Homeಅಂತರಾಷ್ಟ್ರೀಯಅಮೆರಿಕ ಅಧ್ಯಕ್ಷ ಟ್ರಂಪ್‌ ಬಂಧನಕ್ಕೆ ವಾರಂಟ್ ಹೊರಡಿಸಿದ ಇರಾನ್: ಇಂಟರ್‌ಪೋಲ್ ಸಹಾಯ ಯಾಚನೆ

ಅಮೆರಿಕ ಅಧ್ಯಕ್ಷ ಟ್ರಂಪ್‌ ಬಂಧನಕ್ಕೆ ವಾರಂಟ್ ಹೊರಡಿಸಿದ ಇರಾನ್: ಇಂಟರ್‌ಪೋಲ್ ಸಹಾಯ ಯಾಚನೆ

ಜನವರಿಯಲ್ಲಿ ಕ್ರಾಂತಿಕಾರಿ ಗಾರ್ಡ್‌ನ ದಂಡಯಾತ್ರೆಯ ಕುಡ್ಸ್ ಫೋರ್ಸ್‌ನ ಮೇಲ್ವಿಚಾರಣೆ ವಹಿಸಿದ್ದ ಸೊಲೈಮಾನಿ ಮತ್ತು ಇತರರನ್ನು ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್‌ ದಾಳಿಯಲ್ಲಿ ಕೊಲ್ಲಲಾಗಿತ್ತು.

- Advertisement -
- Advertisement -

ಬಾಗ್ದಾದ್‌ನಲ್ಲಿ ಇರಾನಿನ ಉನ್ನತ ಜನರಲ್‌ಅನ್ನು ಡ್ರೋನ್ ದಾಳಿ ಮೂಲಕ ಕೊಂದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇತರರನ್ನು ಬಂಧಿಸಲು ಇರಾನ್ ವಾರಂಟ್ ಹೊರಡಿಸಿದೆ. ಅದಕ್ಕಾಗಿ ಇಂಟರ್‌ಪೋಲ್ ಸಹಾಯ ಕೇಳಿದ್ದೇವೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

ಇದರಿಂದ ಸದ್ಯಕ್ಕೆ ಡೊನಾಲ್ಡ್‌ ಟ್ರಂಪ್‌ಗೆ ಯಾವುದೇ ಬಂಧನದ ಅಪಾಯವಿಲ್ಲದಿದ್ದರೂ ಇದು, ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯನ್ನು ಒತ್ತಿಹೇಳುತ್ತದೆ. ವಿಶ್ವಶಕ್ತಿಗಳೊಂದಿಗಿನ ಟೆಹ್ರಾನ್ ಪರಮಾಣು ಒಪ್ಪಂದದಿಂದ ಟ್ರಂಪ್ ಏಕಪಕ್ಷೀಯವಾಗಿ ಅಮೆರಿಕವನ್ನು ಹಿಂತೆಗೆದುಕೊಂಡಾಗಿನಿಂದ ಈ ಉದ್ವಿಗ್ನತೆ ಹೆಚ್ಚಾಗಿದೆ.

ಬಾಗ್ದಾದ್‌ನಲ್ಲಿ ಜನವರಿ 3 ರಂದು ಜನರಲ್ ಕಾಸ್ಸೆಮ್ ಸೊಲೈಮಾನಿಯನ್ನು ಕೊಂದ  ಆರೋಪದಲ್ಲಿ ಟ್ರಂಪ್ ಮತ್ತು 30 ಕ್ಕೂ ಹೆಚ್ಚು ಇತರರು ಕೊಲೆ ಮತ್ತು ಭಯೋತ್ಪಾದನೆ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಟೆಹ್ರಾನ್ ಪ್ರಾಸಿಕ್ಯೂಟರ್ ಅಲಿ ಅಲ್ಕಾಸಿಮೆಹ್ರ್ ಹೇಳಿದ್ದಾರೆ.

