Homeಅಂತರಾಷ್ಟ್ರೀಯಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

- Advertisement -
- Advertisement -

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲ್ ಭಾನುವಾರ ಬೈರುತ್‌ನ ದಕ್ಷಿಣ ಉಪನಗರಗಳ ಮೇಲೆ ದಾಳಿ ಮಾಡಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಈ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ, 20 ಜನರು ಗಾಯಗೊಂಡರು.

ಬೈರುತ್ ಮೇಲಿನ ದಾಳಿಯ ನಂತರ ಇರಾನ್ ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ. ಇಸ್ರೇಲ್ ಕದನ ವಿರಾಮ ಒಪ್ಪಂದಗಳನ್ನು ಪದೇ ಪದೇ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿತ್ತು.

ಎರಡು ತಿಂಗಳ ಹಿಂದೆ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮತ್ತು ಇಸ್ರೇಲ್ ಪರಸ್ಪರ ಪ್ರದೇಶದ ಮೇಲೆ ದಾಳಿ ನಡೆಸುತ್ತಿರುವುದು ಇದೇ ಮೊದಲು.

ಇರಾನ್‌ನಿಂದ ನಡೆದ ಹೊಸ ಕ್ಷಿಪಣಿ ದಾಳಿಯನ್ನು ಪತ್ತೆಹಚ್ಚಿದ್ದೇವೆ ಎಂದು ಇಸ್ರೇಲ್ ಸೇನೆ ಸೋಮವಾರ ಹೇಳಿದೆ. ಇದು ಹೋರಾಟ ಪ್ರಾರಂಭವಾದ ನಂತರದ ಆರನೇ ದಾಳಿಯಾಗಿದೆ.

“ಸ್ವಲ್ಪ ಸಮಯದ ಹಿಂದೆ, ಇರಾನ್‌ನಿಂದ ಇಸ್ರೇಲ್ ಕಡೆಗೆ ಹಾರಿಸಲಾದ ಕ್ಷಿಪಣಿಗಳನ್ನು ಐಡಿಎಫ್ ಗುರುತಿಸಿದೆ. ಬೆದರಿಕೆಯನ್ನು ತಡೆಯಲು ರಕ್ಷಣಾತ್ಮಕ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಮಿಲಿಟರಿ ಹೇಳಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚಿನ ಕದನ ವಿರಾಮ ಉಲ್ಲಂಘನೆಗಳಿಗೆ ಅಮೆರಿಕ ನೇರ ಹೊಣೆಗಾರಿಕೆಯನ್ನು ಹೊಂದಿದೆ ಎಂದು ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಹೇಳಿದ್ದಾರೆ. ಇಸ್ರೇಲ್‌ನ ಮಿಲಿಟರಿ ಕ್ರಮಗಳನ್ನು ಅಮೆರಿಕದ ನೀತಿಗಳಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

“ಈ ಪ್ರದೇಶದೊಳಗಿನ ಝಿಯೋನಿಸ್ಟ್ ಘಟಕದ ಕ್ರಮಗಳನ್ನು ಅಮೆರಿಕದಿಂದ ಪ್ರತ್ಯೇಕವಾಗಿ ನೋಡಲಾಗುವುದಿಲ್ಲ” ಎಂದು ಬಘೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

“ಇಸ್ರೇಲ್ ಆಡಳಿತವು ಅಮೆರಿಕದೊಂದಿಗೆ ಸಮನ್ವಯವಿಲ್ಲದೆ ಯಾವುದೇ ಕ್ರಮ ತೆಗೆದುಕೊಳ್ಳುತ್ತದೆ ಎಂದು ಯಾರೂ ನಂಬುವುದಿಲ್ಲ. ಇಸ್ರೇಲ್ ಆಡಳಿತದ ಆಕ್ರಮಣಕ್ಕೆ ಅಮೆರಿಕ ಜವಾಬ್ದಾರವಾಗಿದೆ, ಯಾವುದೇ ಉದ್ವಿಗ್ನತೆಯ ಉಲ್ಬಣದ ಪರಿಣಾಮಗಳಿಗೆ ಅದು ಸಹ ಜವಾಬ್ದಾರವಾಗಿರುತ್ತದೆ” ಎಂದು ಹೇಳಿದ್ದಾರೆ.

