Homeಅಂತರಾಷ್ಟ್ರೀಯಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

- Advertisement -
- Advertisement -

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ ‘ಅತ್ಯಂತ ಗಂಭೀರವಾಗಿದೆ’ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ, ಖಾಮಿನೈ ತಮ್ಮ ಕೆಲ ಬೆಂಬಲಿಗರೊಂದಿಗೆ ಮಾತುಕತೆ ನಡೆಸುತ್ತಿರುವುದು ಇದೆ.

ಮೆಹರ್ ಸಂಸ್ಥೆಯು ಮೊದಲ ಬಾರಿಗೆ ಬಿಡುಗಡೆ ಮಾಡಿದ ಈ ವಿಡಿಯೋ, ಖಾಮಿನೈ ಅವರ ಆರೋಗ್ಯ ಮತ್ತು ಅವರು ಇರುವ ಸ್ಥಳದ ಕುರಿತು ಹೆಚ್ಚುತ್ತಿರುವ ಊಹಾಪೋಹಗಳನ್ನು ತಡೆಯುವ ಉದ್ದೇಶವನ್ನು ಹೊಂದಿರುವಂತೆ ತೋರುತ್ತದೆ. ಮೆಹರ್ ಸಂಸ್ಥೆಯು ಇರಾನ್ ಸರ್ಕಾರದ ಪ್ರಾಯೋಜಕತ್ವದಲ್ಲಿರುವ ಮತ್ತು ಇಸ್ಲಾಮಿಕ್ ಡೆವಲಪ್‌ಮೆಂಟ್ ಆರ್ಗನೈಸೇಶನ್‌ನಿಂದ ನಡೆಸಲ್ಪಡುವ ಇರಾನ್‌ನ ಒಂದು ಅರೆ-ಅಧಿಕೃತ ಸುದ್ದಿ ಸಂಸ್ಥೆಯಾಗಿದೆ.

ಖಾಮಿನೈ ಅವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಆರೋಗ್ಯದ ಕುರಿತು ಇರಾನ್‌ನ ನಾಯಕತ್ವದಲ್ಲಿ ಆತಂಕಗಳು ಹುಟ್ಟಿಕೊಂಡಿವೆ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಈ ವಿಡಿಯೋ ಹೊರಬಂದಿದೆ.

ಶುಕ್ರವಾರ (ಆ.7) ಇಸ್ರೇಲಿ ಚಾನೆಲ್ 14, ಇರಾನ್ ಒಳಗಿನ ಮೂಲಗಳನ್ನು ಉಲ್ಲೇಖಿಸಿ ಖಾಮಿನೈ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿ ಮಾಡಿತ್ತು. ಇರಾನ್‌ವೈರ್ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಆಡಳಿತಕ್ಕೆ ಹತ್ತಿರವಿರುವ ಮೂಲಗಳನ್ನು ಉಲ್ಲೇಖಿಸಿ ದಿ ಜೆರುಸಲೆಮ್ ಪೋಸ್ಟ್ ಪ್ರಕಟಿಸಿದ್ದ ಈ ಹಿಂದಿನ ವರದಿಯು ಸಹ ಅವರ ಆರೋಗ್ಯದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿತ್ತು.

ದಿ ಜೆರುಸಲೆಮ್ ಪೋಸ್ಟ್ ಉಲ್ಲೇಖಿಸಿದ ಒಂದು ಮೂಲವು ಒಂದು ಹೆಜ್ಜೆ ಮುಂದೆ ಹೋಗಿ, “ಶೀಘ್ರದಲ್ಲೇ ಅವರ ಹುತಾತ್ಮತೆಯ ಸುದ್ದಿ ಕೇಳಿಬಂದರೂ ನಮಗೆ ಆಶ್ಚರ್ಯವಾಗುವುದಿಲ್ಲ” ಎಂದು ಹೇಳುವ ಮಟ್ಟಿಗೆ ತಲುಪಿತ್ತು.

ಮೆಹರ್ ಸುದ್ದಿ ಸಂಸ್ಥೆಯು ವಿಡಿಯೋ ಬಿಡುಗಡೆ ಮಾಡಿರುವುದು, ಇರಾನ್ ಸರ್ಕಾರದ ನಂಟು ಹೊಂದಿರುವ ಮಾಧ್ಯಮಗಳು ಆ ವರದಿಗಳನ್ನು (ಇಸ್ರೇಲಿ ಮಾಧ್ಯಮಗಳ) ತಳ್ಳಿಹಾಕಲು ಮತ್ತು ಸರ್ವೋಚ್ಚ ನಾಯಕನ ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ಭರವಸೆ ನೀಡಲು ನಡೆಸಿದ ಪ್ರಯತ್ನದಂತೆ ತೋರುತ್ತದೆ. ಆದಾಗ್ಯೂ, ಈ ವಿಡಿಯೋದಲ್ಲಿ ಯಾವುದೇ ದಿನಾಂಕ ಉಲ್ಲೇಖವಿಲ್ಲದ ಕಾರಣ, ಇದರ ನಿಖರವಾದ ಸಮಯ ಅಥವಾ ಸಂದರ್ಭಗಳನ್ನು ಸ್ವತಂತ್ರವಾಗಿ ಖಚಿತಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ವರದಿಗಳು ಹೇಳಿವೆ.