ಫ್ರಾನ್ಸ್‌ನ ಲಿಯಾನ್ ಮೂಲದ ಇಂಟರ್‌ಪೋಲ್ ಇರಾನ್‌ ಕೋರಿಕೆಗೆ ತಕ್ಷಣ ಸ್ಪಂದಿಸಲಿಲ್ಲ ಎನ್ನಲಾಗಿದೆ.

ಟ್ರಂಪ್ ಮತ್ತು ಇತರರಿಗೆ ಇರಾನ್ “ರೆಡ್ ನೋಟಿಸ್” ನೀಡಬೇಕೆಂದು ವಿನಂತಿಸಿದೆ ಎಂದು ಅಲ್ಕಾಸಿಮೆಹರ್ ಹೇಳಿದ್ದಾರೆ. ಇದು ಇಂಟರ್ಪೋಲ್ ಹೊರಡಿಸಿದ ಉನ್ನತ ಮಟ್ಟದ ಬಂಧನ ವಿನಂತಿಯನ್ನು ಪ್ರತಿನಿಧಿಸುತ್ತದೆ.

ವಿನಂತಿಯನ್ನು ಸ್ವೀಕರಿಸಿದ ನಂತರ, ಇಂಟರ್‌ಪೋಲ್ ಸಮಿತಿಯಿಂದ ಸಭೆ ಸೇರಿ ತನ್ನ ಸದಸ್ಯ ರಾಷ್ಟ್ರಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಬೇಕೆ ಅಥವಾ ಬೇಡವೇ ಎಂದು ಚರ್ಚಿಸುತ್ತದೆ. ಇಂಟರ್‌ಪೋಲ್ ಯಾವುದೇ ಸೂಚನೆಗಳನ್ನು ಸಾರ್ವಜನಿಕವಾಗಿ ಮಾಡುವ ಅವಶ್ಯಕತೆಯಿಲ್ಲ, ಆದರೂ ಕೆಲವು ಅದರ ವೆಬ್‌ಸೈಟ್‌ನಲ್ಲಿ ಪ್ರಕಟವಾಗುತ್ತವೆ.

ಜನವರಿಯಲ್ಲಿ ಕ್ರಾಂತಿಕಾರಿ ಗಾರ್ಡ್‌ನ ದಂಡಯಾತ್ರೆಯ ಕುಡ್ಸ್ ಫೋರ್ಸ್‌ನ ಮೇಲ್ವಿಚಾರಣೆ ವಹಿಸಿದ್ದ ಸೊಲೈಮಾನಿ ಮತ್ತು ಇತರರನ್ನು ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್‌ ದಾಳಿಯಲ್ಲಿ ಕೊಲ್ಲಲಾಗಿತ್ತು. ಇದು ಉಭಯ ದೇಶಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿತು. ಅಂತಿಮವಾಗಿ ಇರಾಕ್‌ನಲ್ಲಿ ಅಮೆರಿಕದ ಸೈನಿಕರನ್ನು ಗುರಿಯಾಗಿಸಿಕೊಂಡು ಖಂಡಾಂತರ ಕ್ಷಿಪಣಿ ದಾಳಿ ನಡೆಸುವ ಮೂಲಕ ಇರಾನ್ ಪ್ರತೀಕಾರ ತೀರಿಸಿಕೊಂಡಿತ್ತು.


ಮತ್ತಷ್ಟು ಸುದ್ದಿಗಳು

ಯುದ್ಧಕೋರ ಅಮೆರಿಕಾದ ಇರಾನ್ ಮೇಲಿನ ದುಸ್ಸಾಹಸ ಫಲ ನೀಡುವುದೇ ಇಲ್ಲ ಪೆಟ್ಟು ಕೊಡುವುದೇ?

ಇರಾನ್- ಅಮೆರಿಕ ಯುದ್ಧದಲ್ಲಿ ಅಮೆರಿಕದ ಕಾಲಾಳು ಆಗಲು ಹೊರಟ ಭಾರತ

ಟ್ರಂಪ್ ಇರಾನ್ ಮೇಲೆ ಬಿದ್ರೆ, ಮೋದಿ ನಮ್ಮ ಮೇಲೆ ಬಿದ್ದವುನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...