Homeಅಂತರಾಷ್ಟ್ರೀಯಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

- Advertisement -
- Advertisement -

ಪೊಲೀಸ್‌‌ ಕಸ್ಟಡಿಯಲ್ಲಿದ್ದ ಯುವತಿಯ ಸಾವಿನಿಂದ ಆರಂಭವಾದ ಪ್ರತಿಭಟನೆಗಳು ಇರಾನ್‌ನಲ್ಲಿ ತೀವ್ರ ಸ್ವರೂಪ ಪಡೆದಿವೆ. ಅಧಿಕಾರಿಗಳ ಶಿಸ್ತುಕ್ರಮವನ್ನು ಧಿಕ್ಕರಿಸಿ ಭಾನುವಾರ ಇರಾನ್‌ನಾದ್ಯಂತ ಪ್ರತಿಭಟನೆಗಳು ನಡೆದಿವೆ. ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ಮಾಡಿದೆ.

ಸೆಪ್ಟೆಂಬರ್ 17ರಂದು ಕುರ್ದಿಶ್ ಪಟ್ಟಣವಾದ ಸಾಕೆಜ್‌ನಲ್ಲಿ 22 ವರ್ಷದ ಮಹ್ಸಾ ಅಮಿನಿಯ ಅಂತ್ಯಕ್ರಿಯೆಯ ನಂತರ ವಿವಾದ ಭುಗಿಲೆದ್ದಿದೆ. ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಕೊನೆಯುಸಿರೆಳೆದಿದ್ದಳು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ದಾಳಿ ಮಾಡಲಾಗಿತ್ತು. ಅಂದಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ.

“ಇರಾನ್‌ನಾದ್ಯಂತ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಕನಿಷ್ಠ 19 ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಸಾವನ್ನಪ್ಪಿದ್ದಾರೆ. ಈಗ ವರದಿಯಾಗಿರುವ ಸಾವುಗಳಲ್ಲಿ ಅರ್ಧದಷ್ಟು ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿವೆ” ಎಂದು ನಾರ್ವೆ ಮೂಲದ ಇರಾನ್ ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿದ್ದಾರೆ.

“ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಇರಾನ್‌ ವೈರಿಗಳ ಸಂಚಿನ ಭಾಗವಾಗಿ ಪ್ರತಿಭಟನೆಗಳು ನಡೆಯುತ್ತಿವೆ” ಎಂದು ಅಧಿಕಾರಿಗಳು ವಾದಿಸಿದ್ದಾರೆ. ಹಿಂಸಾಚಾರದಲ್ಲಿ ಶಸ್ತ್ರಸಜ್ಜಿತ ಭಿನ್ನಮತೀಯರೂ ಇದ್ದಾರೆಂದು ಆರೋಪಿಸಲಾಗಿದೆ. ಭದ್ರತಾ ಪಡೆಗಳ ಕನಿಷ್ಠ 20 ಸದಸ್ಯರೂ ಸಾವಿಗೀಡಾಗಿದ್ದಾರೆಂದು ಹೇಳಲಾಗುತ್ತಿದೆ.

ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಮದ್ದುಗುಂಡುಗಳನ್ನು ಬಳಸಿವೆ. ಇದರ ನಡುವೆ ನೂರಾರು ಹೈಸ್ಕೂಲ್ ಹುಡುಗಿಯರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರ ಮುಂಜಾನೆ ಇರಾನ್‌ನ ಹಲವು ನಗರಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದರು. ಹೋರಾಟ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸಜೀವ ಗುಂಡುಗಳನ್ನು ಬಳಸಲಾಗಿದೆ ಎಂಬ ಆರೋಪವನ್ನು ಇರಾನ್ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನನ್ನ ಹೆಂಡತಿಗೆ ಹೊಡೆಯಬೇಡ, ಆಕೆ ಗರ್ಭಿಣಿ’

ಸಾಮಾಜಿಕ ಕಾರ್ಯಕರ್ತ ತಸ್ವಿರ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳು ಪ್ರತಿಭಟನೆಯ ತೀವ್ರತೆಯನ್ನು ತೆರೆದಿಟ್ಟಿದೆ. ಟೆಹ್ರಾನ್‌ನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಸ್ತ್ರಸಜ್ಜಿತವಾದ ಭದ್ರತಾ ಪಡೆಗಳು ದಾಳಿ ಮಾಡುವುದನ್ನು ಒಂದು ವಿಡಿಯೊ ತೋರಿಸಿದೆ.

ಮತ್ತೊಂದು ವೀಡಿಯೊದಲ್ಲಿ ವ್ಯಕ್ತಿಯೊಬ್ಬರು, “ನನ್ನ ಹೆಂಡತಿಯನ್ನು ಹೊಡೆಯಬೇಡಿ, ಆಕೆ ಗರ್ಭಿಣಿ” ಎಂದು ಪೊಲೀಸರಿಗೆ ಮನವಿ ಮಾಡುತ್ತಿರುವುದು ದಾಖಲಾಗಿದೆ.

ಇದನ್ನೂ ಓದಿರಿ: ಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

150,000ಕ್ಕೂ ಹೆಚ್ಚು ಫಾಲೋಯರ್ಸ್‌ಗಳನ್ನು ಹೊಂದಿರುವ ಟ್ವಿಟರ್ ಖಾತೆ ಮಾಮ್ಲೆಕೇಟ್‌ನಲ್ಲಿ ಹಂಚಿಕೊಂಡ ವೀಡಿಯೊವೊಂದರಲ್ಲಿ ಹುಡುಗಿಯರ ಪರಿಸ್ಥಿತಿಯನ್ನು ತೋರಿಸಲಾಗಿದೆ. ಬಂದರ್ ಅಬ್ಬಾಸ್ ನಗರದಲ್ಲಿ ಭದ್ರತಾ ಪಡೆಗಳು ಶಾಲಾ ಹುಡುಗಿಯರನ್ನು ಬೆನ್ನಟ್ಟುತ್ತಿರುವುದು ಸೆರೆಯಾಗಿದೆ. ಹೋರಾಟಗಾರರು ಸಾಮೂಹಿಕ ಮುಷ್ಕರಕ್ಕೆ ಕರೆ ನೀಡಿದ ನಂತರ ಹಲವಾರು ನಗರಗಳಲ್ಲಿ ಅಂಗಡಿಗಳನ್ನು ಮುಚ್ಚಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಪೋಸ್ಟ್‌ಗಳು ತಿಳಿಸಿವೆ.

ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ರಾಯಿಟರ್ಸ್ ತಿಳಿಸಿದೆ. ಅಧಿಕಾರಿಗಳು ವಿಧಿಸಿದ ಇಂಟರ್ನೆಟ್ ನಿರ್ಬಂಧಗಳ ಕಾರಣದಿಂದಾಗಿ ಸಾವುನೋವುಗಳ ವಿವರಗಳು ನಿಧಾನವಾಗಿ ಹೊರಬರುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...