Homeಅಂತರಾಷ್ಟ್ರೀಯಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

ಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ, ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿಯನ್ನು ತಡೆಯುವ ಒಪ್ಪಂದವನ್ನು ಇರಾನ್ ತಿರಸ್ಕರಿಸಿದೆ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟೆಹ್ರಾನ್‌ನ ಜನತೆಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿಯಿಂದಾಗಿ, ಟ್ರಂಪ್ ಸೋಮವಾರ ಕೆನಡಾದಲ್ಲಿ ಪ್ರಾರಂಭಗೊಂಡಿರುವ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಿಂದ ಒಂದು ದಿನ ಮುಂಚಿತವಾಗಿ ಹೊರಟಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಟ್ರಂಪ್ ತಮ್ಮ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಕರೆಯಲಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

“ನಾನು ಸಹಿ ಹಾಕಲು ಹೇಳಿದ ಒಪ್ಪಂದಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಎಂತಹ ನಾಚಿಕೆಗೇಡಿನ ಸಂಗತಿ ಮತ್ತು ಮಾನವ ಜೀವ ವ್ಯರ್ಥ. ಸರಳವಾಗಿ ಹೇಳುವುದಾದರೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ! ಎಲ್ಲರೂ ತಕ್ಷಣ ಟೆಹ್ರಾನ್‌ನಿಂದ ಸ್ಥಳಾಂತರಗೊಳ್ಳಬೇಕು” ಎಂದು ಟ್ರಂಪ್ ತಮ್ಮ ಟ್ರೂತ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ಅಮೆರಿಕ ಪ್ರಸ್ತಾಪಿಸಿದ್ದ ಕದನ ವಿರಾಮಕ್ಕೆ ಇಸ್ರೇಲ್ ಮತ್ತು ಇರಾನ್ ಒಪ್ಪಿಗೆ ನೀಡುವುದು ತಕ್ಷಣದ ಉದ್ದೇಶವಾಗಿರುವುದರಿಂದ, ಟ್ರಂಪ್ ಜಿ7 ನಿಂದ ಬೇಗನೆ ನಿರ್ಗಮಿಸಿರುವುದು ಸಕಾರಾತ್ಮಕವಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

“ವಿಶೇಷವಾಗಿ ಕದನ ವಿರಾಮ ಮತ್ತು ವಿಶಾಲ ಚರ್ಚೆಗಳನ್ನು ಪ್ರಾರಂಭಿಸುವ ಪ್ರಸ್ತಾಪವನ್ನು ಮಾಡಲಾಗಿದೆ. ಇದು ತುಂಬಾ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ಈಗ ಪಾಲುದಾರರು (ಪಕ್ಷಕಾರರು) ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಾಗಿದೆ” ಎಂದಿದ್ದಾರೆ.

ಮಂಗಳವಾರ ಮುಂಜಾನೆ ಟೆಹ್ರಾನ್‌ನಲ್ಲಿ ಸ್ಫೋಟಗಳು ಮತ್ತು ಭಾರೀ ವಾಯು ರಕ್ಷಣಾ ಗುಂಡಿನ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಟೆಹ್ರಾನ್‌ನ 320 ಕಿಮೀ (200 ಮೈಲುಗಳು) ದೂರದಲ್ಲಿರುವ ಪ್ರಮುಖ ಪರಮಾಣು ನೆಲೆಯಾದ ನಟಾಂಜ್‌ನಲ್ಲಿಯೂ ವಾಯು ರಕ್ಷಣಾ ಕಾರ್ಯವನ್ನು ಸಕ್ರಿಯಗೊಳಿಸಲಾಗಿದೆ ಎಂದು ಅಸ್ರಿರಾನ್ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ.

ಅಮೆರಿಕ ಇರಾನ್ ಮೇಲೆ ದಾಳಿ ಮಾಡುತ್ತಿದೆ ಎಂಬುದು ನಿಜವಲ್ಲ ಎಂದು ಶ್ವೇತಭವನದ ಸಹಾಯಕರೊಬ್ಬರು ಹೇಳಿದ್ದಾರೆ. ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, “ಟ್ರಂಪ್ ಇನ್ನೂ ಇರಾನ್ ಜೊತೆ ಪರಮಾಣು ಒಪ್ಪಂದ ಮಾಡಿಕೊಳ್ಳುವ ಗುರಿಯನ್ನು ಹೊಂದಿದ್ದಾರೆ ಮತ್ತು ಅಮೆರಿಕವು ಈ ಪ್ರದೇಶದಲ್ಲಿನ ತನ್ನ ಆಸ್ತಿಗಳನ್ನು ರಕ್ಷಿಸಿಕೊಳ್ಳುತ್ತದೆ ಎಂದಿದ್ದಾರೆ.

ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿ ಸೋಮವಾರ ಮಧ್ಯರಾತ್ರಿಯ ನಂತರ ವಾಯುದಾಳಿ ಸೈರನ್‌ಗಳು ಮೊಳಗಿವೆ. ಇರಾನ್ ಕ್ಷಿಪಣಿಗಳು ಮತ್ತೆ ದೇಶವನ್ನು ಗುರಿಯಾಗಿಸಿಕೊಂಡಿದ್ದು ಸ್ಫೋಟದ ಶಬ್ದಗಳು ಕೇಳಿ ಬಂದಿವೆ ಎಂದು ವರದಿಯಾಗಿದೆ.

ಐದು ದಿನಗಳಲ್ಲಿ ಇರಾನಿನ ಅಧಿಕಾರಿಗಳು 224 ಸಾವುಗಳನ್ನು ವರದಿ ಮಾಡಿದ್ದಾರೆ. ಇಸ್ರೇಲ್ 24 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಇರಾನಿನ ದಾಳಿಯಿಂದ ಹಾನಿಗೊಳಗಾದ ಸ್ಥಳಗಳಿಂದ ಸುಮಾರು 3,000 ಇಸ್ರೇಲಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಹೇಳಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಕ್ಷಣದ ಕದನ ವಿರಾಮ ಒಪ್ಪಿಕೊಳ್ಳುವಂತೆ ಮಾಡಲು ಟ್ರಂಪ್ ಮೇಲೆ ಒತ್ತಡ ಹೇರುವಂತೆ ಒಮಾನ್, ಕತಾರ್ ಮತ್ತು ಸೌದಿ ಅರೇಬಿಯಾವನ್ನು ಇರಾನ್ ಕೇಳಿಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್‌ ವರದಿ ಮಾಡಿದೆ.

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...