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಹೇಳಿಕೆಯೊಂದು ಮೊಜ್ತಾಬಾ ಖಾಮಿನೈ ಅವರ ಆರೋಗ್ಯದ ಕುರಿತಾದ ಎಲ್ಲಾ ಊಹಾಪೋಹಗಳಿಗೆ ಪುಷ್ಠಿ ನೀಡುವಂತಿದೆ. ಎಎನ್‌ಐ ವರದಿಯ ಪ್ರಕಾರ, ಸರ್ಕಾರಿ ದೂರದರ್ಶನ ಸಂದರ್ಶನವೊಂದರಲ್ಲಿ ಮಾತನಾಡಿದ ಪೆಜೆಶ್ಕಿಯಾನ್, ಖಾಮಿನೈ ಅವರೊಂದಿಗೆ ನೇರ ಸಂವಹನ ನಡೆಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ತಮ್ಮ ತಂದೆ ಆಯತುಲ್ಲಾ ಅಲೀ ಖಾಮಿನೈ ಮರಣ ಹೊಂದಿದ ನಂತರ, 56 ವರ್ಷದ ಇಸ್ಲಾಮಿಕ್ ಧರ್ಮಗುರು ಮೊಜ್ತಾಬಾ ಖಾಮಿನೈ ಅವರು ಇರಾನ್‌ನ ಸರ್ವೋಚ್ಚ ನಾಯಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಹುದ್ದೆಯನ್ನು ವಹಿಸಿಕೊಂಡಾಗಿನಿಂದ, ಅವರು ಯಾವುದೇ ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಕಾಣಿಸಿಕೊಂಡಿಲ್ಲ ಮತ್ತು ಕೇವಲ ಲಿಖಿತ ಹೇಳಿಕೆಗಳ ಮೂಲಕ ಮಾತ್ರ ಸಂವಹನ ನಡೆಸುತ್ತಿದ್ದಾರೆ. ಅವರು ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲೂ ಸಹ ಭಾಗವಹಿಸಿಲ್ಲ.

ಸರ್ವೋಚ್ಚ ನಾಯಕನ ಸುದೀರ್ಘ ಅನುಪಸ್ಥಿತಿಯು ಅವರ ಮರಣದ ಕುರಿತಾದ ಹಿಂದಿನ ಊಹಾಪೋಹಗಳನ್ನು ಪುಷ್ಠಿಗೊಳಿಸುತ್ತಿದೆ. ಆದರೆ, ಈ ಎಲ್ಲಾ ವದಂತಿಗಳನ್ನು ತಳ್ಳಿಹಾಕಿರುವ ಖಾಮಿನೈ ಅವರ ಕಚೇರಿಯು ಸರ್ವೋಚ್ಚ ನಾಯಕರು ಆರೋಗ್ಯವಾಗಿದ್ದಾರೆ ಮತ್ತು ಅವರೇ ಎಲ್ಲಾ ವ್ಯವಹಾರಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಕಳೆದ ಮೇ ತಿಂಗಳಲ್ಲಿ ತಿಳಿಸಿತ್ತು.

“ನಮ್ಮ ಶತ್ರು ಪಡೆಗಳು ಇಂತಹ ಪ್ರತಿಕ್ರಿಯೆಗಳ ಮೂಲಕ ತಮ್ಮ ಪಿತೂರಿಗಳನ್ನು ಮುನ್ನಡೆಸಲು ವದಂತಿಗಳನ್ನು ಹಬ್ಬಿಸುತ್ತಿವೆ ಹಾಗೂ ಆ ಮೂಲಕ ನಮ್ಮಿಂದ ಪ್ರತಿಕ್ರಿಯೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿವೆ” ಎಂದು ಖಾಮಿನೈ ಅವರ ಕಚೇರಿಯ ಅಂತಾರಾಷ್ಟ್ರೀಯ ವ್ಯವಹಾರಗಳ ಉಪ ಮುಖ್ಯಸ್ಥರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...