Homeಅಂತರಾಷ್ಟ್ರೀಯಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

- Advertisement -
- Advertisement -

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ ಮಾಡಿದೆ.

ಇರಾನಿನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಮೆರಿಕ ಇರಾನ್‌ನ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾದ ನಂತರ ಶಾಹಿದ್ ಬಘೈ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಯಿತು. ಆಸ್ಪತ್ರೆಯು ಕ್ಯಾನ್ಸರ್ ಮತ್ತು ರಕ್ತ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ, ವಿಶೇಷವಾಗಿ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿತ್ತು.

“ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಅಮೆರಿಕ ನಡೆಸಿದ ಆಕ್ರಮಣಕಾರಿ ದಾಳಿಯ ನಂತರ, ನಾವು ಆಸ್ಪತ್ರೆಗೆ ದಾಖಲಾದ 211 ರೋಗಿಗಳನ್ನು ವರ್ಗಾಯಿಸಲು ಸಾಧ್ಯವಾಗುತ್ತಿಲ್ಲ” ಎಂದು ಆಸ್ಪತ್ರೆಯ ನಿರ್ದೇಶಕ ಮಜೀದ್ ಬೌಧರ್ ಹೇಳಿದರು.

ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕುಟುಂಬದ ಇತರೆ ಸದಸ್ಯರನ್ನೂ ಸ್ಥಳಾಂತರಿಸಲಾಗಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದ ರೋಗಿಗಳು ಮಾತ್ರ ಆಸ್ಪತ್ರೆಯಲ್ಲಿಯೇ ಇರಿಸಲಾಗಿತ್ತು ಎಂದರು.

ಇದಕ್ಕೂ ಮೊದಲು, ಇರಾನ್ ಸೇನೆಯು ಬಹ್ರೇನ್‌ನಲ್ಲಿರುವ ಶೇಖ್ ಇಸಾ ವಾಯುನೆಲೆಯ ಮೇಲೆ ಡ್ರೋನ್ ದಾಳಿ ನಡೆಸಿದೆ ಎಂದು ಹೇಳಿಕೊಂಡಿದೆ. ಈ ಜಾಗವು ಯುಎಸ್ ಸೇನಾ ಪಡೆಗಳು ಬಳಸುವ ಪೇಟ್ರಿಯಾಟ್ ನೆಲೆಯಾಗಿದ್ದು, ಸೂಪರ್ ಹಾಕ್ ರಾಡಾರ್‌ಗಳಂತಹ ಸಂವಹನ ಮತ್ತು ರಾಡಾರ್ ವ್ಯವಸ್ಥೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ.

ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನ ಮತ್ತೊಂದು ಹೇಳಿಕೆಯಲ್ಲಿ, ಅದೇ ನೆಲೆಯ ಮೇಲೆ “ವಿನಾಶಕಾರಿ ದಾಳಿ”ಯನ್ನು ಘೋಷಿಸಿತು. “ವಾಯು ವಿಚಕ್ಷಣ ಮತ್ತು ನಿಯಂತ್ರಣ ರಾಡಾರ್‌ಗಳ ಜೊತೆಗೆ ಆಕ್ರಮಣಕಾರಿ ಶತ್ರುಗಳ ಫೈಟರ್ ಜೆಟ್‌ಗಳ ಇಂಧನ ಟ್ಯಾಂಕ್ ಪಂಪಿಂಗ್ ಸ್ಟೇಷನ್ ಅನ್ನು ಸಂಪೂರ್ಣವಾಗಿ ನಾಶಪಡಿಸಿದೆ” ಎಂದು ಹೇಳಿಕೊಂಡಿತು.

ಅಹ್ವಾಜ್ ನಗರದ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಳಾಂತರಿಸುವ ಜೊತೆಗೆ ಇಲಾಮ್ ಪ್ರಾಂತ್ಯದ ಗಡಿಯ ಬಳಿ ಕರ್ಬಲಾ ಯಾತ್ರಿಕರಿಗೆ ನೀರು ಉತ್ಪಾದನಾ ಘಟಕದ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿಗಳು ನಡೆದಿವೆ ಎಂದು ಅದು ಹೇಳಿದ್ದು, “ಯುದ್ಧ ಇನ್ನೂ ಮುಂದುವರೆದಿದೆ” ಎಂದು ಹೇಳಿಕೊಂಡಿದೆ. ಐಆರ್‌ಜಿಸಿಯು ಕುವೈತ್ ಮತ್ತು ಜೋರ್ಡಾನ್ ಮೇಲಿನ ದಾಳಿಗಳ ಹೊಣೆಯನ್ನೂ ಹೊತ್ತುಕೊಂಡಿದೆ.

