Homeಅಂತರಾಷ್ಟ್ರೀಯಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

- Advertisement -
- Advertisement -

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲ್ ಭಾನುವಾರ ಬೈರುತ್‌ನ ದಕ್ಷಿಣ ಉಪನಗರಗಳ ಮೇಲೆ ದಾಳಿ ಮಾಡಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ, 20 ಜನರು ಗಾಯಗೊಂಡರು.

ಬೈರುತ್ ಮೇಲಿನ ದಾಳಿಯ ನಂತರ ಇರಾನ್ ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ. ಇಸ್ರೇಲ್ ಕದನ ವಿರಾಮ ಒಪ್ಪಂದಗಳನ್ನು ಪದೇ ಪದೇ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿತ್ತು.

ಎರಡು ತಿಂಗಳ ಹಿಂದೆ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮತ್ತು ಇಸ್ರೇಲ್ ಪರಸ್ಪರ ಪ್ರದೇಶದ ಮೇಲೆ ದಾಳಿ ನಡೆಸುತ್ತಿರುವುದು ಇದೇ ಮೊದಲು.

ಇರಾನ್‌ನಿಂದ ನಡೆದ ಹೊಸ ಕ್ಷಿಪಣಿ ದಾಳಿಯನ್ನು ಪತ್ತೆಹಚ್ಚಿದ್ದೇವೆ ಎಂದು ಇಸ್ರೇಲ್ ಸೇನೆ ಸೋಮವಾರ ಹೇಳಿದೆ. ಇದು ಹೋರಾಟ ಪ್ರಾರಂಭವಾದ ನಂತರದ ಆರನೇ ದಾಳಿಯಾಗಿದೆ.

“ಸ್ವಲ್ಪ ಸಮಯದ ಹಿಂದೆ, ಇರಾನ್‌ನಿಂದ ಇಸ್ರೇಲ್ ಕಡೆಗೆ ಹಾರಿಸಲಾದ ಕ್ಷಿಪಣಿಗಳನ್ನು ಐಡಿಎಫ್ ಗುರುತಿಸಿದೆ. ಬೆದರಿಕೆಯನ್ನು ತಡೆಯಲು ರಕ್ಷಣಾತ್ಮಕ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಮಿಲಿಟರಿ ಹೇಳಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚಿನ ಕದನ ವಿರಾಮ ಉಲ್ಲಂಘನೆಗಳಿಗೆ ಅಮೆರಿಕ ನೇರ ಹೊಣೆಗಾರಿಕೆಯನ್ನು ಹೊಂದಿದೆ ಎಂದು ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಹೇಳಿದ್ದಾರೆ. ಇಸ್ರೇಲ್‌ನ ಮಿಲಿಟರಿ ಕ್ರಮಗಳನ್ನು ಅಮೆರಿಕದ ನೀತಿಗಳಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

“ಈ ಪ್ರದೇಶದೊಳಗಿನ ಝಿಯೋನಿಸ್ಟ್ ಘಟಕದ ಕ್ರಮಗಳನ್ನು ಅಮೆರಿಕದಿಂದ ಪ್ರತ್ಯೇಕವಾಗಿ ನೋಡಲಾಗುವುದಿಲ್ಲ” ಎಂದು ಬಘೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

“ಇಸ್ರೇಲ್ ಆಡಳಿತವು ಅಮೆರಿಕದೊಂದಿಗೆ ಸಮನ್ವಯವಿಲ್ಲದೆ ಯಾವುದೇ ಕ್ರಮ ತೆಗೆದುಕೊಳ್ಳುತ್ತದೆ ಎಂದು ಯಾರೂ ನಂಬುವುದಿಲ್ಲ. ಇಸ್ರೇಲ್ ಆಡಳಿತದ ಆಕ್ರಮಣಕ್ಕೆ ಅಮೆರಿಕ ಜವಾಬ್ದಾರವಾಗಿದೆ, ಯಾವುದೇ ಉದ್ವಿಗ್ನತೆಯ ಉಲ್ಬಣದ ಪರಿಣಾಮಗಳಿಗೆ ಅದು ಸಹ ಜವಾಬ್ದಾರವಾಗಿರುತ್ತದೆ” ಎಂದು ಹೇಳಿದ್ದಾರೆ.

