Homeಅಂತರಾಷ್ಟ್ರೀಯಅಮೆರಿಕ ಅಧ್ಯಕ್ಷ ಟ್ರಂಪ್‌ ಬಂಧನಕ್ಕೆ ವಾರಂಟ್ ಹೊರಡಿಸಿದ ಇರಾನ್: ಇಂಟರ್‌ಪೋಲ್ ಸಹಾಯ ಯಾಚನೆ

ಅಮೆರಿಕ ಅಧ್ಯಕ್ಷ ಟ್ರಂಪ್‌ ಬಂಧನಕ್ಕೆ ವಾರಂಟ್ ಹೊರಡಿಸಿದ ಇರಾನ್: ಇಂಟರ್‌ಪೋಲ್ ಸಹಾಯ ಯಾಚನೆ

ಜನವರಿಯಲ್ಲಿ ಕ್ರಾಂತಿಕಾರಿ ಗಾರ್ಡ್‌ನ ದಂಡಯಾತ್ರೆಯ ಕುಡ್ಸ್ ಫೋರ್ಸ್‌ನ ಮೇಲ್ವಿಚಾರಣೆ ವಹಿಸಿದ್ದ ಸೊಲೈಮಾನಿ ಮತ್ತು ಇತರರನ್ನು ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್‌ ದಾಳಿಯಲ್ಲಿ ಕೊಲ್ಲಲಾಗಿತ್ತು.

- Advertisement -
- Advertisement -

ಬಾಗ್ದಾದ್‌ನಲ್ಲಿ ಇರಾನಿನ ಉನ್ನತ ಜನರಲ್‌ಅನ್ನು ಡ್ರೋನ್ ದಾಳಿ ಮೂಲಕ ಕೊಂದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇತರರನ್ನು ಬಂಧಿಸಲು ಇರಾನ್ ವಾರಂಟ್ ಹೊರಡಿಸಿದೆ. ಅದಕ್ಕಾಗಿ ಇಂಟರ್‌ಪೋಲ್ ಸಹಾಯ ಕೇಳಿದ್ದೇವೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

ಇದರಿಂದ ಸದ್ಯಕ್ಕೆ ಡೊನಾಲ್ಡ್‌ ಟ್ರಂಪ್‌ಗೆ ಯಾವುದೇ ಬಂಧನದ ಅಪಾಯವಿಲ್ಲದಿದ್ದರೂ ಇದು, ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯನ್ನು ಒತ್ತಿಹೇಳುತ್ತದೆ. ವಿಶ್ವಶಕ್ತಿಗಳೊಂದಿಗಿನ ಟೆಹ್ರಾನ್ ಪರಮಾಣು ಒಪ್ಪಂದದಿಂದ ಟ್ರಂಪ್ ಏಕಪಕ್ಷೀಯವಾಗಿ ಅಮೆರಿಕವನ್ನು ಹಿಂತೆಗೆದುಕೊಂಡಾಗಿನಿಂದ ಈ ಉದ್ವಿಗ್ನತೆ ಹೆಚ್ಚಾಗಿದೆ.

ಬಾಗ್ದಾದ್‌ನಲ್ಲಿ ಜನವರಿ 3 ರಂದು ಜನರಲ್ ಕಾಸ್ಸೆಮ್ ಸೊಲೈಮಾನಿಯನ್ನು ಕೊಂದ  ಆರೋಪದಲ್ಲಿ ಟ್ರಂಪ್ ಮತ್ತು 30 ಕ್ಕೂ ಹೆಚ್ಚು ಇತರರು ಕೊಲೆ ಮತ್ತು ಭಯೋತ್ಪಾದನೆ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಟೆಹ್ರಾನ್ ಪ್ರಾಸಿಕ್ಯೂಟರ್ ಅಲಿ ಅಲ್ಕಾಸಿಮೆಹ್ರ್ ಹೇಳಿದ್ದಾರೆ.