ಕುವೈತ್‌ನಲ್ಲಿ, ತನ್ನ ಪಡೆಗಳು ಅಲಿ ಅಲ್ ಸೇಲಂನಲ್ಲಿರುವ ಯುಎಸ್ ವಾಯುನೆಲೆಯ ಉಪಗ್ರಹ ಸಂವಹನ ಕೇಂದ್ರ ಮತ್ತು ಮುನ್ನೆಚ್ಚರಿಕಾ ರಾಡಾರ್ ಮತ್ತು ಆಶ್-ಶು’ಐಬಾದಲ್ಲಿನ ಯುಎಸ್ ಮಿಲಿಟರಿ ಪಿಯರ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ಕಾರ್ಯಾಚರಣೆಯೊಂದಿಗೆ ಗುರಿಯಾಗಿಸಿಕೊಂಡು ನಾಶಪಡಿಸಿದವು ಎಂದು ಸೇನೆ ಹೇಳಿದೆ.

“ಶತ್ರುಗಳು ಪ್ಯಾಲೆಸ್ತೀನ್, ಲೆಬನಾನ್, ಇರಾನ್ ಮತ್ತು ಯೆಮೆನ್ ಜನರ ವಿರುದ್ಧ ಆಕ್ರಮಣ ಮಾಡಲು ನಿಮ್ಮ ಭೂಮಿಯನ್ನು ಬಳಸಲು ಬಿಡಬೇಡಿ” ಎಂದು ಕುವೈತ್ ಜನರಲ್ಲಿ ಇರಾನ್‌ ಮನವಿ ಮಾಡಿದೆ.

“ಅಮೆರಿಕದ ದುಷ್ಟತನಗಳ ಅಂತ್ಯದ ಆಧಾರದ ಮೇಲೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕೆ ಷರತ್ತುಬದ್ಧವಾಗಿದೆ” ಎಂದು ಇರಾನ್‌ ಕರೆ ನೀಡಿದ್ದು, ಈ ಪ್ರದೇಶಗಳಿಂದ ಅಮೆರಿಕವನ್ನು ಹಿಂದೆ ಸರಿಯುವಂತೆ ಮಾಡಬೇಕು ಎಂದು ನೆರೆ ರಾಷ್ಟ್ರಗಳನ್ನು ಒತ್ತಾಯಿಸಿತು.

ಅಮೆರಿಕದ ದಾಳಿಗಳು ಮುಂದುವರಿದರೆ ಅವರ ಎಲ್ಲಾ ನೆಲೆಗಳನ್ನು ‘ಪುಡಿಮಾಡುವುದಾಗಿ’ ಇರಾನಿನ ಮಿಲಿಟರಿ ವಕ್ತಾರ ಬೆದರಿಕೆ ಹಾಕಿದ್ದಾರೆ.

ಇರಾನ್‌ನ ಖತಮ್ ಅಲ್-ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿಯ ವಕ್ತಾರ ಬ್ರಿಗೇಡಿಯರ್ ಜನರಲ್ ಇಬ್ರಾಹಿಂ ಝೋಲ್ಫಾಘರಿ, ಇರಾನ್ ಯುದ್ಧನೆಲೆಗಳ ಮೇಲೆ ಯುಎಸ್ ನಡೆಯುಸವ ಯಾವದೇ ದಾಳಿಗಳು ಈ ಪ್ರದೇಶದಲ್ಲಿ ದೊಡ್ಡ ವಿನಾಶಕ್ಕೆ ಕಾರಣವಾಗುತ್ತವೆ ಎಂದು ಬೆದರಿಕೆ ಹಾಕಿದ್ದಾರೆ.

