Homeಅಂತರಾಷ್ಟ್ರೀಯಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

ಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ, ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿಯನ್ನು ತಡೆಯುವ ಒಪ್ಪಂದವನ್ನು ಇರಾನ್ ತಿರಸ್ಕರಿಸಿದೆ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟೆಹ್ರಾನ್‌ನ ಜನತೆಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿಯಿಂದಾಗಿ, ಟ್ರಂಪ್ ಸೋಮವಾರ ಕೆನಡಾದಲ್ಲಿ ಪ್ರಾರಂಭಗೊಂಡಿರುವ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಿಂದ ಒಂದು ದಿನ ಮುಂಚಿತವಾಗಿ ಹೊರಟಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಟ್ರಂಪ್ ತಮ್ಮ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಕರೆಯಲಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

“ನಾನು ಸಹಿ ಹಾಕಲು ಹೇಳಿದ ಒಪ್ಪಂದಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಎಂತಹ ನಾಚಿಕೆಗೇಡಿನ ಸಂಗತಿ ಮತ್ತು ಮಾನವ ಜೀವ ವ್ಯರ್ಥ. ಸರಳವಾಗಿ ಹೇಳುವುದಾದರೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ! ಎಲ್ಲರೂ ತಕ್ಷಣ ಟೆಹ್ರಾನ್‌ನಿಂದ ಸ್ಥಳಾಂತರಗೊಳ್ಳಬೇಕು” ಎಂದು ಟ್ರಂಪ್ ತಮ್ಮ ಟ್ರೂತ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ಅಮೆರಿಕ ಪ್ರಸ್ತಾಪಿಸಿದ್ದ ಕದನ ವಿರಾಮಕ್ಕೆ ಇಸ್ರೇಲ್ ಮತ್ತು ಇರಾನ್ ಒಪ್ಪಿಗೆ ನೀಡುವುದು ತಕ್ಷಣದ ಉದ್ದೇಶವಾಗಿರುವುದರಿಂದ, ಟ್ರಂಪ್ ಜಿ7 ನಿಂದ ಬೇಗನೆ ನಿರ್ಗಮಿಸಿರುವುದು ಸಕಾರಾತ್ಮಕವಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

“ವಿಶೇಷವಾಗಿ ಕದನ ವಿರಾಮ ಮತ್ತು ವಿಶಾಲ ಚರ್ಚೆಗಳನ್ನು ಪ್ರಾರಂಭಿಸುವ ಪ್ರಸ್ತಾಪವನ್ನು ಮಾಡಲಾಗಿದೆ. ಇದು ತುಂಬಾ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ಈಗ ಪಾಲುದಾರರು (ಪಕ್ಷಕಾರರು) ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಾಗಿದೆ” ಎಂದಿದ್ದಾರೆ.

ಮಂಗಳವಾರ ಮುಂಜಾನೆ ಟೆಹ್ರಾನ್‌ನಲ್ಲಿ ಸ್ಫೋಟಗಳು ಮತ್ತು ಭಾರೀ ವಾಯು ರಕ್ಷಣಾ ಗುಂಡಿನ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಟೆಹ್ರಾನ್‌ನ 320 ಕಿಮೀ (200 ಮೈಲುಗಳು) ದೂರದಲ್ಲಿರುವ ಪ್ರಮುಖ ಪರಮಾಣು ನೆಲೆಯಾದ ನಟಾಂಜ್‌ನಲ್ಲಿಯೂ ವಾಯು ರಕ್ಷಣಾ ಕಾರ್ಯವನ್ನು ಸಕ್ರಿಯಗೊಳಿಸಲಾಗಿದೆ ಎಂದು ಅಸ್ರಿರಾನ್ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ.

ಅಮೆರಿಕ ಇರಾನ್ ಮೇಲೆ ದಾಳಿ ಮಾಡುತ್ತಿದೆ ಎಂಬುದು ನಿಜವಲ್ಲ ಎಂದು ಶ್ವೇತಭವನದ ಸಹಾಯಕರೊಬ್ಬರು ಹೇಳಿದ್ದಾರೆ. ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, “ಟ್ರಂಪ್ ಇನ್ನೂ ಇರಾನ್ ಜೊತೆ ಪರಮಾಣು ಒಪ್ಪಂದ ಮಾಡಿಕೊಳ್ಳುವ ಗುರಿಯನ್ನು ಹೊಂದಿದ್ದಾರೆ ಮತ್ತು ಅಮೆರಿಕವು ಈ ಪ್ರದೇಶದಲ್ಲಿನ ತನ್ನ ಆಸ್ತಿಗಳನ್ನು ರಕ್ಷಿಸಿಕೊಳ್ಳುತ್ತದೆ ಎಂದಿದ್ದಾರೆ.

ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿ ಸೋಮವಾರ ಮಧ್ಯರಾತ್ರಿಯ ನಂತರ ವಾಯುದಾಳಿ ಸೈರನ್‌ಗಳು ಮೊಳಗಿವೆ. ಇರಾನ್ ಕ್ಷಿಪಣಿಗಳು ಮತ್ತೆ ದೇಶವನ್ನು ಗುರಿಯಾಗಿಸಿಕೊಂಡಿದ್ದು ಸ್ಫೋಟದ ಶಬ್ದಗಳು ಕೇಳಿ ಬಂದಿವೆ ಎಂದು ವರದಿಯಾಗಿದೆ.

ಐದು ದಿನಗಳಲ್ಲಿ ಇರಾನಿನ ಅಧಿಕಾರಿಗಳು 224 ಸಾವುಗಳನ್ನು ವರದಿ ಮಾಡಿದ್ದಾರೆ. ಇಸ್ರೇಲ್ 24 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಇರಾನಿನ ದಾಳಿಯಿಂದ ಹಾನಿಗೊಳಗಾದ ಸ್ಥಳಗಳಿಂದ ಸುಮಾರು 3,000 ಇಸ್ರೇಲಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಹೇಳಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಕ್ಷಣದ ಕದನ ವಿರಾಮ ಒಪ್ಪಿಕೊಳ್ಳುವಂತೆ ಮಾಡಲು ಟ್ರಂಪ್ ಮೇಲೆ ಒತ್ತಡ ಹೇರುವಂತೆ ಒಮಾನ್, ಕತಾರ್ ಮತ್ತು ಸೌದಿ ಅರೇಬಿಯಾವನ್ನು ಇರಾನ್ ಕೇಳಿಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್‌ ವರದಿ ಮಾಡಿದೆ.

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...