Homeಅಂತರಾಷ್ಟ್ರೀಯಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

ಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ, ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿಯನ್ನು ತಡೆಯುವ ಒಪ್ಪಂದವನ್ನು ಇರಾನ್ ತಿರಸ್ಕರಿಸಿದೆ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟೆಹ್ರಾನ್‌ನ ಜನತೆಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿಯಿಂದಾಗಿ, ಟ್ರಂಪ್ ಸೋಮವಾರ ಕೆನಡಾದಲ್ಲಿ ಪ್ರಾರಂಭಗೊಂಡಿರುವ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಿಂದ ಒಂದು ದಿನ ಮುಂಚಿತವಾಗಿ ಹೊರಟಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಟ್ರಂಪ್ ತಮ್ಮ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಕರೆಯಲಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

“ನಾನು ಸಹಿ ಹಾಕಲು ಹೇಳಿದ ಒಪ್ಪಂದಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಎಂತಹ ನಾಚಿಕೆಗೇಡಿನ ಸಂಗತಿ ಮತ್ತು ಮಾನವ ಜೀವ ವ್ಯರ್ಥ. ಸರಳವಾಗಿ ಹೇಳುವುದಾದರೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ! ಎಲ್ಲರೂ ತಕ್ಷಣ ಟೆಹ್ರಾನ್‌ನಿಂದ ಸ್ಥಳಾಂತರಗೊಳ್ಳಬೇಕು” ಎಂದು ಟ್ರಂಪ್ ತಮ್ಮ ಟ್ರೂತ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ಅಮೆರಿಕ ಪ್ರಸ್ತಾಪಿಸಿದ್ದ ಕದನ ವಿರಾಮಕ್ಕೆ ಇಸ್ರೇಲ್ ಮತ್ತು ಇರಾನ್ ಒಪ್ಪಿಗೆ ನೀಡುವುದು ತಕ್ಷಣದ ಉದ್ದೇಶವಾಗಿರುವುದರಿಂದ, ಟ್ರಂಪ್ ಜಿ7 ನಿಂದ ಬೇಗನೆ ನಿರ್ಗಮಿಸಿರುವುದು ಸಕಾರಾತ್ಮಕವಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

“ವಿಶೇಷವಾಗಿ ಕದನ ವಿರಾಮ ಮತ್ತು ವಿಶಾಲ ಚರ್ಚೆಗಳನ್ನು ಪ್ರಾರಂಭಿಸುವ ಪ್ರಸ್ತಾಪವನ್ನು ಮಾಡಲಾಗಿದೆ. ಇದು ತುಂಬಾ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ಈಗ ಪಾಲುದಾರರು (ಪಕ್ಷಕಾರರು) ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಾಗಿದೆ” ಎಂದಿದ್ದಾರೆ.

ಮಂಗಳವಾರ ಮುಂಜಾನೆ ಟೆಹ್ರಾನ್‌ನಲ್ಲಿ ಸ್ಫೋಟಗಳು ಮತ್ತು ಭಾರೀ ವಾಯು ರಕ್ಷಣಾ ಗುಂಡಿನ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಟೆಹ್ರಾನ್‌ನ 320 ಕಿಮೀ (200 ಮೈಲುಗಳು) ದೂರದಲ್ಲಿರುವ ಪ್ರಮುಖ ಪರಮಾಣು ನೆಲೆಯಾದ ನಟಾಂಜ್‌ನಲ್ಲಿಯೂ ವಾಯು ರಕ್ಷಣಾ ಕಾರ್ಯವನ್ನು ಸಕ್ರಿಯಗೊಳಿಸಲಾಗಿದೆ ಎಂದು ಅಸ್ರಿರಾನ್ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ.

ಅಮೆರಿಕ ಇರಾನ್ ಮೇಲೆ ದಾಳಿ ಮಾಡುತ್ತಿದೆ ಎಂಬುದು ನಿಜವಲ್ಲ ಎಂದು ಶ್ವೇತಭವನದ ಸಹಾಯಕರೊಬ್ಬರು ಹೇಳಿದ್ದಾರೆ. ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, “ಟ್ರಂಪ್ ಇನ್ನೂ ಇರಾನ್ ಜೊತೆ ಪರಮಾಣು ಒಪ್ಪಂದ ಮಾಡಿಕೊಳ್ಳುವ ಗುರಿಯನ್ನು ಹೊಂದಿದ್ದಾರೆ ಮತ್ತು ಅಮೆರಿಕವು ಈ ಪ್ರದೇಶದಲ್ಲಿನ ತನ್ನ ಆಸ್ತಿಗಳನ್ನು ರಕ್ಷಿಸಿಕೊಳ್ಳುತ್ತದೆ ಎಂದಿದ್ದಾರೆ.

ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿ ಸೋಮವಾರ ಮಧ್ಯರಾತ್ರಿಯ ನಂತರ ವಾಯುದಾಳಿ ಸೈರನ್‌ಗಳು ಮೊಳಗಿವೆ. ಇರಾನ್ ಕ್ಷಿಪಣಿಗಳು ಮತ್ತೆ ದೇಶವನ್ನು ಗುರಿಯಾಗಿಸಿಕೊಂಡಿದ್ದು ಸ್ಫೋಟದ ಶಬ್ದಗಳು ಕೇಳಿ ಬಂದಿವೆ ಎಂದು ವರದಿಯಾಗಿದೆ.

ಐದು ದಿನಗಳಲ್ಲಿ ಇರಾನಿನ ಅಧಿಕಾರಿಗಳು 224 ಸಾವುಗಳನ್ನು ವರದಿ ಮಾಡಿದ್ದಾರೆ. ಇಸ್ರೇಲ್ 24 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಇರಾನಿನ ದಾಳಿಯಿಂದ ಹಾನಿಗೊಳಗಾದ ಸ್ಥಳಗಳಿಂದ ಸುಮಾರು 3,000 ಇಸ್ರೇಲಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಹೇಳಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಕ್ಷಣದ ಕದನ ವಿರಾಮ ಒಪ್ಪಿಕೊಳ್ಳುವಂತೆ ಮಾಡಲು ಟ್ರಂಪ್ ಮೇಲೆ ಒತ್ತಡ ಹೇರುವಂತೆ ಒಮಾನ್, ಕತಾರ್ ಮತ್ತು ಸೌದಿ ಅರೇಬಿಯಾವನ್ನು ಇರಾನ್ ಕೇಳಿಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್‌ ವರದಿ ಮಾಡಿದೆ.

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...