ಫ್ರಾನ್ಸ್‌ನ ಲಿಯಾನ್ ಮೂಲದ ಇಂಟರ್‌ಪೋಲ್ ಇರಾನ್‌ ಕೋರಿಕೆಗೆ ತಕ್ಷಣ ಸ್ಪಂದಿಸಲಿಲ್ಲ ಎನ್ನಲಾಗಿದೆ.

ಟ್ರಂಪ್ ಮತ್ತು ಇತರರಿಗೆ ಇರಾನ್ “ರೆಡ್ ನೋಟಿಸ್” ನೀಡಬೇಕೆಂದು ವಿನಂತಿಸಿದೆ ಎಂದು ಅಲ್ಕಾಸಿಮೆಹರ್ ಹೇಳಿದ್ದಾರೆ. ಇದು ಇಂಟರ್ಪೋಲ್ ಹೊರಡಿಸಿದ ಉನ್ನತ ಮಟ್ಟದ ಬಂಧನ ವಿನಂತಿಯನ್ನು ಪ್ರತಿನಿಧಿಸುತ್ತದೆ.

ವಿನಂತಿಯನ್ನು ಸ್ವೀಕರಿಸಿದ ನಂತರ, ಇಂಟರ್‌ಪೋಲ್ ಸಮಿತಿಯಿಂದ ಸಭೆ ಸೇರಿ ತನ್ನ ಸದಸ್ಯ ರಾಷ್ಟ್ರಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಬೇಕೆ ಅಥವಾ ಬೇಡವೇ ಎಂದು ಚರ್ಚಿಸುತ್ತದೆ. ಇಂಟರ್‌ಪೋಲ್ ಯಾವುದೇ ಸೂಚನೆಗಳನ್ನು ಸಾರ್ವಜನಿಕವಾಗಿ ಮಾಡುವ ಅವಶ್ಯಕತೆಯಿಲ್ಲ, ಆದರೂ ಕೆಲವು ಅದರ ವೆಬ್‌ಸೈಟ್‌ನಲ್ಲಿ ಪ್ರಕಟವಾಗುತ್ತವೆ.

ಜನವರಿಯಲ್ಲಿ ಕ್ರಾಂತಿಕಾರಿ ಗಾರ್ಡ್‌ನ ದಂಡಯಾತ್ರೆಯ ಕುಡ್ಸ್ ಫೋರ್ಸ್‌ನ ಮೇಲ್ವಿಚಾರಣೆ ವಹಿಸಿದ್ದ ಸೊಲೈಮಾನಿ ಮತ್ತು ಇತರರನ್ನು ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್‌ ದಾಳಿಯಲ್ಲಿ ಕೊಲ್ಲಲಾಗಿತ್ತು. ಇದು ಉಭಯ ದೇಶಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿತು. ಅಂತಿಮವಾಗಿ ಇರಾಕ್‌ನಲ್ಲಿ ಅಮೆರಿಕದ ಸೈನಿಕರನ್ನು ಗುರಿಯಾಗಿಸಿಕೊಂಡು ಖಂಡಾಂತರ ಕ್ಷಿಪಣಿ ದಾಳಿ ನಡೆಸುವ ಮೂಲಕ ಇರಾನ್ ಪ್ರತೀಕಾರ ತೀರಿಸಿಕೊಂಡಿತ್ತು.


ಮತ್ತಷ್ಟು ಸುದ್ದಿಗಳು

ಯುದ್ಧಕೋರ ಅಮೆರಿಕಾದ ಇರಾನ್ ಮೇಲಿನ ದುಸ್ಸಾಹಸ ಫಲ ನೀಡುವುದೇ ಇಲ್ಲ ಪೆಟ್ಟು ಕೊಡುವುದೇ?

ಇರಾನ್- ಅಮೆರಿಕ ಯುದ್ಧದಲ್ಲಿ ಅಮೆರಿಕದ ಕಾಲಾಳು ಆಗಲು ಹೊರಟ ಭಾರತ

ಟ್ರಂಪ್ ಇರಾನ್ ಮೇಲೆ ಬಿದ್ರೆ, ಮೋದಿ ನಮ್ಮ ಮೇಲೆ ಬಿದ್ದವುನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...