Homeರಾಷ್ಟ್ರೀಯಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಎನ್‌ಎಸ್‌ಎ ಅಜಿತ್‌ ದೋವಲ್‌‌‌ ಅವರು ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸುತ್ತೇವೆಂದು ಭರವಸೆ ನೀಡಿದ್ದಾಗಿ ಇರಾನ್‌ ಹೇಳಿದೆ

- Advertisement -
- Advertisement -

ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಬುಧವಾರ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಬಿಜೆಪಿಯ ಮಾಜಿ ವಕ್ತಾರೆ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಉಭಯ ದೇಶಗಳ ನಾಯಕರ ನಡುವೆ ನಡೆದ ಚರ್ಚೆಗಳ ಬಗ್ಗೆ ಮತ್ತೆ ಎಲ್ಲ ಚಿತ್ತ ಹೊರಳಿದೆ.

ನೂಪುರ್ ಶರ್ಮಾ ವಿರುದ್ಧ ತೀವ್ರವಾಗಿ ಟೀಕಿಸಿದ ಅರಬ್ ರಾಷ್ಟ್ರಗಳಲ್ಲಿ ಇರಾನ್ ಕೂಡ ಸೇರಿದ್ದರೂ, ದ್ವಿಪಕ್ಷೀಯ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿಲ್ಲ ಎಂದು ಭಾರತದ ಉನ್ನತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರವಾದಿ ವಿರುದ್ಧ ಮಾಡಲಾಗಿದ್ದ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿ, ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದನ್ನೂ ಓದಿ: ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌

ಆದಾಗ್ಯೂ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಬುಧವಾರ ನಡೆದ ಸಭೆಯಲ್ಲಿ ಹೊಸೈನ್ ಅಮೀರ್ ಅಬ್ದೊಲ್ಲಾಹಿಯಾನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಗಳು ಹೇಳಿವೆ. “ಪ್ರವಾದಿ ಮುಹಮ್ಮದ್‌ ಅವರ ವಿರುದ್ಧ ಮಾಡಲಾಗಿರುವ ವಿವಾದಾತ್ಮಕ ಹೇಳಿಕೆಗಳಿಂದ  ಉಂಟಾಗಿರುವ ‘ನಕಾರಾತ್ಮಕ ವಾತಾವರಣ’ ವನ್ನು ಅಬ್ದುಲ್ಲಾಹಿಯನ್ ಸೂಚಿಸಿದ್ದಾರೆ” ಎಂದು ಇಂಡಿಯಾ ಟುಡೇ ಇರಾನಿನ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

“ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಭಾರತ ಭರವಸೆ ನೀಡಿದೆ” ಎಂದು ಇರಾನ್‌ ತಿಳಸಿದೆ. ಎನ್‌ಎಸ್‌ಎ ಅಜಿತ್ ದೋವಲ್‌ ಅವರು, “ಅಪರಾಧಿಗಳ ವಿರುದ್ಧ ಗಂಭೀರವಾಗಿ ವ್ಯವಹರಿಸಲಾಗುವುದು ಎಂದು ಹೇಳಿದ್ದಾರೆ” ಎಂದು ಅದು ಉಲ್ಲೇಖಿಸಿದೆ.

ಬುಧವಾರ ರಾತ್ರಿ ದ್ವಿಪಕ್ಷೀಯ ಕಾರ್ಯತಂತ್ರದ ಮಾತುಕತೆ ನಡೆಸಲು ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಇತರ ಭಾರತೀಯ ಅಧಿಕಾರಿಗಳನ್ನು ಭೇಟಿಯಾದ ಬಗ್ಗೆ ಅಮಿರ್‌ ಅಬ್ದೊಲ್ಲಾಹಿಯಾನ್ ಟ್ವೀಟ್‌ನಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇರಾನ್ ಮತ್ತು ಭಾರತ ಎರಡೂ ದೇಶಗಳು ದೈವಿಕ ಧರ್ಮಗಳು ಮತ್ತು ಇಸ್ಲಾಮಿಕ್ ಪವಿತ್ರತೆಗಳನ್ನು ಗೌರವಿಸುವ ಅಗತ್ಯವನ್ನು ಒಪ್ಪಿಕೊಂಡಿವೆ ಮತ್ತು ವಿಭಜಕ ಹೇಳಿಕೆಗಳನ್ನು ವಿರೋಧಿಸಿವೆ ಎಂದು ಅವರು ಹೇಳಿದ್ದು, “ಭಾರತವು ಸಹಾನುಭೂತಿ ಮತ್ತು ಸಹಿಷ್ಣುತೆಯ ನಾಡು” ಎಂದು ಹೊಗಳಿದ್ದಾರೆ.

ಇದಲ್ಲದೆ, ಗದ್ದಲ ಮತ್ತು ಗಲಾಟೆಗಳು ಭಾರತಕ್ಕೆ ಹೊಂದಿಕೆಯಾಗುವುದಿಲ್ಲ ಅಥವಾ ಭಾರತದಲ್ಲಿ ಇದು ಬೇರೂರಿರಿಲ್ಲ ಎಂದು ಅವರು ಹೇಳಿದ್ದಾರೆ. ಈ ರೀತಿಯ ವಿವಾದಾತ್ಮಕ ಹೇಳಿಕೆಯನ್ನು ಭಾರತದ ಎಲ್ಲಾ ಧರ್ಮಗಳ ಅನುಯಾಯಿಗಳು ವಿರೋಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...