ಇಷ್ಟೆಲ್ಲಾ ಬೆಳವಣಿಗೆಗಳ ನಡುವೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಯಮದಿಂದ ವರ್ತಿಸದುವಂತೆ ಕೋರಿದ್ದಾರೆ ಎಂದು ವರದಿಯಾಗಿದೆ.

ಉದ್ವಿಗ್ನ ಸ್ಥಿತಿಯಲ್ಲಿ ಅಮೆರಿಕ-ಇಸ್ರೇಲ್ ಸಂಬಂಧ

ಇತ್ತೀಚಿನ ಘಟನೆಗಳು ಇರಾನ್ ದಾಳಿಗಳಿಗೆ ಪ್ರತಿಕ್ರಿಯಿಸದಂತೆ ಟ್ರಂಪ್ ಅವರ ಕರೆಯನ್ನು ನೆತನ್ಯಾಹು ನಿರ್ಲಕ್ಷಿಸಿದ ನಂತರ ಉದ್ವಿಗ್ನ ಸ್ಥಿತಿಯಲ್ಲಿರುವ ಅಮೆರಿಕ-ಇಸ್ರೇಲ್ ಸಂಬಂಧಗಳ ಮೇಲೆ ಶಾಶ್ವತ ಪರಿಣಾಮ ಬೀರುತ್ತವೆ ಎಂದು ಇಸ್ರೇಲ್ ವಿಶ್ಲೇಷಕ ಮತ್ತು ನಿರೂಪಕ ಒರಿ ಗೋಲ್ಡ್‌ಬರ್ಗ್ ಹೇಳುತ್ತಾರೆ.

ಲೆಬನಾನ್ ರಾಜಧಾನಿ ಬೈರುತ್‌ನಲ್ಲಿ ಹೆಚ್ಚಿನ ವಾಯುದಾಳಿಗಳ ಯೋಜನೆಗಳ ಕುರಿತು ಟ್ರಂಪ್ ಇಸ್ರೇಲ್ ನಾಯಕನೊಂದಿಗೆ ನಡೆಸಿದ ಫೋನ್ ಕರೆ ಮಾತುಕತೆಗಳ ಕೆಲವು ದಿನಗಳ ನಂತರ ಅವರ ವಿನಂತಿ ಬಂದಿದೆ ಎಂಬುದನ್ನು ಅವರು ಗಮನಿಸಿದ್ದಾರೆ. ಈ ಕರೆಯನ್ನು ಆರಂಭದಲ್ಲಿ ಮಾಧ್ಯಮಗಳಿಗೆ ಸೋರಿಕೆ ಮಾಡಲಾಯಿತು, ಮೊದಲು ಅಮೆರಿಕ ಅಧ್ಯಕ್ಷರು ಅದನ್ನು ದೃಢಪಡಿಸಿದರು.

“ಜೋ ಬಿಡೆನ್ ಅಧ್ಯಕ್ಷರಾಗಿದ್ದಾಗ ನೆತನ್ಯಾಹು ತಪ್ಪಿಸಿಕೊಳ್ಳಬಹುದಾದ ವಿಷಯಗಳು ಟ್ರಂಪ್ ಅಧ್ಯಕ್ಷತೆಯಲ್ಲಿ ಅವರು ತಪ್ಪಿಸಿಕೊಳ್ಳಬಹುದಾದ ವಿಷಯಗಳಲ್ಲ” ಎಂದು ಗೋಲ್ಡ್‌ಬರ್ಗ್ ತಿಳಿಸಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ವಿಶೇಷವಾಗಿ ಅಮೆರಿಕದ ಬೆಂಬಲವಿಲ್ಲದೆ, ಇಸ್ರೇಲ್ ಸಂಪೂರ್ಣ ಯುದ್ಧವನ್ನು ಪುನರಾರಂಭಿಸುವಷ್ಟು ಪ್ರಬಲವಾಗಿದೆ ಎಂದು ಅವರು ನಂಬುವುದಿಲ್ಲ ಎಂದು ಗೋಲ್ಡ್‌ಬರ್ಗ್ ಹೇಳಿದರು.

“ಇಸ್ರೇಲ್ ರಾಜಕೀಯವಾಗಿ ತುಂಬಾ ದುರ್ಬಲವಾಗಿದೆ, ಅಂತರರಾಷ್ಟ್ರೀಯವಾಗಿ ಮತ್ತು ದೇಶೀಯವಾಗಿ ತನ್ನದೇ ಬಲದ ಮೇಲೆ ಬೃಹತ್ ದಾಳಿ ನಡೆಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...