ಇಷ್ಟೆಲ್ಲಾ ಬೆಳವಣಿಗೆಗಳ ನಡುವೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಯಮದಿಂದ ವರ್ತಿಸದುವಂತೆ ಕೋರಿದ್ದಾರೆ ಎಂದು ವರದಿಯಾಗಿದೆ.

ಉದ್ವಿಗ್ನ ಸ್ಥಿತಿಯಲ್ಲಿ ಅಮೆರಿಕ-ಇಸ್ರೇಲ್ ಸಂಬಂಧ

ಇತ್ತೀಚಿನ ಘಟನೆಗಳು ಇರಾನ್ ದಾಳಿಗಳಿಗೆ ಪ್ರತಿಕ್ರಿಯಿಸದಂತೆ ಟ್ರಂಪ್ ಅವರ ಕರೆಯನ್ನು ನೆತನ್ಯಾಹು ನಿರ್ಲಕ್ಷಿಸಿದ ನಂತರ ಉದ್ವಿಗ್ನ ಸ್ಥಿತಿಯಲ್ಲಿರುವ ಅಮೆರಿಕ-ಇಸ್ರೇಲ್ ಸಂಬಂಧಗಳ ಮೇಲೆ ಶಾಶ್ವತ ಪರಿಣಾಮ ಬೀರುತ್ತವೆ ಎಂದು ಇಸ್ರೇಲ್ ವಿಶ್ಲೇಷಕ ಮತ್ತು ನಿರೂಪಕ ಒರಿ ಗೋಲ್ಡ್‌ಬರ್ಗ್ ಹೇಳುತ್ತಾರೆ.

ಲೆಬನಾನ್ ರಾಜಧಾನಿ ಬೈರುತ್‌ನಲ್ಲಿ ಹೆಚ್ಚಿನ ವಾಯುದಾಳಿಗಳ ಯೋಜನೆಗಳ ಕುರಿತು ಟ್ರಂಪ್ ಇಸ್ರೇಲ್ ನಾಯಕನೊಂದಿಗೆ ನಡೆಸಿದ ಫೋನ್ ಕರೆ ಮಾತುಕತೆಗಳ ಕೆಲವು ದಿನಗಳ ನಂತರ ಅವರ ವಿನಂತಿ ಬಂದಿದೆ ಎಂಬುದನ್ನು ಅವರು ಗಮನಿಸಿದ್ದಾರೆ. ಈ ಕರೆಯನ್ನು ಆರಂಭದಲ್ಲಿ ಮಾಧ್ಯಮಗಳಿಗೆ ಸೋರಿಕೆ ಮಾಡಲಾಯಿತು, ಮೊದಲು ಅಮೆರಿಕ ಅಧ್ಯಕ್ಷರು ಅದನ್ನು ದೃಢಪಡಿಸಿದರು.

“ಜೋ ಬಿಡೆನ್ ಅಧ್ಯಕ್ಷರಾಗಿದ್ದಾಗ ನೆತನ್ಯಾಹು ತಪ್ಪಿಸಿಕೊಳ್ಳಬಹುದಾದ ವಿಷಯಗಳು ಟ್ರಂಪ್ ಅಧ್ಯಕ್ಷತೆಯಲ್ಲಿ ಅವರು ತಪ್ಪಿಸಿಕೊಳ್ಳಬಹುದಾದ ವಿಷಯಗಳಲ್ಲ” ಎಂದು ಗೋಲ್ಡ್‌ಬರ್ಗ್ ತಿಳಿಸಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ವಿಶೇಷವಾಗಿ ಅಮೆರಿಕದ ಬೆಂಬಲವಿಲ್ಲದೆ, ಇಸ್ರೇಲ್ ಸಂಪೂರ್ಣ ಯುದ್ಧವನ್ನು ಪುನರಾರಂಭಿಸುವಷ್ಟು ಪ್ರಬಲವಾಗಿದೆ ಎಂದು ಅವರು ನಂಬುವುದಿಲ್ಲ ಎಂದು ಗೋಲ್ಡ್‌ಬರ್ಗ್ ಹೇಳಿದರು.

“ಇಸ್ರೇಲ್ ರಾಜಕೀಯವಾಗಿ ತುಂಬಾ ದುರ್ಬಲವಾಗಿದೆ, ಅಂತರರಾಷ್ಟ್ರೀಯವಾಗಿ ಮತ್ತು ದೇಶೀಯವಾಗಿ ತನ್ನದೇ ಬಲದ ಮೇಲೆ ಬೃಹತ್ ದಾಳಿ ನಡೆಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...