ಗರ್ಭಿಣಿ’

ಸಾಮಾಜಿಕ ಕಾರ್ಯಕರ್ತ ತಸ್ವಿರ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳು ಪ್ರತಿಭಟನೆಯ ತೀವ್ರತೆಯನ್ನು ತೆರೆದಿಟ್ಟಿದೆ. ಟೆಹ್ರಾನ್‌ನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಸ್ತ್ರಸಜ್ಜಿತವಾದ ಭದ್ರತಾ ಪಡೆಗಳು ದಾಳಿ ಮಾಡುವುದನ್ನು ಒಂದು ವಿಡಿಯೊ ತೋರಿಸಿದೆ.

ಮತ್ತೊಂದು ವೀಡಿಯೊದಲ್ಲಿ ವ್ಯಕ್ತಿಯೊಬ್ಬರು, “ನನ್ನ ಹೆಂಡತಿಯನ್ನು ಹೊಡೆಯಬೇಡಿ, ಆಕೆ ಗರ್ಭಿಣಿ” ಎಂದು ಪೊಲೀಸರಿಗೆ ಮನವಿ ಮಾಡುತ್ತಿರುವುದು ದಾಖಲಾಗಿದೆ.

ಇದನ್ನೂ ಓದಿರಿ: ಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

150,000ಕ್ಕೂ ಹೆಚ್ಚು ಫಾಲೋಯರ್ಸ್‌ಗಳನ್ನು ಹೊಂದಿರುವ ಟ್ವಿಟರ್ ಖಾತೆ ಮಾಮ್ಲೆಕೇಟ್‌ನಲ್ಲಿ ಹಂಚಿಕೊಂಡ ವೀಡಿಯೊವೊಂದರಲ್ಲಿ ಹುಡುಗಿಯರ ಪರಿಸ್ಥಿತಿಯನ್ನು ತೋರಿಸಲಾಗಿದೆ. ಬಂದರ್ ಅಬ್ಬಾಸ್ ನಗರದಲ್ಲಿ ಭದ್ರತಾ ಪಡೆಗಳು ಶಾಲಾ ಹುಡುಗಿಯರನ್ನು ಬೆನ್ನಟ್ಟುತ್ತಿರುವುದು ಸೆರೆಯಾಗಿದೆ. ಹೋರಾಟಗಾರರು ಸಾಮೂಹಿಕ ಮುಷ್ಕರಕ್ಕೆ ಕರೆ ನೀಡಿದ ನಂತರ ಹಲವಾರು ನಗರಗಳಲ್ಲಿ ಅಂಗಡಿಗಳನ್ನು ಮುಚ್ಚಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಪೋಸ್ಟ್‌ಗಳು ತಿಳಿಸಿವೆ.

ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ರಾಯಿಟರ್ಸ್ ತಿಳಿಸಿದೆ. ಅಧಿಕಾರಿಗಳು ವಿಧಿಸಿದ ಇಂಟರ್ನೆಟ್ ನಿರ್ಬಂಧಗಳ ಕಾರಣದಿಂದಾಗಿ ಸಾವುನೋವುಗಳ ವಿವರಗಳು ನಿಧಾನವಾಗಿ ಹೊರಬರುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....