Homeಅಂತರಾಷ್ಟ್ರೀಯಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

ಐದನೇ ದಿನಕ್ಕೆ ಕಾಲಿಟ್ಟ ಇರಾನ್ -ಇಸ್ರೇಲ್ ಸಂಘರ್ಷ: ಟೆಹ್ರಾನ್ ತೊರೆಯುವಂತೆ ಜನತೆಗೆ ಟ್ರಂಪ್ ಸೂಚನೆ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ, ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿಯನ್ನು ತಡೆಯುವ ಒಪ್ಪಂದವನ್ನು ಇರಾನ್ ತಿರಸ್ಕರಿಸಿದೆ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟೆಹ್ರಾನ್‌ನ ಜನತೆಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿಯಿಂದಾಗಿ, ಟ್ರಂಪ್ ಸೋಮವಾರ ಕೆನಡಾದಲ್ಲಿ ಪ್ರಾರಂಭಗೊಂಡಿರುವ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಿಂದ ಒಂದು ದಿನ ಮುಂಚಿತವಾಗಿ ಹೊರಟಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಟ್ರಂಪ್ ತಮ್ಮ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಕರೆಯಲಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

“ನಾನು ಸಹಿ ಹಾಕಲು ಹೇಳಿದ ಒಪ್ಪಂದಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಎಂತಹ ನಾಚಿಕೆಗೇಡಿನ ಸಂಗತಿ ಮತ್ತು ಮಾನವ ಜೀವ ವ್ಯರ್ಥ. ಸರಳವಾಗಿ ಹೇಳುವುದಾದರೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ! ಎಲ್ಲರೂ ತಕ್ಷಣ ಟೆಹ್ರಾನ್‌ನಿಂದ ಸ್ಥಳಾಂತರಗೊಳ್ಳಬೇಕು” ಎಂದು ಟ್ರಂಪ್ ತಮ್ಮ ಟ್ರೂತ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ಅಮೆರಿಕ ಪ್ರಸ್ತಾಪಿಸಿದ್ದ ಕದನ ವಿರಾಮಕ್ಕೆ ಇಸ್ರೇಲ್ ಮತ್ತು ಇರಾನ್ ಒಪ್ಪಿಗೆ ನೀಡುವುದು ತಕ್ಷಣದ ಉದ್ದೇಶವಾಗಿರುವುದರಿಂದ, ಟ್ರಂಪ್ ಜಿ7 ನಿಂದ ಬೇಗನೆ ನಿರ್ಗಮಿಸಿರುವುದು ಸಕಾರಾತ್ಮಕವಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

“ವಿಶೇಷವಾಗಿ ಕದನ ವಿರಾಮ ಮತ್ತು ವಿಶಾಲ ಚರ್ಚೆಗಳನ್ನು ಪ್ರಾರಂಭಿಸುವ ಪ್ರಸ್ತಾಪವನ್ನು ಮಾಡಲಾಗಿದೆ. ಇದು ತುಂಬಾ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ಈಗ ಪಾಲುದಾರರು (ಪಕ್ಷಕಾರರು) ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಾಗಿದೆ” ಎಂದಿದ್ದಾರೆ.

ಮಂಗಳವಾರ ಮುಂಜಾನೆ ಟೆಹ್ರಾನ್‌ನಲ್ಲಿ ಸ್ಫೋಟಗಳು ಮತ್ತು ಭಾರೀ ವಾಯು ರಕ್ಷಣಾ ಗುಂಡಿನ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಟೆಹ್ರಾನ್‌ನ 320 ಕಿಮೀ (200 ಮೈಲುಗಳು) ದೂರದಲ್ಲಿರುವ ಪ್ರಮುಖ ಪರಮಾಣು ನೆಲೆಯಾದ ನಟಾಂಜ್‌ನಲ್ಲಿಯೂ ವಾಯು ರಕ್ಷಣಾ ಕಾರ್ಯವನ್ನು ಸಕ್ರಿಯಗೊಳಿಸಲಾಗಿದೆ ಎಂದು ಅಸ್ರಿರಾನ್ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ.

ಅಮೆರಿಕ ಇರಾನ್ ಮೇಲೆ ದಾಳಿ ಮಾಡುತ್ತಿದೆ ಎಂಬುದು ನಿಜವಲ್ಲ ಎಂದು ಶ್ವೇತಭವನದ ಸಹಾಯಕರೊಬ್ಬರು ಹೇಳಿದ್ದಾರೆ. ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, “ಟ್ರಂಪ್ ಇನ್ನೂ ಇರಾನ್ ಜೊತೆ ಪರಮಾಣು ಒಪ್ಪಂದ ಮಾಡಿಕೊಳ್ಳುವ ಗುರಿಯನ್ನು ಹೊಂದಿದ್ದಾರೆ ಮತ್ತು ಅಮೆರಿಕವು ಈ ಪ್ರದೇಶದಲ್ಲಿನ ತನ್ನ ಆಸ್ತಿಗಳನ್ನು ರಕ್ಷಿಸಿಕೊಳ್ಳುತ್ತದೆ ಎಂದಿದ್ದಾರೆ.

ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿ ಸೋಮವಾರ ಮಧ್ಯರಾತ್ರಿಯ ನಂತರ ವಾಯುದಾಳಿ ಸೈರನ್‌ಗಳು ಮೊಳಗಿವೆ. ಇರಾನ್ ಕ್ಷಿಪಣಿಗಳು ಮತ್ತೆ ದೇಶವನ್ನು ಗುರಿಯಾಗಿಸಿಕೊಂಡಿದ್ದು ಸ್ಫೋಟದ ಶಬ್ದಗಳು ಕೇಳಿ ಬಂದಿವೆ ಎಂದು ವರದಿಯಾಗಿದೆ.

ಐದು ದಿನಗಳಲ್ಲಿ ಇರಾನಿನ ಅಧಿಕಾರಿಗಳು 224 ಸಾವುಗಳನ್ನು ವರದಿ ಮಾಡಿದ್ದಾರೆ. ಇಸ್ರೇಲ್ 24 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಇರಾನಿನ ದಾಳಿಯಿಂದ ಹಾನಿಗೊಳಗಾದ ಸ್ಥಳಗಳಿಂದ ಸುಮಾರು 3,000 ಇಸ್ರೇಲಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಹೇಳಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಕ್ಷಣದ ಕದನ ವಿರಾಮ ಒಪ್ಪಿಕೊಳ್ಳುವಂತೆ ಮಾಡಲು ಟ್ರಂಪ್ ಮೇಲೆ ಒತ್ತಡ ಹೇರುವಂತೆ ಒಮಾನ್, ಕತಾರ್ ಮತ್ತು ಸೌದಿ ಅರೇಬಿಯಾವನ್ನು ಇರಾನ್ ಕೇಳಿಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್‌ ವರದಿ ಮಾಡಿದೆ.

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...