“ಪಶ್ಚಿಮ ಏಷಿಯಾ ಪ್ರದೇಶದಲ್ಲಿರುವ ಅಮೆರಿಕದ ಎಲ್ಲ ನೆಲೆಗಳು ಇಸ್ಲಾಮಿಕ್ ಗಣರಾಜ್ಯ ಇರಾನ್‌ನ ಪ್ರಬಲ ಸಶಸ್ತ್ರ ಪಡೆಗಳ ಉಕ್ಕಿನ ಹೊಡೆತಗಳಿಂದ ಪುಡಿಪುಡಿಯಾಗುತ್ತವೆ. ಅದರ ಯಾವುದೇ ಕುರುಹು ಉಳಿಯುವುದಿಲ್ಲ, ಅವು ಮೊದಲಿನಿಂದಲೂ ಅಸ್ತಿತ್ವದಲ್ಲಿಲ್ಲ ಎಂಬಂತೆ ಮಾಡುತ್ತೇವೆ” ಎಂದು ಹೇಳಿದರು.

“ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಹಸ್ತಕ್ಷೇಪಕ್ಕೆ ಇರಾನ್ ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದರು. “ಯಾವುದೇ ಸಂದರ್ಭಗಳಲ್ಲಿ ಮತ್ತು ಯಾವುದೇ ರೀತಿಯಲ್ಲಿ ವಿದೇಶಿ, ಪ್ರಾದೇಶಿಕೇತರ ದೇಶವಾಗಿ ಅಮೆರಿಕವು ಹೊರ್ಮುಜ್ ಜಲಸಂಧಿಯಲ್ಲಿ ಹಸ್ತಕ್ಷೇಪ ಮಾಡಲು ನಾವು ಅನುಮತಿಸುವುದಿಲ್ಲ. ಇದು ಇರಾನ್‌ನ ಅಜೇಯ ಕೆಂಪು ರೇಖೆ” ಎಂದು ಅವರು ಹೇಳಿಕೊಂಡಿದ್ದಾರೆ.

ಹಡಗುಗಳಿಗೆ ನಾವಿಕರನ್ನು ನಿಯೋಜಿಸದಂತೆ ಹಡಗು ಮಾಲೀಕರಿಗೆ ಕೇಂದ್ರ ಸರ್ಕಾರದ ಮನವಿ

ಯುಎಸ್ ಮತ್ತು ಇರಾನ್ ನಡುವಿನ ಯುದ್ಧ ತೀವ್ರಗೊಳ್ಳುತ್ತಿದ್ದಂತೆ ಹಾರ್ಮುಜ್ ಜಲಸಂಧಿಯ ಮೂಲಕ ಹೋಗುವ ಹಡಗುಗಳಲ್ಲಿ ತನ್ನ ನಾವಿಕರನ್ನು ನಿಯೋಜಿಸದಂತೆ ಭಾರತ ಬುಧವಾರ ಹಡಗು ವ್ಯವಸ್ಥಾಪಕರು, ನೇಮಕಾತಿ ಕಂಪನಿಗಳು ಮತ್ತು ಹಡಗು ಮಾಲೀಕರಿಗೆ ಸರ್ಕಾರದ ಆದೇಶಿಸಿದೆ.

“ಮುಂದಿನ ಆದೇಶದವರೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಹಡಗುಗಳಲ್ಲಿ ಭಾರತೀಯ ನಾವಿಕರನ್ನು ನಿಯೋಜಿಸಲಾಗುವುದಿಲ್ಲ” ಎಂದು ಶಿಪ್ಪಿಂಗ್ ನಿರ್ದೇಶನಾಲಯವು ಆದೇಶದಲ್ಲಿ ತಿಳಿಸಿದೆ.

ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಹೆಚ್ಚಿದ ಬಳಿಕ ಕಳೆದ ಮೂರು ದಿನಗಳಲ್ಲೇ ಈ ಪ್ರದೇಶದಲ್ಲಿ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. “ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ … ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಡಗುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ನಾವಿಕರ ಹಿತಾಸಕ್ತಿಗಳನ್ನು ಕಾಪಾಡಲು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವೆಂದು ನಿರ್ದೇಶನಾಲಯ ಪರಿಗಣಿಸುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...